4:33 PM Wednesday29 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: 3991 ಪುಟಗಳ ಸುದೀರ್ಘ ಚಾರ್ಜ್​ಶೀಟ್​ ನ್ಯಾಯಾಲಯಕ್ಕೆ ಸಲ್ಲಿಕೆ

04/09/2024, 16:38

ಬೆಂಗಳೂರು(reporterkarnataka.com): ರೇಣುಕಾಸ್ವಾಮಿ ಅಮಾನುಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ 3,991 ಪುಟಗಳ ಸುದೀರ್ಘ ಚಾರ್ಜ್​ಶೀಟ್​ ಸಲ್ಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 17 ಮಂದಿ
ಆರೋಪಿಗಳ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಸಲಾಗಿದೆ. 3 ಪ್ರತ್ಯಕ್ಷ ಸಾಕ್ಷ್ಯಗಳು, ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ಹಾಗೂ ಕೇಂದ್ರೀಯ ವಿಧಿ ವಿಜ್ಞಾನ ಪ್ರಯೋಗಾಲಯ (ಸಿಎಫ್ಎಸ್ಎಲ್) ದಿಂದ ಪಡೆದಿರುವ 8 ವರದಿಗಳನ್ನೂ
ಬಗ್ಗೆ ಚಾರ್ಜ್ ಶೀಟ್ ನಲ್ಲಿ
ಉಲ್ಲೇಖಿಸಲಾಗಿದೆ. ತನಿಖೆ ಇನ್ನೂ ಸಹ ಪೂರ್ಣಗೊಂಡಿಲ್ಲದಿರುವುದರಿಂದ ಸಿಆರ್​ಪಿಸಿ 173(8) ಅಡಿ ನ್ಯಾಯಾಲಯಕ್ಕೆ ಪ್ರಾಥಮಿಕ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ.
ಪ್ರಕರಣದ ಎ2 ಆರೋಪಿಯಾದ ಕನ್ನಡದ ಪ್ರಸಿದ್ದ ನಟ ದರ್ಶನ್ ಅವರನ್ನು ಚಾರ್ಜ್​ಶೀಟ್​ನಲ್ಲಿ ಎ1 ಆರೋಪಿಯಾಗಿ ಬದಲಿಸಬಹುದು ಎನ್ನಲಾಗಿತ್ತು. ಆದರೆ, ಚಾರ್ಜ್​ಶೀಟ್​ನಲ್ಲಿ ಆರೋಪಿಗಳನ್ನು ಯಥಾವತ್ ಮುಂದುವರೆಸಲಾಗಿದೆ.
ರೇಣುಕಾಸ್ವಾಮಿಯ ಹತ್ಯೆ ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡ, ಹತ್ಯೆಯ ನಡೆದ ಸ್ಥಳದಲ್ಲಿ ಹಾಜರಿದ್ದು ರೇಣುಕಾಸ್ವಾಮಿಗೆ ಚಪ್ಪಲಿಯಲ್ಲಿ ಹೊಡೆದಿದ್ದಾರೆ. ಆ ಸ್ಥಳದಲ್ಲಿ ಆ್ಯಕ್ಟಿವ್ ಆಗಿದ್ದ ಪವಿತ್ರ ಗೌಡ ಅವರ ಮೊಬೈಲ್ ನಂಬರ್ ಅವರ ಭಾಗಿಯ ಕುರಿತು ಸಾಕ್ಷ್ಯವಾಗಿದೆ ಎಂದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು