5:33 PM Saturday10 - January 2026
ಬ್ರೇಕಿಂಗ್ ನ್ಯೂಸ್
ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ…

ಇತ್ತೀಚಿನ ಸುದ್ದಿ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: 3991 ಪುಟಗಳ ಸುದೀರ್ಘ ಚಾರ್ಜ್​ಶೀಟ್​ ನ್ಯಾಯಾಲಯಕ್ಕೆ ಸಲ್ಲಿಕೆ

04/09/2024, 16:38

ಬೆಂಗಳೂರು(reporterkarnataka.com): ರೇಣುಕಾಸ್ವಾಮಿ ಅಮಾನುಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ 3,991 ಪುಟಗಳ ಸುದೀರ್ಘ ಚಾರ್ಜ್​ಶೀಟ್​ ಸಲ್ಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 17 ಮಂದಿ
ಆರೋಪಿಗಳ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಸಲಾಗಿದೆ. 3 ಪ್ರತ್ಯಕ್ಷ ಸಾಕ್ಷ್ಯಗಳು, ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ಹಾಗೂ ಕೇಂದ್ರೀಯ ವಿಧಿ ವಿಜ್ಞಾನ ಪ್ರಯೋಗಾಲಯ (ಸಿಎಫ್ಎಸ್ಎಲ್) ದಿಂದ ಪಡೆದಿರುವ 8 ವರದಿಗಳನ್ನೂ
ಬಗ್ಗೆ ಚಾರ್ಜ್ ಶೀಟ್ ನಲ್ಲಿ
ಉಲ್ಲೇಖಿಸಲಾಗಿದೆ. ತನಿಖೆ ಇನ್ನೂ ಸಹ ಪೂರ್ಣಗೊಂಡಿಲ್ಲದಿರುವುದರಿಂದ ಸಿಆರ್​ಪಿಸಿ 173(8) ಅಡಿ ನ್ಯಾಯಾಲಯಕ್ಕೆ ಪ್ರಾಥಮಿಕ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ.
ಪ್ರಕರಣದ ಎ2 ಆರೋಪಿಯಾದ ಕನ್ನಡದ ಪ್ರಸಿದ್ದ ನಟ ದರ್ಶನ್ ಅವರನ್ನು ಚಾರ್ಜ್​ಶೀಟ್​ನಲ್ಲಿ ಎ1 ಆರೋಪಿಯಾಗಿ ಬದಲಿಸಬಹುದು ಎನ್ನಲಾಗಿತ್ತು. ಆದರೆ, ಚಾರ್ಜ್​ಶೀಟ್​ನಲ್ಲಿ ಆರೋಪಿಗಳನ್ನು ಯಥಾವತ್ ಮುಂದುವರೆಸಲಾಗಿದೆ.
ರೇಣುಕಾಸ್ವಾಮಿಯ ಹತ್ಯೆ ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡ, ಹತ್ಯೆಯ ನಡೆದ ಸ್ಥಳದಲ್ಲಿ ಹಾಜರಿದ್ದು ರೇಣುಕಾಸ್ವಾಮಿಗೆ ಚಪ್ಪಲಿಯಲ್ಲಿ ಹೊಡೆದಿದ್ದಾರೆ. ಆ ಸ್ಥಳದಲ್ಲಿ ಆ್ಯಕ್ಟಿವ್ ಆಗಿದ್ದ ಪವಿತ್ರ ಗೌಡ ಅವರ ಮೊಬೈಲ್ ನಂಬರ್ ಅವರ ಭಾಗಿಯ ಕುರಿತು ಸಾಕ್ಷ್ಯವಾಗಿದೆ ಎಂದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು