3:18 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: 3991 ಪುಟಗಳ ಸುದೀರ್ಘ ಚಾರ್ಜ್​ಶೀಟ್​ ನ್ಯಾಯಾಲಯಕ್ಕೆ ಸಲ್ಲಿಕೆ

04/09/2024, 16:38

ಬೆಂಗಳೂರು(reporterkarnataka.com): ರೇಣುಕಾಸ್ವಾಮಿ ಅಮಾನುಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ 3,991 ಪುಟಗಳ ಸುದೀರ್ಘ ಚಾರ್ಜ್​ಶೀಟ್​ ಸಲ್ಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 17 ಮಂದಿ
ಆರೋಪಿಗಳ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಸಲಾಗಿದೆ. 3 ಪ್ರತ್ಯಕ್ಷ ಸಾಕ್ಷ್ಯಗಳು, ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ಹಾಗೂ ಕೇಂದ್ರೀಯ ವಿಧಿ ವಿಜ್ಞಾನ ಪ್ರಯೋಗಾಲಯ (ಸಿಎಫ್ಎಸ್ಎಲ್) ದಿಂದ ಪಡೆದಿರುವ 8 ವರದಿಗಳನ್ನೂ
ಬಗ್ಗೆ ಚಾರ್ಜ್ ಶೀಟ್ ನಲ್ಲಿ
ಉಲ್ಲೇಖಿಸಲಾಗಿದೆ. ತನಿಖೆ ಇನ್ನೂ ಸಹ ಪೂರ್ಣಗೊಂಡಿಲ್ಲದಿರುವುದರಿಂದ ಸಿಆರ್​ಪಿಸಿ 173(8) ಅಡಿ ನ್ಯಾಯಾಲಯಕ್ಕೆ ಪ್ರಾಥಮಿಕ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ.
ಪ್ರಕರಣದ ಎ2 ಆರೋಪಿಯಾದ ಕನ್ನಡದ ಪ್ರಸಿದ್ದ ನಟ ದರ್ಶನ್ ಅವರನ್ನು ಚಾರ್ಜ್​ಶೀಟ್​ನಲ್ಲಿ ಎ1 ಆರೋಪಿಯಾಗಿ ಬದಲಿಸಬಹುದು ಎನ್ನಲಾಗಿತ್ತು. ಆದರೆ, ಚಾರ್ಜ್​ಶೀಟ್​ನಲ್ಲಿ ಆರೋಪಿಗಳನ್ನು ಯಥಾವತ್ ಮುಂದುವರೆಸಲಾಗಿದೆ.
ರೇಣುಕಾಸ್ವಾಮಿಯ ಹತ್ಯೆ ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡ, ಹತ್ಯೆಯ ನಡೆದ ಸ್ಥಳದಲ್ಲಿ ಹಾಜರಿದ್ದು ರೇಣುಕಾಸ್ವಾಮಿಗೆ ಚಪ್ಪಲಿಯಲ್ಲಿ ಹೊಡೆದಿದ್ದಾರೆ. ಆ ಸ್ಥಳದಲ್ಲಿ ಆ್ಯಕ್ಟಿವ್ ಆಗಿದ್ದ ಪವಿತ್ರ ಗೌಡ ಅವರ ಮೊಬೈಲ್ ನಂಬರ್ ಅವರ ಭಾಗಿಯ ಕುರಿತು ಸಾಕ್ಷ್ಯವಾಗಿದೆ ಎಂದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು