10:39 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: 3991 ಪುಟಗಳ ಸುದೀರ್ಘ ಚಾರ್ಜ್​ಶೀಟ್​ ನ್ಯಾಯಾಲಯಕ್ಕೆ ಸಲ್ಲಿಕೆ

04/09/2024, 16:38

ಬೆಂಗಳೂರು(reporterkarnataka.com): ರೇಣುಕಾಸ್ವಾಮಿ ಅಮಾನುಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ 3,991 ಪುಟಗಳ ಸುದೀರ್ಘ ಚಾರ್ಜ್​ಶೀಟ್​ ಸಲ್ಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 17 ಮಂದಿ
ಆರೋಪಿಗಳ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಸಲಾಗಿದೆ. 3 ಪ್ರತ್ಯಕ್ಷ ಸಾಕ್ಷ್ಯಗಳು, ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ಹಾಗೂ ಕೇಂದ್ರೀಯ ವಿಧಿ ವಿಜ್ಞಾನ ಪ್ರಯೋಗಾಲಯ (ಸಿಎಫ್ಎಸ್ಎಲ್) ದಿಂದ ಪಡೆದಿರುವ 8 ವರದಿಗಳನ್ನೂ
ಬಗ್ಗೆ ಚಾರ್ಜ್ ಶೀಟ್ ನಲ್ಲಿ
ಉಲ್ಲೇಖಿಸಲಾಗಿದೆ. ತನಿಖೆ ಇನ್ನೂ ಸಹ ಪೂರ್ಣಗೊಂಡಿಲ್ಲದಿರುವುದರಿಂದ ಸಿಆರ್​ಪಿಸಿ 173(8) ಅಡಿ ನ್ಯಾಯಾಲಯಕ್ಕೆ ಪ್ರಾಥಮಿಕ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ.
ಪ್ರಕರಣದ ಎ2 ಆರೋಪಿಯಾದ ಕನ್ನಡದ ಪ್ರಸಿದ್ದ ನಟ ದರ್ಶನ್ ಅವರನ್ನು ಚಾರ್ಜ್​ಶೀಟ್​ನಲ್ಲಿ ಎ1 ಆರೋಪಿಯಾಗಿ ಬದಲಿಸಬಹುದು ಎನ್ನಲಾಗಿತ್ತು. ಆದರೆ, ಚಾರ್ಜ್​ಶೀಟ್​ನಲ್ಲಿ ಆರೋಪಿಗಳನ್ನು ಯಥಾವತ್ ಮುಂದುವರೆಸಲಾಗಿದೆ.
ರೇಣುಕಾಸ್ವಾಮಿಯ ಹತ್ಯೆ ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡ, ಹತ್ಯೆಯ ನಡೆದ ಸ್ಥಳದಲ್ಲಿ ಹಾಜರಿದ್ದು ರೇಣುಕಾಸ್ವಾಮಿಗೆ ಚಪ್ಪಲಿಯಲ್ಲಿ ಹೊಡೆದಿದ್ದಾರೆ. ಆ ಸ್ಥಳದಲ್ಲಿ ಆ್ಯಕ್ಟಿವ್ ಆಗಿದ್ದ ಪವಿತ್ರ ಗೌಡ ಅವರ ಮೊಬೈಲ್ ನಂಬರ್ ಅವರ ಭಾಗಿಯ ಕುರಿತು ಸಾಕ್ಷ್ಯವಾಗಿದೆ ಎಂದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು