4:53 AM Saturday25 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: 3991 ಪುಟಗಳ ಸುದೀರ್ಘ ಚಾರ್ಜ್​ಶೀಟ್​ ನ್ಯಾಯಾಲಯಕ್ಕೆ ಸಲ್ಲಿಕೆ

04/09/2024, 16:38

ಬೆಂಗಳೂರು(reporterkarnataka.com): ರೇಣುಕಾಸ್ವಾಮಿ ಅಮಾನುಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ 3,991 ಪುಟಗಳ ಸುದೀರ್ಘ ಚಾರ್ಜ್​ಶೀಟ್​ ಸಲ್ಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 17 ಮಂದಿ
ಆರೋಪಿಗಳ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಸಲಾಗಿದೆ. 3 ಪ್ರತ್ಯಕ್ಷ ಸಾಕ್ಷ್ಯಗಳು, ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ಹಾಗೂ ಕೇಂದ್ರೀಯ ವಿಧಿ ವಿಜ್ಞಾನ ಪ್ರಯೋಗಾಲಯ (ಸಿಎಫ್ಎಸ್ಎಲ್) ದಿಂದ ಪಡೆದಿರುವ 8 ವರದಿಗಳನ್ನೂ
ಬಗ್ಗೆ ಚಾರ್ಜ್ ಶೀಟ್ ನಲ್ಲಿ
ಉಲ್ಲೇಖಿಸಲಾಗಿದೆ. ತನಿಖೆ ಇನ್ನೂ ಸಹ ಪೂರ್ಣಗೊಂಡಿಲ್ಲದಿರುವುದರಿಂದ ಸಿಆರ್​ಪಿಸಿ 173(8) ಅಡಿ ನ್ಯಾಯಾಲಯಕ್ಕೆ ಪ್ರಾಥಮಿಕ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ.
ಪ್ರಕರಣದ ಎ2 ಆರೋಪಿಯಾದ ಕನ್ನಡದ ಪ್ರಸಿದ್ದ ನಟ ದರ್ಶನ್ ಅವರನ್ನು ಚಾರ್ಜ್​ಶೀಟ್​ನಲ್ಲಿ ಎ1 ಆರೋಪಿಯಾಗಿ ಬದಲಿಸಬಹುದು ಎನ್ನಲಾಗಿತ್ತು. ಆದರೆ, ಚಾರ್ಜ್​ಶೀಟ್​ನಲ್ಲಿ ಆರೋಪಿಗಳನ್ನು ಯಥಾವತ್ ಮುಂದುವರೆಸಲಾಗಿದೆ.
ರೇಣುಕಾಸ್ವಾಮಿಯ ಹತ್ಯೆ ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡ, ಹತ್ಯೆಯ ನಡೆದ ಸ್ಥಳದಲ್ಲಿ ಹಾಜರಿದ್ದು ರೇಣುಕಾಸ್ವಾಮಿಗೆ ಚಪ್ಪಲಿಯಲ್ಲಿ ಹೊಡೆದಿದ್ದಾರೆ. ಆ ಸ್ಥಳದಲ್ಲಿ ಆ್ಯಕ್ಟಿವ್ ಆಗಿದ್ದ ಪವಿತ್ರ ಗೌಡ ಅವರ ಮೊಬೈಲ್ ನಂಬರ್ ಅವರ ಭಾಗಿಯ ಕುರಿತು ಸಾಕ್ಷ್ಯವಾಗಿದೆ ಎಂದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು