1:03 AM Monday20 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ…

ಇತ್ತೀಚಿನ ಸುದ್ದಿ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: 3991 ಪುಟಗಳ ಸುದೀರ್ಘ ಚಾರ್ಜ್​ಶೀಟ್​ ನ್ಯಾಯಾಲಯಕ್ಕೆ ಸಲ್ಲಿಕೆ

04/09/2024, 16:38

ಬೆಂಗಳೂರು(reporterkarnataka.com): ರೇಣುಕಾಸ್ವಾಮಿ ಅಮಾನುಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ 3,991 ಪುಟಗಳ ಸುದೀರ್ಘ ಚಾರ್ಜ್​ಶೀಟ್​ ಸಲ್ಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 17 ಮಂದಿ
ಆರೋಪಿಗಳ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಸಲಾಗಿದೆ. 3 ಪ್ರತ್ಯಕ್ಷ ಸಾಕ್ಷ್ಯಗಳು, ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ಹಾಗೂ ಕೇಂದ್ರೀಯ ವಿಧಿ ವಿಜ್ಞಾನ ಪ್ರಯೋಗಾಲಯ (ಸಿಎಫ್ಎಸ್ಎಲ್) ದಿಂದ ಪಡೆದಿರುವ 8 ವರದಿಗಳನ್ನೂ
ಬಗ್ಗೆ ಚಾರ್ಜ್ ಶೀಟ್ ನಲ್ಲಿ
ಉಲ್ಲೇಖಿಸಲಾಗಿದೆ. ತನಿಖೆ ಇನ್ನೂ ಸಹ ಪೂರ್ಣಗೊಂಡಿಲ್ಲದಿರುವುದರಿಂದ ಸಿಆರ್​ಪಿಸಿ 173(8) ಅಡಿ ನ್ಯಾಯಾಲಯಕ್ಕೆ ಪ್ರಾಥಮಿಕ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ.
ಪ್ರಕರಣದ ಎ2 ಆರೋಪಿಯಾದ ಕನ್ನಡದ ಪ್ರಸಿದ್ದ ನಟ ದರ್ಶನ್ ಅವರನ್ನು ಚಾರ್ಜ್​ಶೀಟ್​ನಲ್ಲಿ ಎ1 ಆರೋಪಿಯಾಗಿ ಬದಲಿಸಬಹುದು ಎನ್ನಲಾಗಿತ್ತು. ಆದರೆ, ಚಾರ್ಜ್​ಶೀಟ್​ನಲ್ಲಿ ಆರೋಪಿಗಳನ್ನು ಯಥಾವತ್ ಮುಂದುವರೆಸಲಾಗಿದೆ.
ರೇಣುಕಾಸ್ವಾಮಿಯ ಹತ್ಯೆ ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡ, ಹತ್ಯೆಯ ನಡೆದ ಸ್ಥಳದಲ್ಲಿ ಹಾಜರಿದ್ದು ರೇಣುಕಾಸ್ವಾಮಿಗೆ ಚಪ್ಪಲಿಯಲ್ಲಿ ಹೊಡೆದಿದ್ದಾರೆ. ಆ ಸ್ಥಳದಲ್ಲಿ ಆ್ಯಕ್ಟಿವ್ ಆಗಿದ್ದ ಪವಿತ್ರ ಗೌಡ ಅವರ ಮೊಬೈಲ್ ನಂಬರ್ ಅವರ ಭಾಗಿಯ ಕುರಿತು ಸಾಕ್ಷ್ಯವಾಗಿದೆ ಎಂದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು