9:40 PM Tuesday19 - August 2025
ಬ್ರೇಕಿಂಗ್ ನ್ಯೂಸ್
ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ! Kodagu | ಸೋಮವಾರಪೇಟೆ: ಯುವಕನ ಆತ್ಮಹತ್ಯೆ; 3 ದಿನಗಳ ಹುಡುಕಾಟದ ಬಳಿಕ ಮೃತದೇಹ… ರಾಜ್ಯದ ಮೊದಲ ‘ವಿದೇಶ ಅಧ್ಯಯನ ಎಕ್ಸ್‌ಪೋ’ ಯಶಸ್ವಿ: 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು… ಸಂಸೆ ಯುವಕ ಆತ್ಮಹತ್ಯೆ ಪ್ರಕರಣ: ಕುದುರೆಮುಖ ಪೊಲೀಸ್ ಕಾನ್ ಸ್ಟೇಬಲ್ ಸಿದ್ದೇಶ್ ಗೋವಾದಲ್ಲಿ… ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ: ಶೃಂಗೇರಿ ಅಕ್ಷರಶಃ ಜಲಾವೃತ; ನಾಳೆ ಶಾಲೆಗಳಿಗೆ ರಜೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ ಅಬ್ಬರ: ಮಲೆನಾಡು ಅಕ್ಷರಶಃ ಜಲಾವೃತ ಆರ್‌ಎಸ್‌ಎಸ್‌ನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ರಿಪೋರ್ಟರ್ ಕರ್ನಾಟಕ ವಾಯ್ಸ್ ಆಫ್ ಆರಾಧನಾ: ಜುಲೈ ತಿಂಗಳ ಟಾಪರ್ ಆಗಿ ಬ್ರಿಶಾ ಬಿ. ಇರಾ ಹಾಗೂ ಪ್ರಗ್ಯ ಆಯ್ಕೆ

19/08/2025, 21:23

ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಜುಲೈ ತಿಂಗಳ ಟಾಪರ್ ಆಗಿ ಬ್ರಿಶಾ ಬಿ. ಇರಾ ಹಾಗೂ ಪ್ರಗ್ಯ ಆಯ್ಕೆಯಾಗಿದ್ದಾರೆ
ಬ್ರಿಶಾ ಬಿ.ಇರಾ ಬಾಲೆಗೆ 6 ವರ್ಷ. ಈಕೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಇರಾ ಗ್ರಾಮದ ಭಾಸ್ಕರ್ ಎಂ. ಇರಾ ಮತ್ತು ಸಂಜನಾ ಬಿ.ಇರಾ ಅವರ ಪುತ್ರಿ. ಈಕೆ ಬಿಜಾಪುರದ ವಿದ್ಯಾ ವಿಕಾಸ ಮಂದಿರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ಓದುತ್ತಿದ್ದಾಳೆ. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಭರತನಾಟ್ಯದಲ್ಲಿ ತನ್ನ ಮೂರುವರೆ ವರ್ಷದಲ್ಲಿ ವೇದಿಕೆ ಹತ್ತಿದ ಇವಳು ನೃತ್ಯ ಸ್ಪರ್ಧೆ, ಚದ್ಮವೇಷ ಮತ್ತು ಭಾಷಣ ಸ್ಪರ್ಧೆಯಲ್ಲಿ ಬಹುಮಾನ ಪಡೆದಿದ್ದಾಳೆ.ಇವಳು ತನ್ನ ಭರತನಾಟ್ಯ ಅಭ್ಯಾಸವನ್ನು ಪೂರ್ವಿ ಎನ್. ತಳ್ವಾರ್ ಅವರಲ್ಲಿ ಅಭ್ಯಾಸವನ್ನು ಮಾಡುತ್ತಿದ್ದಾಳೆ. ಭರತನಾಟ್ಯದಲ್ಲಿ 2024ರಲ್ಲಿ ಮೈಸೂರಿನಲ್ಲಿ ನಡೆಯುತ್ತಿರುವ ಲಾಸ್ಯ ನವರಸ ಉತ್ಸಾಹದಲ್ಲಿ ರಾಜ್ಯಸಂಗಮ ಪ್ರಶಸ್ತಿ, ಬೆಂಗಳೂರಿನಲ್ಲಿ ನಡೆದ ಡ್ಯಾನ್ಸ್ ರಿದಂ 2025 ಭಾಗವಹಿಸಿ ಪ್ರಶಸ್ತಿಯನ್ನು ಪಡೆದು ಕೀರ್ತಿ ತಂದಿದ್ದಾಳೆ. ಮಂಗಳೂರು, ಬೆಳಗಾವಿ, ಅಥಣಿ, ಮುಧೋಳ್, ವಿಜಯಪುರ ಮತ್ತು ವಾಯ್ಸ್ ಆಫ್ ಆರಾಧನಾ ತಂಡದ ಸಹಯೋಗದಿಂದ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ತನ್ನ ಸೇವೆಯನ್ನು ನೀಡಿದ್ದಾಳೆ. ಹಲವಾರು ಕಡೆ ಭರತನಾಟ್ಯ ಪ್ರದರ್ಶನ ಮಾಡಿ ಅಭಿನಂದನ ಪತ್ರ ಪಡೆದುಕೊಂಡಿದ್ದು ಆನ್ಲೈನ್ ಸ್ಪರ್ಧೆಯಲ್ಲಿಯೂ ಪ್ರಥಮ ಸ್ಥಾನವನ್ನು ಪಡೆದಿದ್ದಾಳೆ. ಬ್ರಿಶಾ ನಾಟ್ಯದಲ್ಲಿ ಮಾತ್ರವಲ್ಲದೆ ಚಿನ್ನರ ಚಿತ್ತಾರ ಡ್ರಾಯಿಂಗ್ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದಿದ್ದಾರೆ.


ವಾಯ್ಸ್ ಅಪ್ ಆರಾಧನೆ ತಂಡದಲ್ಲಿ ಭಾಗವಹಿಸಿ ಮಾರ್ಚ್ ಮತ್ತು ಜುಲೈ ತಿಂಗಳ ವಿಜೇತರಾಗಿ ಹೊರಹೊಮ್ಮಿ ಇರುವುದು ವಿಶೇಷ. ಈಕೆಗೆ ಹಲವಾರು ಪ್ರಶಸ್ತಿಗಳು ದೊರಕಿದ್ದು ಕರ್ನಾಟಕ ರಾಜ್ಯ ಕಲಾವಿದರ ರಕ್ಷಣಾ ವೇದಿಕೆ ಬೆಂಗಳೂರು ಹಾಗೂ ಗಡಿನಾಡು ನುಡಿ ರಾಷ್ಟ್ರೀಯ ವಾರ್ತ ಪತ್ರಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಗಡಿನಾಡು ಸಾಂಸ್ಕೃತಿಕ ಉತ್ಸವ 2025 ಕರ್ನಾಟಕ ಬಾಲ್ಯ ನಾಟ್ಯ ರಾಣಿ ಪ್ರಶಸ್ತಿ ಅಲ್ಲದೆ ಸಮಾಜ ಕಲ್ಯಾಣ ಸಂಸ್ಥೆ ಬೆಂಗಳೂರು ಹಾಗೂ ವಿಶ್ವ ಕನ್ನಡ ಜಾನಪದ ಪರಿಷತ್ತು ಬೆಂಗಳೂರು ಇವರ ಆಶ್ರಯದಲ್ಲಿ ಸುವರ್ಣ ಕರ್ನಾಟಕ ನಾಟ್ಯಮಯೂರಿ ಪ್ರತಿಭಾ ಪುರಸ್ಕಾರ ಮತ್ತು ಕಲಾ ರತ್ನ ಅವಾರ್ಡ್ ಲಭಿಸಿದೆ. 2025ರ ಮೇ ಯಲ್ಲಿ ನಡೆದ ಅಖಿಲ ಭಾರತ ಸಾಂಸ್ಕೃತಿಕ ಸಂಘ ಪುಣೆಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಎರಡನೇ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುವುದು ತುಂಬಾ ಹೆಮ್ಮೆಯ ವಿಷಯವಾಗಿದೆ.
ಡಾ.ದೇವಿಪ್ರಸಾದ್ ಹಾಗೂ ಆಶಾಲತಾ ದಂಪತಿಯ ಪುತ್ರಿ ಪ್ರಗ್ಯ. ಬಜಪೆ ನಿವಾಸಿಯಾದ ಈಕೆ ಮೇರಿಹಿಲ್ ನ ಮೌಂಟ್ ಕಾರ್ಮೆಲ್ ಸೆಂಟ್ರಲ್ ಸ್ಕೂಲ್ ನಲ್ಲಿ 2ನೇ ತರಗತಿಯಲ್ಲಿ ಓದುತ್ತಿದ್ದಾಳೆ. ಬಾಲ್ಯದಿಂದಲೇ ಕಲೆಯಲ್ಲಿ ವಿಶೇಷವಾದ ಆಸಕ್ತಿ ಹೊಂದಿದ್ದಳು. ಭರತನಾಟ್ಯ, ಸಂಗೀತ, ಯಕ್ಷನ್ರತ್ಯ ನೃತ್ಯ ಡ್ರಾಮ ಇವೆಲ್ಲದರಲ್ಲೂ ತನ್ನನ್ನು ತಾನು ಮೈಗೂಡಿಸಿಕೊಂಡಿದ್ದಾಳೆ. ಟಾಕೀಸ್ ಆ್ಯಪ್ ನಲ್ಲಿ ಬರುವ ಡ್ರಾಮ ದಲ್ಲಿ ಫೈನಲ್ ಸೆಲೆಕ್ಟ್ ಆಗಿದ್ದಾಳೆ. ಕಿರಿಕ್ ಕಿಡ್ ಎಪಿಸೋಡ್ ನಲ್ಲಿ ವಿನ್ನರ್ ಆಗಿದ್ದಾಳೆ. ಭೀಮ ಜುವೆಲ್ಲರಿ ಜಾಹಿರಾತಿನಲ್ಲಿ ಕಾಣಿಸಿಕೊಂಡಿದ್ದಾಳೆ. ಟ್ಯಾಲೆಂಟ್ ಶೋ ಮುದ್ದು ಕಂದ, ಕೃಷ್ಣ ವೇಷ,ಅಭಿನಯ ಹೀಗೆ ಹಲವಾರು ವೇದಿಕೆಯಲ್ಲಿ ತನ್ನ ಪ್ರತಿಭೆಯ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾಳೆ. ತನ್ನ 7ನೇ ವಯಸ್ಸಿನಲ್ಲಿ 50ಕ್ಕಿಂತ ಹೆಚ್ಚು ಬಹುಮಾನ ಸ್ಮರಣಿಕೆ ಗಳಿಸಿದ್ದಾಳೆ. ಇವಳು ಅಭಿಮತ ವಾಹಿನಿಯ ಪ್ರತಿಭಾ ಲೋಕದಲ್ಲಿ ಭಾಗವಹಿಸಿದ್ದಾಳೆ.
ಈಕೆ ಪದ್ಮಶ್ರೀ ಭಟ್ ನೇತೃತ್ವದ ವಾಯ್ಸ್ ಆಪ್ ಆರಾಧನ ತಂಡದ ಸಕ್ರೀಯ ಸದಸ್ಯೆ.

ಇತ್ತೀಚಿನ ಸುದ್ದಿ

ಜಾಹೀರಾತು