10:40 PM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ರಿಪೋರ್ಟರ್ ಕರ್ನಾಟಕ ವಾಯ್ಸ್ ಆಫ್ ಆರಾಧನಾ: ಜುಲೈ ತಿಂಗಳ ಟಾಪರ್ ಆಗಿ ತ್ರಿಶಾಂಕ್ ಪೂಜಾರಿ

14/08/2026, 22:39

ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಜುಲೈ ತಿಂಗಳ ಟಾಪರ್ ಆಗಿ ತ್ರಿಶಾಂಕ್ ಪೂಜಾರಿ ಆಯ್ಕೆಯಾಗಿದ್ದಾನೆ.
ಮಂಗಳೂರಿನ ಸುರತ್ಕಲ್ ಸಮೀಪದ ಹೊಸಬೆಟ್ಟು ನಿವಾಸಿಗಳಾದ ಸುರೇಖಾ ಮತ್ತು ಕಿರಣ್ ರಾಜ್ ದಂಪತಿಯ ಪುತ್ರನಾದ ತ್ರಿಶಾಂಕ್ ಪೂಜಾರಿ ಸುರತ್ಕಲ್ ನಲ್ಲಿರುವ ಗುರುಕುಲ ಮೊಂಟೆಸ್ಸರಿ ಸ್ಕೂಲ್ ನಲ್ಲಿ ಯುಕೆಜಿ ಕ್ಲಾಸ್ ನಲ್ಲಿ ಓದುತ್ತಿದ್ದಾನೆ.


ಈತನಿಗೆ ಎರಡೂವರೆ ವರ್ಷ ಆಗುವಾಗಲೇ ಡ್ಯಾನ್ಸ್ ಮಾಡುವುದು, ಸಾಂಗ್ ಹೇಳುವುದು, ಆ್ಯಕ್ಟಿಂಗ್ ಮಾಡುವುದು ಅಂದ್ರೆ‌ ತುಂಬಾ ಇಷ್ಟ.ತ್ರಿಶಾಂಕ್ ಗೆ ಎರಡೂವರೆ ವರ್ಷ ಇರುವಾಗ ಸುರತ್ಕಲ್ ನಲ್ಲಿರುವ ಬಿಲ್ಲವ ಸಮಾಜ ಸೇವಾ ಸಂಘ, ವಿಠೋಬಾ ರುಕುಮಾಯಿ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಏರ್ಪಡಿಸಿದ್ದ ಕೃಷ್ಣ ವೇಷ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಬಹುಮಾನದ ಜೊತೆಗೆ ನಗದು ಬಹುಮಾನ ಸ್ವೀಕರಿಸಿದ್ದಾನೆ.
ಮತ್ತೆ ಈತ ತಾನು ಕಲಿಯುವ ಸ್ಕೂಲ್ ನಲ್ಲಿ ಕೂಡ ಶಾಲೆಯ ವಾರ್ಷಿಕೋತ್ಸವ ಪ್ರಯುಕ್ತ ಏರ್ಪಡಿಸಿದ್ದ ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ, ಅದರಲ್ಲೂ ಡ್ಯಾನ್ಸ್ ಮತ್ತು ಇತರ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಜೊತೆಗೆ ಸರ್ಟಿಫಿಕೇಟ್ ಪಡೆದಿದ್ದಾನೆ.
ಈತ ಇತ್ತೀಚೆಗೆ ಪದ್ಮಶ್ರೀ ಭಟ್ ಅವರ”ವಾಯ್ಸ್ ಆಫ್ ಆರಾಧನ,”ಕಲಾರಾಧನೆ ಎಂಬ ವಾಟ್ಸಪ್ ಗ್ರೂಪ್ ಸೇರಿಕೊಂಡಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು