9:57 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ರಿಪೋರ್ಟರ್ ಕರ್ನಾಟಕ ಸಂಪಾದಕ ಅಶೋಕ್ ಕಲ್ಲಡ್ಕಗೆ  ಪಿತೃ ವಿಯೋಗ: ಹಲವು ಗಣ್ಯರ ಸಂತಾಪ

25/12/2021, 22:35

ಮಂಗಳೂರು(reporterkarnataka.com): ರಿಪೋರ್ಟರ್ ಕರ್ನಾಟಕ ಸಂಪಾದಕ ಅಶೋಕ್ ಕಲ್ಲಡ್ಕ ಅವರ ತಂದೆ ಕೃಷ್ಣ ಕಲ್ಲಡ್ಕ ಅವರು ಗುರುವಾರ ನಿಧನರಾದರು.

ಕಲ್ಲಡ್ಕದಲ್ಲಿ ಕೃಷ್ಣ ಟೈಲರ್ ಎಂದೇ ಪ್ರಸಿದ್ಧರಾಗಿದ್ದ ಅವರು ಕಲ್ಲಡ್ಕ ಸಮೀಪದ ನಾಗತಿಮಾರ್ ನಲ್ಲಿ 1928ರಲ್ಲಿ ಜನಿಸಿದ್ದರು. ಬಾಲ್ಯದ ಜೀವನವನ್ನು ಮಂಗಳೂರಿನಲ್ಲಿ ಕಳೆದ ಅವರು ಕಲ್ಲಡ್ಕದಲ್ಲಿ ಟೈಲರಿಂಗ್ ವೃತ್ತಿ ಆರಂಭಿಸಿದ್ದರು. ಕಲ್ಲಡ್ಕದ ಸುತ್ತಮುತ್ತಲಿನ ಪ್ರದೇಶದಲ್ಲಿ ದೊಡ್ಡ ಪ್ರಮಾಣದ ಸ್ನೇಹಿತರ ಬಳಗವನ್ನೇ ಸಂಪಾದಿಸಿದ್ದರು.

ಅವರು ಪತ್ನಿ ರಾಜೀವಿ, ಪುತ್ರರಾದ ಚೆನ್ನೈನ ನಂಜಿಲ್ ಕಂಪನಿಯ ಜನರಲ್ ಮೆನೇಜರ್ ಉದಯ್ ಕಲ್ಲಡ್ಕ, ಕುಳಾಯಿಯ ರಶ್ಮಿ ಸ್ಟಿಚ್ ವೇರ್ ಮಾಲೀಕ ವಿದ್ಯಾಧರ ಕಲ್ಲಡ್ಕ, ಅಶೋಕ್ ಕಲ್ಲಡ್ಕ ಮತ್ತು ಪುತ್ರಿಯರಾದ ವಿಜಯಲಕ್ಷ್ಮೀ ಹಾಗೂ ಭಾರತಿ ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಸಂತಾಪ: ಕೃಷ್ಣ ಕಲ್ಲಡ್ಕ ಅವರ ನಿಧನಕ್ಕೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ, ಮಾಜಿ ಸಚಿವ ಬಿ. ರಮಾನಾಥ ರೈ, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು