9:56 PM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ರಿಪೋರ್ಟರ್ ಕರ್ನಾಟಕ ಸಂಪಾದಕ ಅಶೋಕ್ ಕಲ್ಲಡ್ಕಗೆ  ಪಿತೃ ವಿಯೋಗ: ಹಲವು ಗಣ್ಯರ ಸಂತಾಪ

25/12/2021, 22:35

ಮಂಗಳೂರು(reporterkarnataka.com): ರಿಪೋರ್ಟರ್ ಕರ್ನಾಟಕ ಸಂಪಾದಕ ಅಶೋಕ್ ಕಲ್ಲಡ್ಕ ಅವರ ತಂದೆ ಕೃಷ್ಣ ಕಲ್ಲಡ್ಕ ಅವರು ಗುರುವಾರ ನಿಧನರಾದರು.

ಕಲ್ಲಡ್ಕದಲ್ಲಿ ಕೃಷ್ಣ ಟೈಲರ್ ಎಂದೇ ಪ್ರಸಿದ್ಧರಾಗಿದ್ದ ಅವರು ಕಲ್ಲಡ್ಕ ಸಮೀಪದ ನಾಗತಿಮಾರ್ ನಲ್ಲಿ 1928ರಲ್ಲಿ ಜನಿಸಿದ್ದರು. ಬಾಲ್ಯದ ಜೀವನವನ್ನು ಮಂಗಳೂರಿನಲ್ಲಿ ಕಳೆದ ಅವರು ಕಲ್ಲಡ್ಕದಲ್ಲಿ ಟೈಲರಿಂಗ್ ವೃತ್ತಿ ಆರಂಭಿಸಿದ್ದರು. ಕಲ್ಲಡ್ಕದ ಸುತ್ತಮುತ್ತಲಿನ ಪ್ರದೇಶದಲ್ಲಿ ದೊಡ್ಡ ಪ್ರಮಾಣದ ಸ್ನೇಹಿತರ ಬಳಗವನ್ನೇ ಸಂಪಾದಿಸಿದ್ದರು.

ಅವರು ಪತ್ನಿ ರಾಜೀವಿ, ಪುತ್ರರಾದ ಚೆನ್ನೈನ ನಂಜಿಲ್ ಕಂಪನಿಯ ಜನರಲ್ ಮೆನೇಜರ್ ಉದಯ್ ಕಲ್ಲಡ್ಕ, ಕುಳಾಯಿಯ ರಶ್ಮಿ ಸ್ಟಿಚ್ ವೇರ್ ಮಾಲೀಕ ವಿದ್ಯಾಧರ ಕಲ್ಲಡ್ಕ, ಅಶೋಕ್ ಕಲ್ಲಡ್ಕ ಮತ್ತು ಪುತ್ರಿಯರಾದ ವಿಜಯಲಕ್ಷ್ಮೀ ಹಾಗೂ ಭಾರತಿ ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಸಂತಾಪ: ಕೃಷ್ಣ ಕಲ್ಲಡ್ಕ ಅವರ ನಿಧನಕ್ಕೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ, ಮಾಜಿ ಸಚಿವ ಬಿ. ರಮಾನಾಥ ರೈ, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು