8:59 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ರಿಪೋರ್ಟರ್ ಕರ್ನಾಟಕ ವರದಿ ಫಲಶ್ರುತಿ: ಬೆಳಿಗ್ನೋರೂ ಶಾಲೆ ಪಕ್ಕದಲ್ಲಿ ಬ್ರಿಜ್ ಗೆ ಕೊನೆಗೂ   ತಡೆಗೋಡೆ ನಿರ್ಮಾಣ

24/10/2021, 09:12

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಕ್ಷೇತ್ರ ವ್ಯಾಪ್ತಿಯ ಬಳಗಾನೂರ ಸಮೀಪದ ಬೆಳಿಗ್ನೋರೂ ಗ್ರಾಮದಲ್ಲಿ ಶಾಲೆ ಪಕ್ಕದಲ್ಲಿ ಬ್ರಿಜ್ ಗೆ ಕೊನೆಗೂ ತಡೆಗೋಡೆ ನಿರ್ಮಿಸಲಾಗಿದೆ. ಇದು ರಿಪೋರ್ಟರ್ ಕರ್ನಾಟಕ ವರದಿಯ ಫಲಶ್ರುತಿ ಆಗಿದೆ.

ಅಧಿಕಾರಿಗಳಲ್ಲಿ ನಾಗರಿಕರು ಹಲವು ಬಾರಿ ವಿನಂತಿ ಮಾಡಿದರೂ ಕ್ಯಾರೇ ಮಾಡದಿರುವುದನ್ನು ಕಂಡು ನಾಗರಿಕರು ಮಾಧ್ಯಮಗಳ ಮೊರೆ ಹೋಗಿದ್ದರು. 

ತಡೆಗೋಡೆ ಇಲ್ಲದೆ ಸಂಭವಿಸಬಹುದಾದ ಅಪಾಯದ ಕುರಿತು ರಿಪೋರ್ಟರ್ ಕರ್ನಾಟಕ ಚಿತ್ರ ಸಹಿತ ಸಮಗ್ರ ವರದಿ ಪ್ರಕಟಿಸಿತ್ತು.

ತಡೆಗೋಡೆ ನಿರ್ಮಿಸದೇ ಗುತ್ತೇದಾರು ಹಾಗೆ ಕೆಲಸ ನಿಲ್ಲಿಸಿದ್ದರು. ಬಿಲ್ ಕೂಡ ಪಾವತಿ ಆಗಿತ್ತು.

ಎಷ್ಟು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನಕ್ಕೆ ಬಂದಿರಲಿಲ್ಲ. ರಿಪೋರ್ಟರ್ ಕರ್ನಾಟಕ ಸೇರಿದಂತೆ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾದ ಬಳಿಕ ಎಚ್ಚೆತ್ತುಕೊಂಡ ಅಧಿಕಾರಿಗಳು ಸೇತುವೆಗೆ ತಡೆಗೋಡೆ ನಿರ್ಮಿಸಿದ್ದಾರೆ. 

ತಡೆಗೋಡೆ ಇಲ್ಲದ ಸೇತುವೆ ತುಂಬಾ ಅಪಾಯಕಾರಿಯಾಗಿತ್ತು. ವಾಹನ ಸವಾರರು ಸ್ವಲ್ಪ ಯಾಮಾರಿಸಿದರೂ ಗುಂಡಿಗೆ ಬೀಳುವುದು ಖಂಡಿತಾ. ಅದಲ್ಲದೆ ಸಮೀಪದಲ್ಲೇ ಶಾಲೆ ಇದೆ. ಇಲ್ಲಿನ ನೂರಾರು ಮಕ್ಕಳು ಇದೇ ದಾರಿಯಾಗಿ ತೆರಳುತ್ತಿದ್ದರು. ಕೆಲವು ಮಕ್ಕಳು ಕುತೂಹಲದಿಂದ ಕೆಳಗೆ ಇಣುಕುವ ಕೆಲಸ ಮಾಡುತ್ತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು