2:54 PM Thursday19 - February 2026
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ…

ಇತ್ತೀಚಿನ ಸುದ್ದಿ

ರಿಪೋರ್ಟರ್ ಕರ್ನಾಟಕ ವಾಯ್ಸ್ ಆಫ್ ಆರಾಧನಾ: ಜೂನ್ ತಿಂಗಳ ಟಾಪರ್ ಆಗಿ ಶೌರ್ಯ ರಾವ್ ಮತ್ತು ಆಶ್ರಿತ ಪೂಜಾರಿ ಆಯ್ಕೆ

28/07/2024, 21:22

ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಜೂನ್ ತಿಂಗಳ ಟಾಪರ್ ಆಗಿ ಶೌರ್ಯ ರಾವ್ ಹಾಗೂ ಆಶ್ರಿತ ಪೂಜಾರಿ ಆಯ್ಕೆಯಾಗಿದ್ದಾರೆ.
ಮಂಗಳೂರಿನ ಬಾಲ ಪ್ರತಿಭೆ ಶೌರ್ಯ ರಾವ್, ಶ್ರೀನಿಧಿ ರಾವ್ ಹಾಗೂ ಅಶ್ವಿನಿ ರಾವ್‌ರವರ ಏಕೈಕ ಪುತ್ರ. ಈತನಿಗೆ 7 ವರ್ಷ ವಯಸ್ಸಾಗಿದ್ದು ಮಂಗಳೂರಿನ ಎಸ್.ಡಿ.ಎಂ. ಸ್ಕೂಲ್‌ನಲ್ಲಿ ಕಲಿಯುತ್ತಿದ್ದಾನೆ. ನೃತ್ಯದಲ್ಲಿ ವಿಶೇಷ ಆಸಕ್ತಿಯನ್ನು ಹೊಂದಿದ್ದು ಹಲವಾರು ವೇದಿಕೆಯಲ್ಲಿ ತನ್ನ ಛಾಪನ್ನು ಮೂಡಿಸಿದ್ದಾನೆ. ನೃತ್ಯ ಮಾತ್ರವಲ್ಲದೆ ನಟನೆ, ಈಜು, ಯೋಗ, ತಾಲೀಮು, ಕೆಲಸ್ಟನಿಕ್ಸ್, ಫ್ರೀ ಸ್ಟೈಲ್ ಜಿಮ್ನಾಸ್ಟಿಕ್, ಹಾಡುಗಾರಿಕೆ, ಚಿತ್ರಕಲೆ ಹೀಗೆ ಹಲವಾರು ಕ್ಷೇತ್ರಗಳಲ್ಲೂ ಗುರುತಿಸಿಕೊಂಡಿದ್ದಾನೆ. ಇತ್ತೀಚಿನ ದಿನಗಳಲ್ಲಿ ಮ್ಯಾಜಿಕ್ ಹಾಗೂ ಕರಾಟೆಯನ್ನೂ ಕಲಿಯುತ್ತಿದ್ದಾನೆ. ಅಷ್ಟೇ ಅಲ್ಲದೆ ಹುಲಿ ನೃತ್ಯದಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದು ಹಲವಾರು ವೇದಿಕೆಯಲ್ಲಿ ಪ್ರದರ್ಶಿಸಿದ್ದಾನೆ. ನಮ್ಮ ಕುಡ್ಲ ವಾಹಿನಿಯಲ್ಲಿ ಪ್ರಸಾರವಾಗುವ “ಡಾನ್ಸ್ ಕುಡ್ಲ ಡಾನ್ಸ್” ರಿಯಾಲಿಟಿ ಶೋನಲ್ಲಿ ಸೆಮಿಫೈನಲ್‌ವೆರೆಗೆ ತಲುಪಿ “ಕರ್ನಾಟಕ ದಿ ಬೆಸ್ಟ್ ಡಾನ್ಸರ್” ಶೋಗೆ ನೇರವಾಗಿ ಆಯ್ಕೆಯಾಗಿಯಾಗಿದ್ದಾನೆ. ಈಗಾಗಲೇ ಹಲವು ರಿಯಾಲಿಟಿ ಶೋ, ಎರಡು ಚಲನಚಿತ್ರಗಳಲ್ಲಿ ಹಾಗೂ ಮೂರು ಆಲ್ಬಂ ಸಾಂಗ್‌ನಲ್ಲಿ ಅಭಿನಯಿಸಿ ಹೆಸರುವಾಸಿಯಾಗಿದ್ದಾನೆ. ಮಂಗಳೂರಿನಲ್ಲಿ ನಡೆದ “ಲಿಟ್ಲ್ ಕಿಂಗ್ ಆಫ್ ಮಂಗಳೂರು-2023” ಫ್ಯಾಶನ್ ಶೋನಲ್ಲಿ ಭಾಗವಹಿಸಿ ಮೊದಲನೆಯ “ಲಿಟ್ಲ್ ಕಿಂಗ್ ಆಫ್ ಮಂಗಳೂರು-2023” ಪಟ್ಟವನ್ನು ಮುಡಿಗೇರಿಸಿಕೊಂಡಿದ್ದಾನೆ. “ಕಿಡ್ಸ್ ಫ್ಯೂಷನ್-2024ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾನೆ. ಕನ್ನಡದ ಶ್ರೇಷ್ಠ ನಟ ಅನಂತ್ ನಾಗ್ ಅವರ 75ನೇ ವರ್ಷದ ಹುಟ್ಟುಹಬ್ಬದ ಸಮಾರಂಭದ ಸಂದರ್ಭದಲ್ಲಿ ಮಾಸ್ಟರ್ ಶೌರ್ಯರವರ ಪ್ರತಿಭೆಯನ್ನು ಪ್ರಶಂಸಿ ಆಶೀರ್ವದಿಸಿದ್ದಾರೆ. ಈಗಾಗಲೇ 100ಕ್ಕೂ ಹೆಚ್ಚು ವೇದಿಕೆಗಳಲ್ಲಿ ಭಾಗವಹಿಸಿ 60ಕ್ಕೂ ಹೆಚ್ಚು ಪ್ರಶಸ್ತಿಗೆ ಭಾಜನನಾಗಿದ್ದಾನೆ. ಕೇವಲ ಸಾಂಸ್ಕೃತಿಕ ಚಟುವಟಿಕೆ ಅಷ್ಷೆ ಅಲ್ಲದೆ ಕಲಿಕೆಯಲ್ಲೂ ಮುಂದೆ ಇದ್ದಾನೆ. ತನ್ನ ವಯಸ್ಸಿಗೂ ಮೀರಿದ ಶೌರ್ಯನ ಈ ಸಾಧನೆ ಪ್ರಶಂಸನೀಯ. ತಂದೆ ತಾಯಿಯ ಪ್ರೋತ್ಸಾಹ ಹಾಗೂ ಆತನ ಪರಿಶ್ರಮ ಇಷ್ಟೆಲ್ಲಾ ಸಾಧನೆ ಮಾಡಲು ಸಾಧ್ಯವಾಗಿದೆ.


ಹರೀಶ್ ಸುವರ್ಣ ಶೃತಿ ಎಚ್. ದಂಪತಿಯ ಎರಡನೇ ಮಗಳಾದ
ಆಶ್ರಿತ ಪೂಜಾರಿ ಆಳ್ವಾಸ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ಓದುತ್ತಿದ್ದಾಳೆ. ಕಳೆದ ಹಲವು ವರ್ಷಗಳಿಂದ
ಮೂಡಬಿದ್ರೆಯ ಟ್ವಿಸ್ಟರ್ ಡ್ಯಾನ್ಸ್ ಅಕಾಡೆಮಿ ಗುರುಗಳಾದ ನಿತಿನ್ ಅವರಲ್ಲಿ ನೃತ್ಯ ಕಲಿಯುತ್ತಿದ್ದಾಳೆ. ಭರತ್ಯನಾಟ್ಯ ಶಿಕ್ಷಕಿಯಾದ ಶ್ರೀಲತಾ ನಾಗರಾಜ್ ಅವರ ಬಳಿ ಭರತ್ಯನಾಟ್ಯ ತರಬೇತಿಯನ್ನು ಪಡೆಯುತ್ತಿದ್ದಾಳೆ. ನೃತ್ಯ , ಛದ್ಮವೇಷ, ಅಭಿನಯ ಗೀತೆ ಹೀಗೆ ಹಲವಾರು ಪ್ರಶಸ್ತಿಗಳನ್ನು ಪಡೆದಿರುತ್ತಾಳೆ. ದಿವಾಕರ್ ಮೂಡಬಿದ್ರೆ ಅವರ ಬಳಿ ಈಜುವಿಕೆಯ ತರಬೇತಿಯನ್ನು ಪಡೆಯುತ್ತಿದ್ದಾಳೆ. ವಾಯ್ಸ್ ಆಫ್ ಆರಾಧನಾ ತಂಡದ ಮುಖಾಂತರ ಅಭಿಮತ ವಾಹಿನಿಯಲ್ಲಿ ಭಾಗವಹಿಸಿದ್ದಾಳೆ. ಶಾಲೆಯಲ್ಲಿ ಕಲಿಕೆಯಲ್ಲಿಯೂ ಮುಂದಿದ್ದಾಳೆ.

ಇತ್ತೀಚಿನ ಸುದ್ದಿ

ಜಾಹೀರಾತು