5:33 PM Wednesday10 - June 2026
ಬ್ರೇಕಿಂಗ್ ನ್ಯೂಸ್
ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ

ಇತ್ತೀಚಿನ ಸುದ್ದಿ

ರಿಪೋರ್ಟರ್ ಕರ್ನಾಟಕ ವಾಯ್ಸ್ ಆಫ್ ಆರಾಧನಾ: ಸೆಪ್ಟೆಂಬರ್‌ ತಿಂಗಳ ವಿಜೇತರಾಗಿ ನಮಸ್ವಿ ಭಾಸ್ಕರ್ ಹಾಗೂ ನಿಹಾಲ್ ಆಯ್ಕೆ

16/10/2024, 14:50

ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದಲ್ಲಿ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಸೆಪ್ಟೆಂಬರ್ ತಿಂಗಳ ಟಾಪರ್ ಆಗಿ ನಮಸ್ವಿ ಭಾಸ್ಕರ್ ಹಾಗೂ ನಿಹಾಲ್ ಅವರು ಆಯ್ಕೆಯಾಗಿದ್ದಾರೆ.


ಪುತ್ತೂರು ನಿವಾಸಿಗಳಾದ ದೀಪಾ ಮತ್ತು ಭಾಸ್ಕರ್ ದಂಪತಿ ಪುತ್ರಿಯಾದ ನಮಸ್ವಿ ಭಾಸ್ಕರ್ ಅವರು ಅತ್ತಾವರದ ಸರೋಜಿನಿ ಮಧುಸೂಧನ್ ಕುಶೆ ಶಾಲೆಯಲ್ಲಿ 4ನೇ ತರಗತಿಯಲ್ಲಿ ಕಲಿಯುತಿದ್ದಾಳೆ. ಹಾಡು, ನೃತ್ಯ, ಚಿತ್ರ ಬಿಡಿಸುದು, ನಿರೂಪಣೆ ಹಾಗೂ ಸ್ವಂತವಾಗಿ ಹಾಡು ಬರೆಯುದು, ಕಥೆ ಬರೆಯುದರಲ್ಲಿ ಆಸಕ್ತಿ ಹೊಂದಿರುವ ಬಹುಮುಖ ಪ್ರತಿಭೆ. ಈಕೆ ಹಾಡು, ನೃತ್ಯ, ಛದ್ಮವೇಷ ಮುಂತಾದುವುಗಳಲ್ಲಿ ಭಾಗವಹಿಸಿ ಅನೇಕ ಬಹುಮಾನ ಪಡೆದಿದ್ದಾಳೆ. ಇತೀಚೆಗೆ ನಡೆದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ಭಕ್ತಿ ಗೀತೆ ಹಾಗೂ ಆಶು ಭಾಷಣದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾಳೆ. ಕುಂದಾಪುರ ಕಲಾವಿದ ಸಾವಿರ ಸಂಚಿಕೆಯ ಸಂಭ್ರಮದಲ್ಲಿ ಪ್ರತಿಭಾರತ್ನ ಎಂಬ ಬಿರುದು ಕೊಟ್ಟು ಗೌರವಿಸಿರುತ್ತಾರೆ. ಹಾಗೆಯೇ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ಕಂಪನಿಯವರು ಕಲಾರತ್ನ ಎಂಬ ಬಿರುದನ್ನು ಕೊಟ್ಟು ಗೌರವಿಸಿದ್ದಾರೆ. ವಾಯ್ಸ್ ಆಫ್ ಆರಾಧನಾ ಸಂಸ್ಥೆಯಲ್ಲಿ ಅನೇಕ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಜನ ಮೆಚ್ಚುಗೆ ಗಳಿಸಿದ್ದಾಳೆ.
ಕುಮಾರ್ ನಿಹಾಲ್ ಮೂಡುಬಿದಿರೆಯ ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 10ನೇ ತರಗತಿಯಲ್ಲಿ ಕಲಿಯುತ್ತಿದ್ದಾನೆ. ಈತ ಮೂಡಬಿದಿರೆಯ ಸುಕೇಶ್ ಮತ್ತು ಮಲ್ಲಿಕಾ ದಂಪತಿಯ ಪುತ್ರ. ಈತನ ಹವ್ಯಾಸಗಳು ಯಕ್ಷಗಾನ , ಕೀಬೋರ್ಡ್, ನಾಟಕ , ಸಂಗೀತ ಹಾಗೂ ಕವನ ಬರೆಯುವುದು. ಕೀಬೋರ್ಡ್ ಗುರುಗಳಾದ ಸಂಸ್ಕೃತ ವಿದ್ವಾನ್ ಗಜಾನನ ಮರಾಟೆ ಅವರಿಂದ ಕಲಿಯುತ್ತಿದ್ದಾನೆ. ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ತುಳಸಿ ಪೇಜತೈ ಅವರಲ್ಲಿ ಅಭ್ಯಾಸಿಸುತ್ತಿದ್ದಾನೆ. ಸುಗಮ ಸಂಗೀತವನ್ನು ವಿದ್ವಾನ್ ಯಶವಂತ್ ಎಂ.ಜಿ. ಅವರಲ್ಲಿ, ಯಕ್ಷಗಾನವನ್ನು ರಕ್ಷಿತ್ ಪಡ್ರೆ ಅವರಲ್ಲಿ ಕಲಿಯುತ್ತಿದ್ದಾನೆ. ನಾಟಕ ಹಾಗೂ ಕವನ ಬರೆಯುವುದನ್ನು ಮೋಹನ್ ಹೋಸ್ಮರ್ ಅವರು ಕಲಿಸುತ್ತಿದ್ದಾರೆ. ಹಾಗೆಯೇ ಇವರು ಇನ್ಸ್ಟ್ರುಮೆಂಟ್ ನ್ನು ನುಡಿಸುವುದನ್ನು ಕಲಿಯುತ್ತಿದ್ದಾನೆ. ಈತನಿಗೆ ದಶಮ ಸಿದ್ಧಿ ಸಂಭ್ರಮದಲ್ಲಿ ಸಿದ್ಧಿ ಅವಾರ್ಡ್ ದೊರಕಿರುತ್ತದೆ.
*ದೊರೆತ ಪ್ರಶಸ್ತಿಗಳು:*
•ಮಂಗಳೂರು ವಿಶ್ವವಿದ್ಯಾನಿಲಯದ ಕನಕ ಸಂಶೋಧನಾ ಕೇಂದ್ರದ ವತಿಯಿಂದ ನಡೆಸಲ್ಪಟ್ಟ ಕನಕ ಕೀರ್ತನ ಗಂಗೋತ್ರಿ, ಕನಕದಾಸರ ಕೀರ್ತನೆಗಳ ಗಾಯನ ಕಾರ್ಯಕ್ರಮದಲ್ಲಿ ಫ್ರೌಢಶಾಲೆಯ ವಿಭಾಗದಿಂದ 2023-24 ನೇ ಸಾಲಿನ ಕನಕ ಪುರಸ್ಕಾರ.
•ಮಹಿಳಾ ಮತ್ತು ಮಕ್ಕಳ ಇಲಾಖೆ ಕರ್ನಾಟಕ ಆಯೋಜಿಸಿದ ಸುಗಮ ಸಂಗೀತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾನೆ.
•ಬೀಚ್ ಉತ್ಸವ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾನೆ
•ಅವಿನ್ ಸ್ವರ ಸಂಗಮ ರಾಜ್ಯ ಮಟ್ಟದ ಗಾಯನ ಸ್ಪರ್ಧೆ ಚಿಕ್ಕಮಗಳೂರಿನಲ್ಲಿ ನಡೆಯಿತು ಇದರಲ್ಲಿ ಮೊದಲನೇ ಸಮಾಧಾನಕರ ಬಹುಮಾನ ಪಡೆದಿರುತ್ತಾನೆ.
•ಜಿಲ್ಲಾ ಮಟ್ಟದ ನಾಟಕ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾನೆ.
•ಭಾರತ್ ಸ್ಕೌಟ್ ಮತ್ತು ಗೈಡ್ಸ್, ಕರ್ನಾಟಕ ನಡೆಸಿದ ಗೀತ ಗಾಯನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾನೆ.
•ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಫ್ರೌಢ ವಿಭಾಗದ ಭಾವಗೀತೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾನೆ.
ಹಾಗೂ ಅನೇಕ ಕಡೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದಿದ್ದಾನೆ.
*ಸನ್ಮಾನ:*
* ದಕ್ಷಿಣ ಕನ್ನಡ ಜಿಲ್ಲಾ ಚಪ್ಟೆಗಾರ್ ಸಂಘದಲ್ಲಿ ಸನ್ಮಾನವನ್ನು ಮಾಡಲಾಗಿದೆ.
* ಶಾಲೆಯಲ್ಲಿ ಸನ್ಮಾನವನ್ನು ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು