8:00 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ತುಮಕೂರು ವಿಶ್ವವಿದ್ಯಾಲಯಕ್ಕೆ ಡಾ.ಶಿವಕುಮಾರ ಸ್ವಾಮೀಜಿ ಹೆಸರಿಡಲು ಮನವಿ

03/12/2025, 12:56

ಬೆಂಗಳೂರು(reporterkarnataka.com): ಪ್ರತಿಷ್ಠಿತ ತುಮಕೂರು ವಿಶ್ವವಿದ್ಯಾಲಯಕ್ಕೆ ಸಿದ್ಧಗಂಗೆಯ ಡಾ.ಶಿವಕುಮಾರ ಮಹಾಸ್ವಾಮಿಗಳ ಹೆಸರಿಡಲು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಮನವಿ ಮಾಡಿದ್ದಾರೆ.
ಈ ಕುರಿತು ರಾಜ್ಯಪಾಲರಾದ ಥಾವರಚಂದ್ ಗೆಹ್ಲೋತ್ ಅವರಿಗೆ ಲಿಖಿತ ಮನವಿ ಪತ್ರವನ್ನು ಕುಲಪತಿಗಳ ಮೂಲಕ‌ ಸಲ್ಲಿಸಿರುವ ಅವರು,ಕರ್ನಾಟಕ ರಾಜ್ಯದ ವಿಶ್ವವಿದ್ಯಾನಿಲಯಗಳಿಗೆ ಮಹಾತ್ಮರುಗಳ ಹೆಸರಿಡುವ ಪದ್ಧತಿ ರೂಡಿಯಲ್ಲಿದ್ದು, ಅದರಂತೆ ಸರ್ಕಾರವು ಆಗಾಗ ಸುತ್ತೋಲೆ, ಅಧಿಸೂಚನೆಗಳನ್ನು ಹೊರಡಿಸುತ್ತ ಬಂದಿರುತ್ತದೆ. ಇತ್ತೀಚೆಗೆ ರಾಯಚೂರು ವಿಶ್ವವಿದ್ಯಾನಿಲಯಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಹಾಗೂ ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ. ಮನಮೋಹನ್ ಸಿಂಗ್ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡುವ ಸಂದರ್ಭದಲ್ಲಿ ಸದನದಲ್ಲಿ ತುಮಕೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸುರೇಶಗೌಡ ರವರು ಡಾ.ಶಿವಕುಮಾರಸ್ವಾಮಿಗಳ ಹೆಸರನ್ನು ಇಡುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು.

ತುಮಕೂರು ಜಿಲ್ಲೆಯು ಪ್ರಮುಖ ಶೈಕ್ಷಣಿಕ ಹಾಗೂ ಧಾರ್ಮಿಕ ಕೇಂದ್ರವಾಗಿದಕ್ಕೆ ಕಾರಣವಾದ ಸಂಸ್ಥೆಗಳ ಸಿಂಹಪಾಲು ಡಾ. ಶಿವಕುಮಾರ ಸ್ವಾಮಿಗಳ ನೇತೃತ್ವ ಹಾಗೂ ಸಿದ್ದಗಂಗಾ ಮಠದ್ದಾಗಿದೆ. ತ್ರಿವಿಧ ದಾಸೋಹಿ ಸಮೈಕ್ಯ ಭಾವವನ್ನು ಹೊಂದಿ ಜಾತಿ, ಕುಲ,ಧರ್ಮ ಎಲ್ಲವನ್ನೂ ಮೀರಿ ಶಿಕ್ಷಣ ರಂಗದಲ್ಲಿ ಅಪಾರ ಕೊಡುಗೆಯನ್ನು ನೀಡಿದ್ದಾರೆ. ಶತಾಯುಷಿಗಳಾಗಿದ್ದ ಡಾ. ಶಿವಕುಮಾರಸ್ವಾಮಿಗಳ ಹೆಸರನ್ನು ತುಮಕೂರು ವಿಶ್ವವಿದ್ಯಾಲಯಕ್ಕೆ ಇಡುವುದು ಅತ್ಯಂತ ಸೂಕ್ತ ಎಂದು ಅವರು ತಮ್ಮ ಮನವಿಯಲ್ಲಿ ವಿವರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು