6:25 PM Thursday15 - May 2025
ಬ್ರೇಕಿಂಗ್ ನ್ಯೂಸ್
ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು…

ಇತ್ತೀಚಿನ ಸುದ್ದಿ

ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ ಸಿಬ್ಬಂದಿಗಳ ಕಾರ್ಯಾಚರಣೆ

15/05/2025, 16:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮರ ಕಡಿಯುವ ಸಂದರ್ಭದಲ್ಲಿ ಕೊಂಬೆ ಮುರಿದು ಎರಡು ಕೊಂಬೆಗಳ ಮಧ್ಯೆ ಅಪಾಯಕಾರಿ ಸ್ಥಿತಿಯಲ್ಲಿ
ಸಿಲುಕಿ ಒದ್ದಾಡುತ್ತಿದ್ದ ವ್ಯಕ್ತಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ಕಡೂರು ತಾಲೂಕಿನಲ್ಲಿ ನಡೆದಿದೆ.


ಕಡೂರು ತಾಲೂಕಿನ ದೊಡ್ಡ ಪಟ್ಟಣಗೆರೆ ದೇವಸ್ಥಾನಕ್ಕೆ ಸಂಬಂಧಿಸಿದ ಹುಣಸೇ ಮರವನ್ನು ಕಡಿಯುವ ಸಂದರ್ಭ ಭಯಾನಕ ಘಟನೆ ಸಂಭವಿಸಿದೆ. ಮರದ ಮೇಲೆ ಹತ್ತಿ ಕೆಲಸ ಮಾಡುತ್ತಿದ್ದ ಸಯ್ಯದ್ ಎಂಬ ವ್ಯಕ್ತಿ, ಮರದ ಎರಡು ಕೊಂಬೆಗಳ ಮಧ್ಯೆ ಏಕಾಏಕಿ ಮುರಿದು ಬಿದ್ದ ಕೊಂಬೆಯಲ್ಲಿ ಸಿಲುಕಿಕೊಂಡಿದ್ದರು.
ಮರದ ತುದಿಯಲ್ಲಿ ಸಿಲುಕಿಕೊಂಡು ತಾಸಿಗೂ ಹೆಚ್ಚು ಹೊತ್ತು ನರಳಾಡುತ್ತಿದ್ದರು. ನಂತರ ಅಗ್ನಿಶಾಮಕ ದಳದ ನೆರವಿನಿಂದ ರಕ್ಷಣಾ ಕಾರ್ಯ ನಡೆಯಿತು. ಸಯ್ಯದ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಲು ಮತ್ತು ಬೆನ್ನಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ತಕ್ಷಣ ಕಡೂರು ಆಸ್ಪತ್ರೆಗೆ ದಾಖಲಾಗಿಸಲಾಗಿದೆ.
ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು