1:02 AM Monday26 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ ಸಿಬ್ಬಂದಿಗಳ ಕಾರ್ಯಾಚರಣೆ

15/05/2025, 16:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮರ ಕಡಿಯುವ ಸಂದರ್ಭದಲ್ಲಿ ಕೊಂಬೆ ಮುರಿದು ಎರಡು ಕೊಂಬೆಗಳ ಮಧ್ಯೆ ಅಪಾಯಕಾರಿ ಸ್ಥಿತಿಯಲ್ಲಿ
ಸಿಲುಕಿ ಒದ್ದಾಡುತ್ತಿದ್ದ ವ್ಯಕ್ತಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ಕಡೂರು ತಾಲೂಕಿನಲ್ಲಿ ನಡೆದಿದೆ.


ಕಡೂರು ತಾಲೂಕಿನ ದೊಡ್ಡ ಪಟ್ಟಣಗೆರೆ ದೇವಸ್ಥಾನಕ್ಕೆ ಸಂಬಂಧಿಸಿದ ಹುಣಸೇ ಮರವನ್ನು ಕಡಿಯುವ ಸಂದರ್ಭ ಭಯಾನಕ ಘಟನೆ ಸಂಭವಿಸಿದೆ. ಮರದ ಮೇಲೆ ಹತ್ತಿ ಕೆಲಸ ಮಾಡುತ್ತಿದ್ದ ಸಯ್ಯದ್ ಎಂಬ ವ್ಯಕ್ತಿ, ಮರದ ಎರಡು ಕೊಂಬೆಗಳ ಮಧ್ಯೆ ಏಕಾಏಕಿ ಮುರಿದು ಬಿದ್ದ ಕೊಂಬೆಯಲ್ಲಿ ಸಿಲುಕಿಕೊಂಡಿದ್ದರು.
ಮರದ ತುದಿಯಲ್ಲಿ ಸಿಲುಕಿಕೊಂಡು ತಾಸಿಗೂ ಹೆಚ್ಚು ಹೊತ್ತು ನರಳಾಡುತ್ತಿದ್ದರು. ನಂತರ ಅಗ್ನಿಶಾಮಕ ದಳದ ನೆರವಿನಿಂದ ರಕ್ಷಣಾ ಕಾರ್ಯ ನಡೆಯಿತು. ಸಯ್ಯದ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಲು ಮತ್ತು ಬೆನ್ನಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ತಕ್ಷಣ ಕಡೂರು ಆಸ್ಪತ್ರೆಗೆ ದಾಖಲಾಗಿಸಲಾಗಿದೆ.
ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು