4:14 AM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ ಸಿಬ್ಬಂದಿಗಳ ಕಾರ್ಯಾಚರಣೆ

15/05/2025, 16:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮರ ಕಡಿಯುವ ಸಂದರ್ಭದಲ್ಲಿ ಕೊಂಬೆ ಮುರಿದು ಎರಡು ಕೊಂಬೆಗಳ ಮಧ್ಯೆ ಅಪಾಯಕಾರಿ ಸ್ಥಿತಿಯಲ್ಲಿ
ಸಿಲುಕಿ ಒದ್ದಾಡುತ್ತಿದ್ದ ವ್ಯಕ್ತಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ಕಡೂರು ತಾಲೂಕಿನಲ್ಲಿ ನಡೆದಿದೆ.


ಕಡೂರು ತಾಲೂಕಿನ ದೊಡ್ಡ ಪಟ್ಟಣಗೆರೆ ದೇವಸ್ಥಾನಕ್ಕೆ ಸಂಬಂಧಿಸಿದ ಹುಣಸೇ ಮರವನ್ನು ಕಡಿಯುವ ಸಂದರ್ಭ ಭಯಾನಕ ಘಟನೆ ಸಂಭವಿಸಿದೆ. ಮರದ ಮೇಲೆ ಹತ್ತಿ ಕೆಲಸ ಮಾಡುತ್ತಿದ್ದ ಸಯ್ಯದ್ ಎಂಬ ವ್ಯಕ್ತಿ, ಮರದ ಎರಡು ಕೊಂಬೆಗಳ ಮಧ್ಯೆ ಏಕಾಏಕಿ ಮುರಿದು ಬಿದ್ದ ಕೊಂಬೆಯಲ್ಲಿ ಸಿಲುಕಿಕೊಂಡಿದ್ದರು.
ಮರದ ತುದಿಯಲ್ಲಿ ಸಿಲುಕಿಕೊಂಡು ತಾಸಿಗೂ ಹೆಚ್ಚು ಹೊತ್ತು ನರಳಾಡುತ್ತಿದ್ದರು. ನಂತರ ಅಗ್ನಿಶಾಮಕ ದಳದ ನೆರವಿನಿಂದ ರಕ್ಷಣಾ ಕಾರ್ಯ ನಡೆಯಿತು. ಸಯ್ಯದ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಲು ಮತ್ತು ಬೆನ್ನಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ತಕ್ಷಣ ಕಡೂರು ಆಸ್ಪತ್ರೆಗೆ ದಾಖಲಾಗಿಸಲಾಗಿದೆ.
ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು