10:18 PM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ನ್ಯಾಯಾಲಯದ ತೀರ್ಪಿಗಾದರೂ ತಲೆಬಾಗಿ ಮುಖ್ಯಮಂತ್ರಿ ರಾಜೀನಾಮೆ ನೀಡಲಿ: ಶಾಸಕ ವೇದವ್ಯಾಸ ಕಾಮತ್ ಆಗ್ರಹ

24/09/2024, 20:50

ಮಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧದ ಸಾವಿರಾರು ಕೋಟಿ ರೂ. ಗಳ ಮುಡಾ ಹಗರಣದ ತನಿಖೆಗೆ ಪ್ರಾಸಿಕ್ಯೂಷನ್ ಅನುಮತಿ ನೀಡಿದ ರಾಜ್ಯಪಾಲರ ನಿರ್ಧಾರ ಸರಿಯಾಗಿದೆ ಎಂದು ಆದೇಶ ನೀಡಿದ ರಾಜ್ಯದ ಉಚ್ಚ ನ್ಯಾಯಾಲಯದ ತೀರ್ಪು ಸತ್ಯಕ್ಕೆ ಸಂದ ಜಯವಾಗಿದ್ದು ಸಿದ್ದರಾಮಯ್ಯನವರು ತನಿಖೆಯ ದೃಷ್ಟಿಯಿಂದ ಇನ್ನಾದರೂ ರಾಜೀನಾಮೆ ನೀಡಲಿ ಎಂದು ಶಾಸಕ ವೇದವ್ಯಾಸ ಕಾಮತ್ ಆಗ್ರಹಿಸಿದರು.


ಮುಖ್ಯಮಂತ್ರಿಗಳ ಕುಟುಂಬದ ಪರವಾಗಿ ಅಕ್ರಮ ನಡೆದಿರುವುದು ದಾಖಲೆಗಳ ಸಮೇತ ಕಣ್ಣಿಗೆ ರಾಚುತ್ತಿದ್ದರೂ ನಾನ್ಯಾಕೆ ರಾಜೀನಾಮೆ ಕೊಡಲಿ? ಬೇಕಿದ್ದರೆ ರಾಜ್ಯಪಾಲರೇ ರಾಜೀನಾಮೆ ಕೊಡಲಿ ಎಂದು ಭಂಡತನ ಪ್ರದರ್ಶಿಸಿದ್ದ ಸಿದ್ದರಾಮಯ್ಯನವರು ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ನ್ಯಾಯಪೀಠವೇ ಸಿದ್ದರಾಮಯ್ಯನವರ ಅರ್ಜಿಯನ್ನು ತಿರಸ್ಕರಿಸಿದ್ದು, ಇನ್ನಾದರೂ ಭಂಡತನವನ್ನು ಬಿಟ್ಟು ತಮ್ಮ ವಿರುದ್ಧದ ತನಿಖೆಗೆ ಸಹಕರಿಸಲು ಹಾಗೂ ಮುಖ್ಯಮಂತ್ರಿ ಸ್ಥಾನದ ಘನತೆಯನ್ನು ಉಳಿಸಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದರು.
ಮುಂದಿನ ದಿನಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ಒಂದೊಂದು ಹಗರಣಗಳಿಗೂ ನ್ಯಾಯಾಲಯದಿಂದ ಇಂತಹದೇ ತೀರ್ಪು ಬಂದಲ್ಲಿ ಇಡೀ ಸಚಿವ ಸಂಪುಟವೇ ರಾಜೀನಾಮೆ ನೀಡುವ ಸ್ಥಿತಿ ನಿರ್ಮಾಣವಾಗಲಿದ್ದು ಆ ಮೂಲಕ ಭ್ರಷ್ಟ ಕಾಂಗ್ರೆಸ್ ಸರ್ಕಾರ ಅಧಿಕಾರದಿಂದ ತೊಲಗುವುದು ಖಚಿತವೆಂದು ಶಾಸಕರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು