5:00 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

“ಡ್ರಾಪ್ ಆಫ್ ಹೋಪ್” ರಕ್ತದಾನ ಅಭಿಯಾನಕ್ಕೆ ಸ್ಪಂದನೆ; 250 ಮಂದಿಯಿಂದ ಯಶಸ್ವಿ ರಕ್ತದಾನ; ಸಂಸದರ ಶ್ಲಾಘನೆ.

28/09/2025, 11:35

ದಾವಣಗೆರೆ(reporterkarnataka.com); ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರ 58ನೇ ಜನ್ಮದಿನಾಚರಣೆಯ ಅಂಗವಾಗಿ, ಎಸ್‌ಎಸ್ ಕೇರ್ ಟ್ರಸ್ಟ್ ವಿದ್ಯಾರ್ಥಿ ವಿಭಾಗವು “ಡ್ರಾಪ್ ಆಫ್ ಹೋಪ್” ಎಂಬ ಶೀರ್ಷಿಕೆಯಡಿ ಆಯೋಜಿಸಿದ್ದ ರಕ್ತದಾನ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದ್ದು ನಗರದ ಬಿಐಇಟಿ ಕಾಲೇಜಿನಲ್ಲಿ ಒಂದೇ ದಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 250 ಮಂದಿ ರಕ್ತದಾನ ಮಾಡಿದ್ದಾರೆ.
ರಕ್ತದಾನ ಮಾಡಿದ ಎಲ್ಲರಿಗೂ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅಭಿನಂದಿಸಿದ್ದಾರೆ.


ಈ ವೇಳೆ ಮಾತನಾಡಿದ ಸಂಸದರು “ಡ್ರಾಪ್ ಆಫ್ ಹೋಪ್” ಎಂಬ ಶೀರ್ಷಿಕೆಯಡಿ ಆಯೋಜಿಸಿದ್ದ ರಕ್ತದಾನ ಅಭಿಯಾನ ಯಶಸ್ವಿಯಾಗಿ ಮುಂದುವರೆದಿದೆ. ದಾವಣಗೆರೆಯ ಬಿಐಇಟಿ ಕಾಲೇಜಿನಲ್ಲಿ ನಡೆದ ಅಭಿಯಾನದಲ್ಲಿ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿರುವುದು ಶ್ಲಾಘನೀಯ.ಸುಮಾರು 250 ಮಂದಿ ರಕ್ತದಾನ ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಸೆ.30ರವರೆಗೆ ರಕ್ತದಾನ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.
ರಕ್ತದಾನ ಅಭಿಯಾನವು ಬಾಪೂಜಿ ಎಜುಕೇಶನಲ್ ಅಸೋಸಿಯೇಷನ್ ಸಂಸ್ಥೆಗಳಾದ್ಯಂತ ಸೆಪ್ಟೆಂಬರ್ 19ರಿಂದ ಪ್ರಾರಂಭಗೊಂಡಿದೆ.ಪ್ರತಿದಿನ 9 ರಿಂದ ಸಂಜೆ 5 ಗಂಟೆಯವರೆಗೆ ರಕ್ತದಾನ ಶಿಬಿರ ನಡೆಯುತ್ತಿದೆ.ಇದೇ ಸೆ.30 ರಂದು ಅಭಿಯಾನ ಕೊನೆಗೊಳ್ಳಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು