4:20 AM Sunday19 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

“ಡ್ರಾಪ್ ಆಫ್ ಹೋಪ್” ರಕ್ತದಾನ ಅಭಿಯಾನಕ್ಕೆ ಸ್ಪಂದನೆ; 250 ಮಂದಿಯಿಂದ ಯಶಸ್ವಿ ರಕ್ತದಾನ; ಸಂಸದರ ಶ್ಲಾಘನೆ.

28/09/2025, 11:35

ದಾವಣಗೆರೆ(reporterkarnataka.com); ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರ 58ನೇ ಜನ್ಮದಿನಾಚರಣೆಯ ಅಂಗವಾಗಿ, ಎಸ್‌ಎಸ್ ಕೇರ್ ಟ್ರಸ್ಟ್ ವಿದ್ಯಾರ್ಥಿ ವಿಭಾಗವು “ಡ್ರಾಪ್ ಆಫ್ ಹೋಪ್” ಎಂಬ ಶೀರ್ಷಿಕೆಯಡಿ ಆಯೋಜಿಸಿದ್ದ ರಕ್ತದಾನ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದ್ದು ನಗರದ ಬಿಐಇಟಿ ಕಾಲೇಜಿನಲ್ಲಿ ಒಂದೇ ದಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 250 ಮಂದಿ ರಕ್ತದಾನ ಮಾಡಿದ್ದಾರೆ.
ರಕ್ತದಾನ ಮಾಡಿದ ಎಲ್ಲರಿಗೂ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅಭಿನಂದಿಸಿದ್ದಾರೆ.


ಈ ವೇಳೆ ಮಾತನಾಡಿದ ಸಂಸದರು “ಡ್ರಾಪ್ ಆಫ್ ಹೋಪ್” ಎಂಬ ಶೀರ್ಷಿಕೆಯಡಿ ಆಯೋಜಿಸಿದ್ದ ರಕ್ತದಾನ ಅಭಿಯಾನ ಯಶಸ್ವಿಯಾಗಿ ಮುಂದುವರೆದಿದೆ. ದಾವಣಗೆರೆಯ ಬಿಐಇಟಿ ಕಾಲೇಜಿನಲ್ಲಿ ನಡೆದ ಅಭಿಯಾನದಲ್ಲಿ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿರುವುದು ಶ್ಲಾಘನೀಯ.ಸುಮಾರು 250 ಮಂದಿ ರಕ್ತದಾನ ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಸೆ.30ರವರೆಗೆ ರಕ್ತದಾನ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.
ರಕ್ತದಾನ ಅಭಿಯಾನವು ಬಾಪೂಜಿ ಎಜುಕೇಶನಲ್ ಅಸೋಸಿಯೇಷನ್ ಸಂಸ್ಥೆಗಳಾದ್ಯಂತ ಸೆಪ್ಟೆಂಬರ್ 19ರಿಂದ ಪ್ರಾರಂಭಗೊಂಡಿದೆ.ಪ್ರತಿದಿನ 9 ರಿಂದ ಸಂಜೆ 5 ಗಂಟೆಯವರೆಗೆ ರಕ್ತದಾನ ಶಿಬಿರ ನಡೆಯುತ್ತಿದೆ.ಇದೇ ಸೆ.30 ರಂದು ಅಭಿಯಾನ ಕೊನೆಗೊಳ್ಳಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು