11:23 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

“ಡ್ರಾಪ್ ಆಫ್ ಹೋಪ್” ರಕ್ತದಾನ ಅಭಿಯಾನಕ್ಕೆ ಸ್ಪಂದನೆ; 250 ಮಂದಿಯಿಂದ ಯಶಸ್ವಿ ರಕ್ತದಾನ; ಸಂಸದರ ಶ್ಲಾಘನೆ.

28/09/2025, 11:35

ದಾವಣಗೆರೆ(reporterkarnataka.com); ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರ 58ನೇ ಜನ್ಮದಿನಾಚರಣೆಯ ಅಂಗವಾಗಿ, ಎಸ್‌ಎಸ್ ಕೇರ್ ಟ್ರಸ್ಟ್ ವಿದ್ಯಾರ್ಥಿ ವಿಭಾಗವು “ಡ್ರಾಪ್ ಆಫ್ ಹೋಪ್” ಎಂಬ ಶೀರ್ಷಿಕೆಯಡಿ ಆಯೋಜಿಸಿದ್ದ ರಕ್ತದಾನ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದ್ದು ನಗರದ ಬಿಐಇಟಿ ಕಾಲೇಜಿನಲ್ಲಿ ಒಂದೇ ದಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 250 ಮಂದಿ ರಕ್ತದಾನ ಮಾಡಿದ್ದಾರೆ.
ರಕ್ತದಾನ ಮಾಡಿದ ಎಲ್ಲರಿಗೂ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅಭಿನಂದಿಸಿದ್ದಾರೆ.


ಈ ವೇಳೆ ಮಾತನಾಡಿದ ಸಂಸದರು “ಡ್ರಾಪ್ ಆಫ್ ಹೋಪ್” ಎಂಬ ಶೀರ್ಷಿಕೆಯಡಿ ಆಯೋಜಿಸಿದ್ದ ರಕ್ತದಾನ ಅಭಿಯಾನ ಯಶಸ್ವಿಯಾಗಿ ಮುಂದುವರೆದಿದೆ. ದಾವಣಗೆರೆಯ ಬಿಐಇಟಿ ಕಾಲೇಜಿನಲ್ಲಿ ನಡೆದ ಅಭಿಯಾನದಲ್ಲಿ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿರುವುದು ಶ್ಲಾಘನೀಯ.ಸುಮಾರು 250 ಮಂದಿ ರಕ್ತದಾನ ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಸೆ.30ರವರೆಗೆ ರಕ್ತದಾನ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.
ರಕ್ತದಾನ ಅಭಿಯಾನವು ಬಾಪೂಜಿ ಎಜುಕೇಶನಲ್ ಅಸೋಸಿಯೇಷನ್ ಸಂಸ್ಥೆಗಳಾದ್ಯಂತ ಸೆಪ್ಟೆಂಬರ್ 19ರಿಂದ ಪ್ರಾರಂಭಗೊಂಡಿದೆ.ಪ್ರತಿದಿನ 9 ರಿಂದ ಸಂಜೆ 5 ಗಂಟೆಯವರೆಗೆ ರಕ್ತದಾನ ಶಿಬಿರ ನಡೆಯುತ್ತಿದೆ.ಇದೇ ಸೆ.30 ರಂದು ಅಭಿಯಾನ ಕೊನೆಗೊಳ್ಳಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು