3:20 PM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

“ಡ್ರಾಪ್ ಆಫ್ ಹೋಪ್” ರಕ್ತದಾನ ಅಭಿಯಾನಕ್ಕೆ ಸ್ಪಂದನೆ; 250 ಮಂದಿಯಿಂದ ಯಶಸ್ವಿ ರಕ್ತದಾನ; ಸಂಸದರ ಶ್ಲಾಘನೆ.

28/09/2025, 11:35

ದಾವಣಗೆರೆ(reporterkarnataka.com); ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರ 58ನೇ ಜನ್ಮದಿನಾಚರಣೆಯ ಅಂಗವಾಗಿ, ಎಸ್‌ಎಸ್ ಕೇರ್ ಟ್ರಸ್ಟ್ ವಿದ್ಯಾರ್ಥಿ ವಿಭಾಗವು “ಡ್ರಾಪ್ ಆಫ್ ಹೋಪ್” ಎಂಬ ಶೀರ್ಷಿಕೆಯಡಿ ಆಯೋಜಿಸಿದ್ದ ರಕ್ತದಾನ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದ್ದು ನಗರದ ಬಿಐಇಟಿ ಕಾಲೇಜಿನಲ್ಲಿ ಒಂದೇ ದಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 250 ಮಂದಿ ರಕ್ತದಾನ ಮಾಡಿದ್ದಾರೆ.
ರಕ್ತದಾನ ಮಾಡಿದ ಎಲ್ಲರಿಗೂ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅಭಿನಂದಿಸಿದ್ದಾರೆ.


ಈ ವೇಳೆ ಮಾತನಾಡಿದ ಸಂಸದರು “ಡ್ರಾಪ್ ಆಫ್ ಹೋಪ್” ಎಂಬ ಶೀರ್ಷಿಕೆಯಡಿ ಆಯೋಜಿಸಿದ್ದ ರಕ್ತದಾನ ಅಭಿಯಾನ ಯಶಸ್ವಿಯಾಗಿ ಮುಂದುವರೆದಿದೆ. ದಾವಣಗೆರೆಯ ಬಿಐಇಟಿ ಕಾಲೇಜಿನಲ್ಲಿ ನಡೆದ ಅಭಿಯಾನದಲ್ಲಿ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿರುವುದು ಶ್ಲಾಘನೀಯ.ಸುಮಾರು 250 ಮಂದಿ ರಕ್ತದಾನ ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಸೆ.30ರವರೆಗೆ ರಕ್ತದಾನ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.
ರಕ್ತದಾನ ಅಭಿಯಾನವು ಬಾಪೂಜಿ ಎಜುಕೇಶನಲ್ ಅಸೋಸಿಯೇಷನ್ ಸಂಸ್ಥೆಗಳಾದ್ಯಂತ ಸೆಪ್ಟೆಂಬರ್ 19ರಿಂದ ಪ್ರಾರಂಭಗೊಂಡಿದೆ.ಪ್ರತಿದಿನ 9 ರಿಂದ ಸಂಜೆ 5 ಗಂಟೆಯವರೆಗೆ ರಕ್ತದಾನ ಶಿಬಿರ ನಡೆಯುತ್ತಿದೆ.ಇದೇ ಸೆ.30 ರಂದು ಅಭಿಯಾನ ಕೊನೆಗೊಳ್ಳಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು