9:09 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಶಾಂತಿ ಮರುಸ್ಥಾಪನೆ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನಿಯೋಗ ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕರ ಜತೆ ಚರ್ಚೆ

06/06/2025, 12:29

ಮಂಗಳೂರು(reporterkarnataka.com): ದ.ಕ.ಜಿಲ್ಲೆಯಲ್ಲಿ ಶಾಂತಿ ಮರುಸ್ಥಾಪನೆ ಬಗ್ಗೆ ಅಧ್ಯಯನ ನಡೆಸಿ ಸರಕಾರಕ್ಕೆ ವರದಿ ನೀಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ನಿಯೋಗ ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕರನ್ನು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಗುರುವಾರ ಭೇಟಿ ಮಾಡಿ ಸಲಹೆ ಪಡೆಯಿತು.
ಈ ಸಂದರ್ಭ ಕೋಮು ಘರ್ಷಣೆಗಳಿಂದ ಜಿಲ್ಲೆಯ ಅಭಿವೃದ್ಧಿ ಮೇಲಾದ ಪರಿಣಾಮ, ಜಿಲ್ಲೆಯಲ್ಲಿ ಶಾಂತಿ ಮರು ಸ್ಥಾಪನೆಗೆ ವಹಿಸಬೇಕಾದ ಕ್ರಮಗಳು, ಅಹಿತರ ಘಟನೆಗಳ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸೈಯದ್ ನಾಸೀರ್ ಹುಸೈನ್, ಎಐಸಿಸಿ ಕಾರ್ಯದರ್ಶಿ ರೋಜಿ ಜಾನ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಶಾಸಕ ಎನ್.ಎ ಹ್ಯಾರಿಸ್, ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್.ಸುದರ್ಶನ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಮಾಜಿ ಸಂಸದ ಜಯಪ್ರಕಾಶ್ ಹೆಗ್ಗಡೆ ಅವರಿದ್ದ ಕೆಪಿಸಿಸಿ ನೀಯೋಗ ಅವಲೋಕನ ನಡೆಸಿತು.
ಸಭೆಯಲ್ಲಿ ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್, ಮಾಜಿ ರಾಜ್ಯ ಸಭಾ ಸದಸ್ಯರಾದ ಬಿ ಇಬ್ರಾಹಿಂ, ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್.ಆರ್ ಪೂಜಾರಿ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಜಿ ಎ ಬಾವ, ಮಿಥುನ್ ರೈ, ರಕ್ಷಿತ್ ಶಿವರಾಂ, ಎಂ.ಎಸ್.ಮಹಮ್ಮದ್, ಮುಖಂಡರಾದ ಜಿ.ಕೃಷ್ಣಪ್ಪ ಸುಳ್ಯ, ಯು.ಕೆ.ಮೋನು, ಸದಾಶಿವ ಉಳ್ಳಾಲ್, ಮಮತಾ ಗಟ್ಟಿ, ಶಶಿಧರ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು