3:21 AM Monday29 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ಶಾಂತಿ ಮರುಸ್ಥಾಪನೆ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನಿಯೋಗ ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕರ ಜತೆ ಚರ್ಚೆ

06/06/2025, 12:29

ಮಂಗಳೂರು(reporterkarnataka.com): ದ.ಕ.ಜಿಲ್ಲೆಯಲ್ಲಿ ಶಾಂತಿ ಮರುಸ್ಥಾಪನೆ ಬಗ್ಗೆ ಅಧ್ಯಯನ ನಡೆಸಿ ಸರಕಾರಕ್ಕೆ ವರದಿ ನೀಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ನಿಯೋಗ ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕರನ್ನು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಗುರುವಾರ ಭೇಟಿ ಮಾಡಿ ಸಲಹೆ ಪಡೆಯಿತು.
ಈ ಸಂದರ್ಭ ಕೋಮು ಘರ್ಷಣೆಗಳಿಂದ ಜಿಲ್ಲೆಯ ಅಭಿವೃದ್ಧಿ ಮೇಲಾದ ಪರಿಣಾಮ, ಜಿಲ್ಲೆಯಲ್ಲಿ ಶಾಂತಿ ಮರು ಸ್ಥಾಪನೆಗೆ ವಹಿಸಬೇಕಾದ ಕ್ರಮಗಳು, ಅಹಿತರ ಘಟನೆಗಳ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸೈಯದ್ ನಾಸೀರ್ ಹುಸೈನ್, ಎಐಸಿಸಿ ಕಾರ್ಯದರ್ಶಿ ರೋಜಿ ಜಾನ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಶಾಸಕ ಎನ್.ಎ ಹ್ಯಾರಿಸ್, ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್.ಸುದರ್ಶನ್, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಮಾಜಿ ಸಂಸದ ಜಯಪ್ರಕಾಶ್ ಹೆಗ್ಗಡೆ ಅವರಿದ್ದ ಕೆಪಿಸಿಸಿ ನೀಯೋಗ ಅವಲೋಕನ ನಡೆಸಿತು.
ಸಭೆಯಲ್ಲಿ ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್, ಮಾಜಿ ರಾಜ್ಯ ಸಭಾ ಸದಸ್ಯರಾದ ಬಿ ಇಬ್ರಾಹಿಂ, ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್.ಆರ್ ಪೂಜಾರಿ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಜಿ ಎ ಬಾವ, ಮಿಥುನ್ ರೈ, ರಕ್ಷಿತ್ ಶಿವರಾಂ, ಎಂ.ಎಸ್.ಮಹಮ್ಮದ್, ಮುಖಂಡರಾದ ಜಿ.ಕೃಷ್ಣಪ್ಪ ಸುಳ್ಯ, ಯು.ಕೆ.ಮೋನು, ಸದಾಶಿವ ಉಳ್ಳಾಲ್, ಮಮತಾ ಗಟ್ಟಿ, ಶಶಿಧರ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು