11:33 AM Wednesday24 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಮಹಿಳಾ ಪತ್ರಕರ್ತರಿಗೆ ನಿರ್ಬಂಧ | ಪ್ರಧಾನಿ ಉತ್ತರಿಸಲಿ: ಪದ್ಮರಾಜ್ ಆರ್. ಪೂಜಾರಿ ಆಗ್ರಹ

12/10/2025, 16:40

ಮಂಗಳೂರು(reporterkarnataka.com):ಭಾರತ ಪ್ರವಾಸದಲ್ಲಿರುವ ಅಫ್ಘಾನಿಸ್ಥಾನ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಾಖಿ ವಿದೇಶಾಂಗ ಸಚಿವ ಜೈಶಂಕರ್ ಜತೆ ದ್ವಿಪಕ್ಷೀಯ ಮಾತುಕತೆ ಬಳಿಕ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ವೇಳೆ ಮಹಿಳಾ ಪತ್ರಕರ್ತರ ಪಾಲ್ಗೊಳ್ಳುವಿಕೆಗೆ ನಿರ್ಬಂಧ ಹೇರಿರುವುದು ಆಘಾತಕಾರಿ ಎಂದು ಕಾಂಗ್ರೆಸ್ ಮುಖಂಡರ ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ.
ಭಾರತೀಯರಾದ ನಾವು ಮಹಿಳೆಯರನ್ನು ಪೂಜನೀಯ ಭಾವನೆಯಿಂದ ನೋಡುತ್ತಿದ್ದೇವೆ. ಪ್ರತೀ ಕ್ಷೇತ್ರದಲ್ಲೂ ಮಹಿಳೆಯರಿಗೆ ಸಮಾನ ಅವಕಾಶಗಳಿವೆ. ಆದರೆ ಭಾರತದಲ್ಲೂ ತಾಲಿಬಾನಿ ನೀತಿ ಅನುಸರಿಸಿದ್ದು ಖಂಡನೀಯ. ಮಹಿಳಾ ಸ್ವಾತಂತ್ರ್ಯ ಬಗ್ಗೆ ಮಾತನಾಡೋ ನಮ್ಮ‌ಪ್ರಧಾನಿ‌ ನರೇಂದ್ರ ಮೋದಿಯವರು ಈಗ ತಾರತಮ್ಯ ಆಗಿದ್ದರೂ ಮೌನ ವಹಿಸಿರುವುದು ಅನುಮಾನ ಹುಟ್ಟಿಸುವಂತಿದೆ. ಈ ಹಿಂದೆ ಕಾಂಗ್ರೆಸ್ ನೇತೃತ್ವದ ಸರಕಾರವನ್ನು ತಾಲಿಬಾನಿ ಮನಸ್ಥಿತಿಯ ಸರ್ಕಾರ ಎಂದು ಟೀಕಿಸುತ್ತಿದ್ದ ಬಿಜೆಪಿಯವರು, ಈಗ ಇವರ ಮನಸ್ಥಿತಿ ಏನು ಎಂಬುದು ಜನತೆಗೆ ತಿಳಿಯುವಂತಾಗಿದೆ ಎಂದಿದ್ದಾರೆ.
ಅಫ್ಘಾನ್ ಸ್ತ್ರೀಯರಿಗೆ ಶಿಕ್ಷಣ, ಉದ್ಯೋಗದಿಂದ ವಂಚಿತರನ್ನಾಗಿಸಿರುವ ತಾಲಿಬಾನ್ ಆಡಳಿತವು ತನ್ನ ಕೆಟ್ಟ ಮನಃಸ್ಥಿತಿಯನ್ನು ಭಾರತದಲ್ಲೂ ಪ್ರದರ್ಶಿಸಿರುವ ಬಗ್ಗೆ ಕೂಡಲೇ ಪ್ರಧಾನಿಯವರು ಮೌನ ಮುರಿಯಲಿ. ಸಂವಿಧಾನದ ನಾಲ್ಕನೇ ಅಂಗ ಎನ್ನುವ ಮಾಧ್ಯಮ ಪ್ರತಿನಿಧಿಗಳಿಗೆ ಇಂತಹ ಪರಿಸ್ಥಿತಿಯಾದರೆ ಮುಂದಿನ ದಿನಗಳಲ್ಲಿ ನಾವು ಯಾವ ಸ್ಥಿತಿಗೆ ತಲುಪಬಹುದು? ಈ ಬಗ್ಗೆ ಪ್ರಧಾನಿ ಮೋದಿಯವರು ಉತ್ತರಿಸಲಿ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು