10:17 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ನಿವೃತ್ತ ಸರಕಾರಿ ನೌಕರರ ವೇತನ ನಷ್ಟ ಬೇಡಿಕೆ: ನಿಯೋಗದಿಂದ ಮುಖ್ಯಮಂತ್ರಿ ಭೇಟಿ: ಸಿಎಂ ಸಕರಾತ್ಮಕ ಸ್ಪಂದನೆ

23/04/2025, 21:43

ಮಂಗಳೂರು(reporterkarnataka.com): ಕರ್ನಾಟಕ ನಿವೃತ್ತ ಸರಕಾರಿ ನೌಕರರ ವೇದಿಕೆ ಕಳೆದ ಕೆಲವು ತಿಂಗಳುಗಳಿಂದ ತಮ್ಮ ಬೇಡಿಕೆಯ ಈಡೇರಿಸಲು ಹೋರಾಟ ನಡೆಸುತ್ತಿದ್ದು, ಇತ್ತೀಚೆಗೆ ಎಂಎಲ್‌ಸಿ ಐವನ್ ಡಿಸೋಜ ಅವರ ಜತೆಗೆ ವೇದಿಕೆಯ ಪದಾಧಿಕಾರಿಗಳು ಬೆಂಗಳೂರಿನ ಮುಖ್ಯಮಂತ್ರಿ ಅವರ ಗೃಹಕಚೇರಿ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.


7ನೇ ವೇತನ ಆಯೋಗದಲ್ಲಿ ಜು.1,2022ರಿಂದ ಜು.31,2024ರ ಅವಧಿಯಲ್ಲಿ ನಿವೃತ್ತರಾದ ಕರ್ನಾಟಕ ರಾಜ್ಯ ಸರಕಾರಿ ನೌಕರರಿಗೆ ಡಿ.ಸಿ.ಆರ್.ಜಿ. ಕಮ್ಯೂಟೇಶನ್ ಹಾಗೂ ಗಳಿಕೆ ರಜೆ ನಗದೀಕರಣಗಳನ್ನು ಆರನೇ ವೇತನ ಆಯೋಗದ ಅನ್ವಯ ನೀಡಿದ್ದು, ಇದರಿಂದ ನೌಕರರಿಗೆ ಆರ್ಥಿಕ ನಷ್ಟ ಉಂಟಾಗಿರುವುದನ್ನು ಗಮನಕ್ಕೆ ತರಲಾಯಿತು. ಮುಖ್ಯಮಂತ್ರಿ ಯವರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ನಿವೃತ್ತ ಸರಕರಿ ನೌಕರರ ವೇದಿಕೆಯ ರಾಜ್ಯ ಮಹಾಪ್ರಧಾನ ಸಂಚಾಲಕ ಎಂ.ಪಿ.ಎಂ.ಷಣ್ಮುಗಯ್ಯ, ಸಂಚಾಲಕರಾದ ಸ್ಟ್ಯಾನಿ ತಾವ್ರೋ, ಸುಜಾತ, ಜಲಜ,ರಂಗಣ್ಣ, ಸಿರಿಲ್ ರಾಬರ್ಟ್ ಡಿಸೋಜ, ಜಗದೀಶ್ ರಾವ್, ಮುಬಾರಕ್, ಮಂಜುಳಾರಾಣಿ ಹಾಗೂ ಮಹೇಶ್ ಉಪಸ್ಥಿತರಿದ್ದರು.
ಎಂಎಲ್‌ಸಿ ಐವನ್ ಡಿಸೋಜ ಅವರು ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ವೇದಿಕೆಯ ಬೇಡಿಕೆ ಈಡೇರಿಸುವ ಕೆಲಸದಲ್ಲಿ ಸಾಕಷ್ಟು ಮುತುವರ್ಜಿ ವಹಿಸಿದ್ದು ವೇದಿಕೆಯ ಪದಾಧಿಕಾರಿಗಳು ಕೃತಜ್ಞತೆ ಸಲ್ಲಿಸಿದ್ದಾರೆ. ಮುಂದೆ ನಿರಂತರವಾಗಿ ಸಿಎಂ ಅವರ ಗಮನಕ್ಕೆ ವಿಚಾರವನ್ನು ತರುವ ಮೂಲಕ ಬೇಡಿಕೆ ಈಡೇರಿಸಲು ಸತತ ಪ್ರಯತ್ನ ಪಡಲಾಗುವುದು ಎಂದು ಸಂಚಾಲಕ ಸ್ಟ್ಯಾನಿ ತಾವ್ರೋ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು