5:31 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಭಾರತ ಸ್ಕೌಟ್ಸ್‌ ಮತ್ತು ಗೈಡ್ಸ್‌ ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದ ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ: ಆಸ್ಪತ್ರೆ ದಾಖಲು

03/04/2026, 20:47

ಬೆಂಗಳೂರು(reporterkarnataka.com): ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ನಗರದ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ ಭಾರತ ಸ್ಕೌಟ್ಸ್‌ ಮತ್ತು ಗೈಡ್ಸ್‌ ಆಯೋಜಿಸಿದ್ದ ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಅವರ ಕಾರ್ಯಕ್ರಮದಲ್ಲಿ ಸಂತೋಷ್‌ ಹೆಗ್ಡೆ ಅವರು ಏಕಾಏಕಿ ಕುಸಿದು ಬಿದ್ದುದರಿಂದ ಆತಂಕ ಉಂಟಾಯಿತು. ಕಾರ್ಯಕ್ರಮಕ್ಕೆ ಆಗಮಿಸಿ ಪಿಜಿಆರ್ ಸಿಂಧ್ಯಾ ಅವರೊಂದಿಗೆ ಕುಳಿತು ಮಾತನಾಡುತ್ತಿದ್ದ ಹೆಗ್ಡೆ ಅವರಿಗೆ ತಲೆ ಸುತ್ತು ಬಂದ ಹಾಗೆ ಆಯಿತು. ಕುಳಿತವರೇ ಅಲ್ಲಿಯೇ ಕುಸಿದು ಬಿದ್ದರು. ಅಲ್ಲಿದ್ದವರು ನೀರು ಕುಡಿಸಿದರೂ ಚೇತರಿಕೆ ಕಾಣಲಿಲ್ಲ.
ಕಾರ್ಯಕ್ರಮಕ್ಕೆ ಬಂದಿದ್ದ ವಿಧಾನಸಭೆಯ ಸ್ಪೀಕರ್‌ ಯು.ಟಿ.ಖಾದರ್ ಅವರ ಸರ್ಕಾರಿ ವಾಹನದಲ್ಲಿ ತಕ್ಷಣವೇ ಸಂತೋಷ್‌ ಹೆಗ್ಡೆ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.


‘ಮಧುಮೇಹದಿಂದ ಸಂತೋಷ್ ಹೆಗ್ಡೆ ಅವರು ಬಳಲುತ್ತಿದ್ದು, ಏಕಾಏಕಿ ರಕ್ತದ ಸಕ್ಕರೆ ಅಂಶದಲ್ಲಿ ಕುಸಿತ ಉಂಟಾಗಿದ್ದರಿಂದ ಈ ರೀತಿ ಆಗಿರಬಹುದು. ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಪಂದಿಸುತ್ತಿದ್ದಾರೆ’ ಎಂದು ವೈದ್ಯರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು