4:35 AM Monday15 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಭತ್ತ ಸಂಶೋಧನೆ: ಫಿಲಿಪೈನ್ಸ್ ನೊಂದಿಗೆ ಮಹತ್ವದ ಒಡಂಬಡಿಕೆಗೆ ಸಚಿವ ಚಲುವರಾಯಸ್ವಾಮಿ ಸಹಿ

16/10/2025, 10:12

ಮನಿಲಾ(ಫಿಲಿಪೈನ್ಸ್):(reporterkarnataka.com):
ರಾಜ್ಯದಲ್ಲಿ ಭತ್ತದ ತಳಿಗಳ ಆಧುನಿಕ ಸಂಶೋಧನೆ ಮತ್ತು ಸಂವರ್ಧನೆಗೆ ನೆರವಾಗುವ ಕುರಿತು ಫಿಲಿಫೈನ್ಸ್ ನ ಅಂತಾರಾಷ್ಟ್ರೀಯ ಭತ್ತ ಸಂಶೋಧನಾ ಕೇಂದ್ರದೊಂದಿಗೆ ಮಂಡ್ಯ ಕೃಷಿ ವಿಶ್ವವಿದ್ಯಾಲಯ ಮಹತ್ವದ ಒಡಂಬಡಿಕೆ ಮಾಡಿಕೊಂಡಿದೆ.
ಫಿಲಿಪೈನ್ಸ್ ನ ಮನಿಲಾದಲ್ಲಿರುವ ಅಂತಾರಾಷ್ಟ್ರೀಯ ಭತ್ತ ಸಂಶೋಧನಾ ಕೇಂದ್ರಕ್ಕೆ ಉನ್ನತ ಮಟ್ಟದ ನಿಯೋಗದೊಂದಿಗೆ ತೆರಳಿರುವ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಒಪ್ಪಂದಕ್ಕೆ ಸಹಿ ಮಾಡಿದರು.


ರಾಜ್ಯದಲ್ಲಿ ನೆರೆ ಹಾವಳಿ ,ಬರ ಪರಿಸ್ಥಿತಿ ಗಳು ಕರಾವಳಿ,‌ಮಲೆನಾಡು ಬಯಲು ಸೀಮೆ ವಿಭಿನ್ನ ಭೌಗೋಳಿಕ ಪರಿಸರಕ್ಕೆ ಹೊಂದಾಣಿಕೆಯಾಗುವ ವಿವಿಧ ಜೈವಿಕ, ಅಜೈವಿಕ ಒತ್ತಡಗಳಿಗೆ ನಿರೋಧಕತೆ ಜೊತೆಗೆ ಪೌಷ್ಠಿಕಾಂಶ ಉಳ್ಳ, ಅಧಿಕ ಇಳುವರಿ ತರುವ ಬೇಸಾಯ ಕ್ರಮಗಳು ಮತ್ತು ಭತ್ತದ ತಳಿಗಳ ಸಂಶೋಧನೆಗೆ ಈ ಒಡಂಬಡಿಕೆ ನೆರವಾಗಲಿದೆ.
ಇದೇ ಸಂದರ್ಭದಲ್ಲಿ
ಕರ್ನಾಟಕದಲ್ಲಿಯೂ ಅಂತರಾಷ್ಟ್ರೀಯ ಮಟ್ಟದ ಭತ್ತ ಸಂಶೋಧನಾ ಕೇಂದ್ರ ಸ್ಥಾಪನೆ ಬಗ್ಗೆಯೂ ಸಚಿವರು ಮಹತ್ವದ ಚರ್ಚೆ ನಡೆಸಿದರು.
ಅಲ್ಲದೆ ಭತ್ತದ ಮಹತ್ವ , ಉಭಯ ದೇಶಗಳು ಅನುಸರಿಸುತ್ತಿರುವ ಬೇಸಾಯ ಕ್ರಮಗಳು,ಮೌಲ್ಯ ವರ್ಧನೆಗೆ ಅನುಸರಿಸಬೇಕಾದ ಮಾರ್ಗೋಪಾಯಗಳ ಬಗ್ಗೆ ಮಾಹಿತಿ ಹಾಗೂ ಅನುಭವಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು.ಭತ್ತದ ತಳಿಗಖ ಸಂರಕ್ಷಣೆ‌,ಸಂಶೋಧನೆಗೆ ಕರ್ನಾಟಕ ಸರ್ಕಾರ ತೋರುತ್ತಿರುವ ಕಾಳಜಿ ಮತ್ತು ರೈತ ಪರ‌ ಯೋಜನೆಗಳ ಬಗ್ಗೆ ಫಿಲಿಪೈನ್ಸ್ ನ ಅಂತರಾಷ್ಟ್ರೀಯ ಭತ್ತ ಸಂಶೋಧನಾ ಕೇಂದ್ರದ ಅಧಿಕಾರಿಗಳು ಮೆಚ್ಚುಗೆ ಸೂಚಿಸಿ ಇದಕ್ಕೆ ಕಾರಣರಾಗಿರುವ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸಿದರು.
1945 ರಿಂದಲೂ ಭಾರತ ಮತ್ತು ಫಿಲಿಪೈನ್ಸ್ ನಡುವೆ ಇರುವ ಬಾಂಧವ್ಯ ,ಕೃಷಿ ಕ್ಷೇತ್ರದ ಸಹಕಾರಗಳನ್ನು ಸಹ ಸ್ಮರಿಸಿ ,ಶ್ಲಾಘಿಸಲಾಯಿತು.
ಅಂತಾರಾಷ್ಟ್ರೀಯ ಭತ್ತದ ಸಂಶೋಧನಾ ಕೇಂದ್ರದ ಉಪ ಮಹಾ ನಿರ್ದೇಶಕರಾದ ಜುನೆಲ್ ಸಯಾನೋ ,ಡಾ ಸಂಕಲ್ಪ್ ಭೋಸ್ಲೆ,
ಮಂಡ್ಯ ಕೃಷಿ ವಿ.ವಿ ವಿಶೇಷಾಧಿಕಾರಿ ಡಾ ಕೆ.ಎಂ ಹರಿಣಿ‌ಕುಮಾರ್, ಡಾ ವೇಣು ಪ್ರಸಾದ್,ಡಾ ಮಲ್ಲಿಕಾರ್ಜುನ ಸ್ವಾಮಿ,ಕೃಷಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ ಎ.ಬಿ .ಪಾಟೀಲ್ ವಿ.ಸಿ ಫಾರಂ ನ ಭತ್ತದ ತಳಿ ವಿಜ್ಞಾನಿ ಡಾ ದೀಪಕ್,ರಾಯಚೂರು ಕೃಷಿ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನಿ ಡಾ ಸುಜಯ್ ಮತ್ತಿತರರು ಉಪಸ್ಥಿತರಿದ್ದರು.
ಇದೇ ವೇಳೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಅಧಿಕಾರಿಗಳ ತಂಡದೊಂದಿಗೆ ಅಂತಾರಾಷ್ಟ್ರೀಯ ಭತ್ತದ ಸಂಶೋಧನಾ ಕೇಂದ್ರದ ಜೀನ್ ಬ್ಯಾಂಕ್ ಒಳಗೊಂಡಂತೆ ವಿವಿಧ ಪ್ರಯೋಗಾಲಯಗಳು ಮತ್ತು ತಾಕುಗಳಿಗೆ ಭೇಟಿ ನೀಡಿ‌ಮಾಹಿತಿ ಪಡೆದುಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು