6:51 AM Wednesday2 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಅನ್ನದಾತ ಆತ್ಮಹತ್ಯೆ: ಕಿರುಕುಳ ನೀಡಿದ ಬ್ಯಾಂಕ್ ಎದುರು ರೈತನ ಪಾರ್ಥಿವ… Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ:… Delhi | ರಾಜ್ಯದ್ದು “ಜನ-ಕರ” ವಸೂಲಿ ಸರಕಾರ: ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ… Chikkamagaluru | ಕೆಮ್ಮಣ್ಣುಗುಂಡಿ ಸಮೀಪ ವಿದ್ಯುತ್ ಶಾಕ್ ನಿಂದ ಕಾಡಾನೆ ದಾರುಣ ಸಾವು ಕೂಡ್ಲಿಗಿ: ರಂಜಾನ್ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಭಾಗಿ ಭಾಗಿ Kolara | ಶ್ರೀನಿವಾಸಪುರದಲ್ಲಿ ಸಂಭ್ರಮ- ಸಡಗರದಲ್ಲಿ ಈದ್-ಉಲ್-ಫಿತರ್ ಆಚರಣೆ: ಸಾಮೂಹಿಕ ಪ್ರಾರ್ಥನೆ PDO | ಮಾದರಿ ಗ್ರಾಮ ಪಂಚಾಯತಿ ನಿರ್ಮಾಣದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ… Bangalore | ಸಬಲೀಕರಣ ಜತೆಗೆ ಮಹಿಳಾ ಸುರಕ್ಷತೆ: ‘ಬಿ.ಸೇಫ್’ ಸಮೀಕ್ಷಾ ವರದಿ ಬಿಡುಗಡೆ Bangalore | ಬೇಡಿಕೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಬ್ಯಾಂಕ್ ನಿವೃತ್ತರ ಒಕ್ಕೂಟಗಳ… MSIL | ಸರಕಾರಿ, ಖಾಸಗಿ ಉತ್ಪನ್ನಗಳ ಮಾರಾಟ, ಖರೀದಿಗೆ ನೆರವಾಗಲಿದೆ ಇ ಪೋರ್ಟಲ್‌

ಇತ್ತೀಚಿನ ಸುದ್ದಿ

ಮಂಗಳೂರು: ರೊನಿ ಅರುಣ್ ಅವರ ರಿಕ್ಷಾ ಡೈರಿ ಲೋಕಾರ್ಪಣೆ

12/05/2024, 18:34

ಮಂಗಳೂರು(reporterlarnataka.com): ಮಾಂಡ್ ಸೊಭಾಣ್ ಪ್ರಕಾಶನದ 22ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಳ್ಳಾಲ ಸೋಮೇಶ್ವರದಲ್ಲಿರುವ ಪಶ್ಚಿಮ್ ಟ್ರಸ್ಟ್ ಸಭಾಂಗಣದಲ್ಲಿ ಮೇ 9ರಂದು ಲೋಕಾರ್ಪನೆಗೊಂಡಿತು. ಹಿರಿಯ ಲೇಖಕಿ ಮತ್ತು ಪ್ರಕಾಶಕಿ ಗ್ಲೇಡಿಸ್ ರೇಗೊ ಪುಸ್ತಕ ಬಿಡುಗಡೆಗೊಳಿಸಿದರು.
ಮುಖ್ಯ ಅತಿಥಿ ಪಶ್ಚಿಮ್ ಟ್ರಸ್ಟ್ ನಿರ್ದೇಶಕ ರೋಹಿತ್ ಸಾಂಕ್ತುಸ್ ಶುಭ ಹಾರೈಸಿದರು. ಮಾಂಡ್ ಸೊಭಾಣ್ ಗುರಿಕಾರ ಎರಿಕ್ ಒಝೇರಿಯೊ, ಅಧ್ಯಕ್ಷ ಲುವಿ ಪಿಂಟೊ, ತೆಲೊಕಾ ಸಂಸ್ಥೆಯ ನಿರ್ದೇಶಕಿ ಕ್ಲಾರಾ ಡಿಕುನ್ಹಾ ಉಪಸ್ಥಿತರಿದ್ದರು. ಲೇಖಕ ರೊನಿ ಅರುಣ್ ಪ್ರಸ್ತಾವನೆಗೈದು ವಿತೊರಿ ಕಾರ್ಕಳ ನಿರೂಪಿಸಿದರು.
ರಿಕ್ಷಾ ಡೈರಿ ದಿರ್ವೆಂ ಕೊಂಕಣಿ ಮಾಸಿಕದಲ್ಲಿ ಪ್ರಕಟವಾದ 44 ಲೇಖನಗಳ ಸಂಗ್ರಹ. ಕಲಾವಿದ ವಿಲ್ಸನ್ ಕಯ್ಯಾರ್ ಮುಖಪುಟ ರಚಿಸಿದ್ದಾರೆ. ಈ ಮೊದಲು ʻಬಿಡಾರ್ʼ ಕಥಾಸಂಕಲನ ಹಾಗೂ ʻಥಕಾನಾತ್‌ಲ್ಲೊ ಝುಜಾರಿʼ (ಜೀವನ ಚರಿತ್ರೆ) ಪುಸ್ತಕಗಳನ್ನು ರೊನಿ ಅರುಣ್ ಬರೆದಿದ್ದು ʻಥಕಾನಾತ್‌ಲ್ಲೊ ಝುಜಾರಿʼ ಪುಸ್ತಕಕ್ಕೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ ಲಭಿಸಿದೆ. ರಿಕ್ಷಾಡ ಡೈರಿ ಪುಸ್ತಕದ ರಿಯಾಯಿತಿ ಬೆಲೆ 100/- ಮಾತ್ರ. ಪುಸ್ತಕಕ್ಕಾಗಿ ಮಾಂಡ್ ಸೊಭಾಣ್ ಕಚೇರಿ ಅಥವಾ ಲೇಖಕರನ್ನು ಸಂಪರ್ಕಿಸಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು