6:05 AM Sunday11 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಮಂಗಳೂರು: ರೊನಿ ಅರುಣ್ ಅವರ ರಿಕ್ಷಾ ಡೈರಿ ಲೋಕಾರ್ಪಣೆ

12/05/2024, 18:34

ಮಂಗಳೂರು(reporterlarnataka.com): ಮಾಂಡ್ ಸೊಭಾಣ್ ಪ್ರಕಾಶನದ 22ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಳ್ಳಾಲ ಸೋಮೇಶ್ವರದಲ್ಲಿರುವ ಪಶ್ಚಿಮ್ ಟ್ರಸ್ಟ್ ಸಭಾಂಗಣದಲ್ಲಿ ಮೇ 9ರಂದು ಲೋಕಾರ್ಪನೆಗೊಂಡಿತು. ಹಿರಿಯ ಲೇಖಕಿ ಮತ್ತು ಪ್ರಕಾಶಕಿ ಗ್ಲೇಡಿಸ್ ರೇಗೊ ಪುಸ್ತಕ ಬಿಡುಗಡೆಗೊಳಿಸಿದರು.
ಮುಖ್ಯ ಅತಿಥಿ ಪಶ್ಚಿಮ್ ಟ್ರಸ್ಟ್ ನಿರ್ದೇಶಕ ರೋಹಿತ್ ಸಾಂಕ್ತುಸ್ ಶುಭ ಹಾರೈಸಿದರು. ಮಾಂಡ್ ಸೊಭಾಣ್ ಗುರಿಕಾರ ಎರಿಕ್ ಒಝೇರಿಯೊ, ಅಧ್ಯಕ್ಷ ಲುವಿ ಪಿಂಟೊ, ತೆಲೊಕಾ ಸಂಸ್ಥೆಯ ನಿರ್ದೇಶಕಿ ಕ್ಲಾರಾ ಡಿಕುನ್ಹಾ ಉಪಸ್ಥಿತರಿದ್ದರು. ಲೇಖಕ ರೊನಿ ಅರುಣ್ ಪ್ರಸ್ತಾವನೆಗೈದು ವಿತೊರಿ ಕಾರ್ಕಳ ನಿರೂಪಿಸಿದರು.
ರಿಕ್ಷಾ ಡೈರಿ ದಿರ್ವೆಂ ಕೊಂಕಣಿ ಮಾಸಿಕದಲ್ಲಿ ಪ್ರಕಟವಾದ 44 ಲೇಖನಗಳ ಸಂಗ್ರಹ. ಕಲಾವಿದ ವಿಲ್ಸನ್ ಕಯ್ಯಾರ್ ಮುಖಪುಟ ರಚಿಸಿದ್ದಾರೆ. ಈ ಮೊದಲು ʻಬಿಡಾರ್ʼ ಕಥಾಸಂಕಲನ ಹಾಗೂ ʻಥಕಾನಾತ್‌ಲ್ಲೊ ಝುಜಾರಿʼ (ಜೀವನ ಚರಿತ್ರೆ) ಪುಸ್ತಕಗಳನ್ನು ರೊನಿ ಅರುಣ್ ಬರೆದಿದ್ದು ʻಥಕಾನಾತ್‌ಲ್ಲೊ ಝುಜಾರಿʼ ಪುಸ್ತಕಕ್ಕೆ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ ಲಭಿಸಿದೆ. ರಿಕ್ಷಾಡ ಡೈರಿ ಪುಸ್ತಕದ ರಿಯಾಯಿತಿ ಬೆಲೆ 100/- ಮಾತ್ರ. ಪುಸ್ತಕಕ್ಕಾಗಿ ಮಾಂಡ್ ಸೊಭಾಣ್ ಕಚೇರಿ ಅಥವಾ ಲೇಖಕರನ್ನು ಸಂಪರ್ಕಿಸಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು