7:51 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ರಸ್ತೆ, ಕರೆಂಟ್ ಸಹಿತ ಮೂಲ ಸೌಕರ್ಯ ಏನೂ ಇಲ್ಲ: ತೀರ್ಥಹಳ್ಳಿಯ ಬಿದರಗೋಡು ಗ್ರಾಪಂ ವ್ಯಾಪ್ತಿಯಲ್ಲಿ ಚುನಾವಣೆ ಬಹಿಷ್ಕಾರ

19/04/2024, 11:43

ಶಶಿ ಬೆತ್ತದಕೊಳಲು ಶಿವಮೊಗ್ಗ

info.reporterkarnataka@gmail.com

ಮೂಲ‌ ಸೌಕರ್ಯ ವಂಚಿತ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಿದರಗೋಡು ಗ್ರಾಪಂ ವ್ಯಾಪ್ತಿಯ ಗ್ರಾಮಸ್ಥರು ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ.


ಬಿದರಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಗುಂಬೆ ಹೋಬಳಿಯ ಕಣಗಲು, ಸುರುಳಿಗದ್ದೆ ಹಾಗೂ ಉಳುಮಡಿ ಗ್ರಾಮಗಳಲ್ಲಿ ಸುಮಾರು 45 ಕುಟುಂಬಗಳು ವಾಸಿಸುತ್ತಿದ್ದು, ಇಲ್ಲಿಗೆ ಅನೇಕ ವರ್ಷಗಳಿಂದ ಮೂಲಭೂತ ಸೌಕರ್ಯಗಳಾದ ರಸ್ತೆ, ಕರೆಂಟ್ ವ್ಯವಸ್ಥೆಗಳಿಲ್ಲದೆ ಶಾಲೆಗೆ ಹೋಗುವ ಮಕ್ಕಳಿಗೆ ತೊಂದರೆಯಾಗುತ್ತಿದೆ. ಇಲ್ಲಿನ ಅವ್ಯವಸ್ಥೆ ಕಂಡು ಯುವಕರಿಗೆ ಮದುವೆಗೆ ಹೆಣ್ಣು ಕೊಡಕೊಡಲು ಹಿಂದೇಟು ಹಾಕುವಂತಾಗಿದೆ. ಕಾಡು ಪ್ರಾಣಿಗಳ ಸಮಸ್ಯೆ ಮತ್ತು ನೆಟ್ವರ್ಕ್ ಸಮಸ್ಯೆ ಉಂಟಾಗಿದ್ದು ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಬಗ್ಗೆ ಹಲವಾರು ಮನವಿ ಸಲ್ಲಿಸಿದ್ದರು ಕ್ಯಾರೇ ಎನ್ನದ ಸರ್ಕಾರ ಹಾಗೂ ಆಡಳಿತಕ್ಕೆ ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ಮಾಡುವುದರ ಮೂಲಕ ತಮ್ಮ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೆ ವೇಳೆ ತಲ್ಲೂರಂಗಡಿ ಕೈಮರದಿಂದ ಉಳುಮಡಿ ಹೋಗುವ ಸುಮಾರು 5 ಕಿಮೀ ರಸ್ತೆ 8 ತಿಂಗಳ ಹಿಂದೆ ಮಾಡಿದ್ದಾದರೂ ಅಲ್ಲಲ್ಲಿ ಕಿತ್ತು ಬಂದು ರಸ್ತೆ ಕಳಪೆಯಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದರು‌.
ಈ ಪ್ರದೇಶ ನಕ್ಸಲ್ ಪೀಡಿತ ಪ್ರದೇಶಕ್ಕೆ ಒಳಪಟ್ಟಿದ್ದರೂ ಮೂಲಭೂತ ಸೌಕರ್ಯಗಳು ದೊರಕುತ್ತಿಲ್ಲ ಎಂಬುದು ಗ್ರಾಮಸ್ಥರ ಅಸಮಾಧಾನಕ್ಕೆ ಕಾರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು