8:35 PM Wednesday29 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

​ಅತಿಯಾದ ಭಾರ ಹೊತ್ತ ಲಾರಿಗಳ ಸಂಚಾರಕ್ಕೆ ರಸ್ತೆ ಧ್ವಂಸ: ಬಾಳೂರು ಗ್ರಾಮಸ್ಥರ ಆಕ್ರೋಶ; ಪ್ರತಿಭಟನೆ

29/07/2026, 20:34

​​​ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಬಾಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲಕ್ಕಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಏಕೈಕ ಗ್ರಾಮೀಣ ರಸ್ತೆಯು ಇತ್ತೀಚೆಗೆ ಕಾಂಕ್ರೀಟೀಕರಣಗೊಂಡಿದ್ದರೂ, ಅತಿಯಾದ ಭಾರ ಹೊತ್ತ ಲಾರಿಗಳ ನಿರಂತರ ಸಂಚಾರದಿಂದಾಗಿ ಸಂಪೂರ್ಣವಾಗಿ ಹಾಳಾಗಿದ್ದು, ಗ್ರಾಮಸ್ಥರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
​ಸುಮಾರು ಮೂರು ವರ್ಷಗಳ ಹಿಂದಷ್ಟೇ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಈ ಕಾಂಕ್ರೀಟ್ ರಸ್ತೆಯು, ಕಲ್ಲಕ್ಕಿ ಎಸ್ಟೇಟ್‌ನಿಂದ ತಂದ ಮರ ಹಾಗೂ ಟಿಂಬರ್ ಸಾಗಣೆ ಮಾಡುವ ಭಾರೀ ತೂಕದ ಲಾರಿಗಳಿಂದಾಗಿ ಬಿರುಕು ಬಿಟ್ಟು ಸಂಪೂರ್ಣವಾಗಿ ಕುಸಿದುಬಿದ್ದಿದೆ.



​ಲಾರಿ ತಡೆದು ಗ್ರಾಮಸ್ಥರ *ಪ್ರತಿಭಟನೆ:* ರಸ್ತೆ ತೀವ್ರವಾಗಿ ಹಾನಿಗೊಳಗಾಗಿದ್ದರಿಂದ ಆಕ್ರೋಶಗೊಂಡ ಬಾಳೂರು ಮತ್ತು ಕಲ್ಲಕ್ಕಿ ಭಾಗದ ಗ್ರಾಮಸ್ಥರು, ಅತಿಯಾದ ಮರ ತುಂಬಿಕೊಂಡು ಸಂಚರಿಸುತ್ತಿದ್ದ ಲಾರಿಯನ್ನು ಮಾರ್ಗಮಧ್ಯದಲ್ಲೇ ತಡೆದು ನಿಲ್ಲಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
​”ಮಳೆಗಾಲದ ಸಮಯದಲ್ಲಿ ಇಷ್ಟೊಂದು ಹೆವಿ ಲೋಡ್ ಹೊತ್ತ ಲಾರಿಗಳು ಸಂಚರಿಸಿದರೆ ಯಾವುದೇ ರಸ್ತೆಯೂ ಉಳಿಯುವುದಿಲ್ಲ. ದುರಸ್ತಿಯಾದ ರಸ್ತೆಯು ಸಂಪೂರ್ಣ ಹಾಳಾಗಿದ್ದು, ಇನ್ನು ಕೆಲವೇ ದಿನಗಳಲ್ಲಿ ರಸ್ತೆ ಸಂಪರ್ಕವೇ ಕಡಿತಗೊಳ್ಳುವ ಭೀತಿ ಎದುರಾಗಿದೆ. ತಕ್ಷಣವೇ ಸಂಬಂಧಪಟ್ಟ ಇಲಾಖಾಧಿಕಾರಿಗಳು, ಎಸ್ಟೇಟ್ ಹಾಗೂ ಟಿಂಬರ್ ಮಾಲೀಕರು ಮಧ್ಯಪ್ರವೇಶಿಸಿ, ರಸ್ತೆಗೆ ಆಗಿರುವ ಹಾನಿಗೆ ಸೂಕ್ತ ಪರಿಹಾರ ನೀಡಿ ತಕ್ಷಣ ರಸ್ತೆ ದುರಸ್ತಿ ಮಾಡಿಸಿಕೊಡಬೇಕು.” ಸ್ಥಳೀಯ ಗ್ರಾಮಸ್ಥರು
​ಮಳೆಗಾಲದಲ್ಲಿ ಗ್ರಾಮೀಣ ಭಾಗಕ್ಕೆ ರಸ್ತೆ ಸಂಪರ್ಕ ಸಿಗುವುದೇ ಕಷ್ಟವಾಗಿರುವಾಗ, ಈ ರೀತಿ ಬೇಜವಾಬ್ದಾರಿಯಿಂದ ರಸ್ತೆ ಹಾಳುಮಾಡುತ್ತಿರುವುದಕ್ಕೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಇಲಾಖೆಯು ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು