12:44 AM Saturday19 - September 2026
ಬ್ರೇಕಿಂಗ್ ನ್ಯೂಸ್
*ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ…

ಇತ್ತೀಚಿನ ಸುದ್ದಿ

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಿರಿಧಾನ್ಯ ಸಹಕಾರಿ: ಬೆಳಗಾವಿ ಅಂತಾರಾಷ್ಟ್ರೀಯ ಸಾವಯವ ಮೇಳದಲ್ಲಿ ಸಿಎಂ ಸಿದ್ದರಾಮಯ್ಯ

13/12/2024, 18:23

ಬೆಳಗಾವಿ (reporterkarnataka.com): ಜನರಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಹಾಗೂ ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸಲು ಸಿರಿಧಾನ್ಯದ ಬಳಕೆ ಸಹಕಾರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಬೆಳಗಾವಿ ಸುವರ್ಣಸೌಧದಲ್ಲಿ ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳದ ಪೂರ್ವಭಾವಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿರಿಧಾನ್ಯದಲ್ಲಿ ಪ್ರೊಟೀನ್ ಹಾಗೂ ನಾರಿನ ಅಂಶ ಹೆಚ್ಚಾಗಿದ್ದು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಿರಿಧಾನ್ಯ ಕೃಷಿಯನ್ನು ತೊಡಗಿಕೊಳ್ಳಬೇಕು ಎಂದರು.
ದೇಶದಲ್ಲಿ ಕರ್ನಾಟಕ ರಾಜ್ಯ ಸಿರಿಧಾನ ಉತ್ಪಾದನೆಯಲ್ಲಿ ಮೂರನೇ ಸ್ಥಾನದಲ್ಲಿದೆ. ಸುಮಾರು 18.38 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 22.16 ಲಕ್ಷ ಟನ್ ಗಳಷ್ಟು ಸಿರಿಧಾನ್ಯವನ್ನು ರಾಜ್ಯದಲ್ಲಿ ಬೆಳೆಯಲಾಗುತ್ತಿದೆ ಎಂದು ತಿಳಿಸಿದರು.
ದೇಶ ವಿದೇಶಗಳಲ್ಲಿ ಸಿರಿಧಾನ್ಯಗಳ ಬೇಡಿಕೆ ಹೆಚ್ಚಾಗುತ್ತಿದ್ದು, ವಿಶ್ವದಲ್ಲಿ 903.61 ಲಕ್ಷ ಟನ್ ಗಳಷ್ಟು ಸಿರಿಧಾನ್ಯವನ್ನು ಬೆಳೆಯಲಾಗುತ್ತಿದೆ. ಭಾರತದಲ್ಲಿ 31.50 ರಷ್ಟು ಸಿರಿಧಾನ್ಯವನ್ನು
ಬೆಳೆಯುತ್ತಿದ್ದು, ವಿಶ್ವದಲ್ಲಿ ಅತ್ಯಂತ ಹೆಚ್ಚು ಸಿರಿಧಾನ್ಯ ಬೆಳೆಯುವ ದೇಶವಾಗಿದೆ ಎಂದರು.


ಬೆಂಗಳೂರಿನ ನಗರದ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಅಂತರರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳವನ್ನು ಡಿಸೆಂಬರ್ 23, 24 ಮತ್ತು 25 ರಂದು ಹಮ್ಮಿಕೊಳ್ಳಲಾಗಿದ್ದು, ಮೇಳದ ಪೂರ್ವಭಾವಿ ಕಾರ್ಯಕ್ರಮಕ್ಕೆ ಚಾಲನೆ ನೀಡಿರುವುದಾಗಿ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ, ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಡಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಅರಣ್ಯ ಸಚಿವ ಈಶ್ವರ ಖಂಡ್ರೆ, ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು, ಮಾಜಿ ಸಚಿವ ಆರ್.ವಿ. ದೇಶಪಾಂಡೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು