4:20 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ರೋಗ ಪತ್ತೆ ಶೀಘ್ರವಾಗಿ ಮಾಡಿದಲ್ಲಿ ಕ್ಯಾನ್ಸರ್ ಕಾಯಿಲೆ ಗುಣಪಡಿಸಲು ಸಾಧ್ಯ: ಕಸ್ತೂರಬಾ ಮೆಡಿಕಲ್ ಕಾಲೇಜಿನ ಡಾ.ಪ್ರಶಾಂತ್ ಬಿ.

25/07/2022, 22:13

ಮಂಗಳೂರು(reporterkarnataka.com): ಕ್ಯಾನ್ಸರ್ ಗುಣಪಡಿಸಲಾರದ ರೋಗವೇನೂ ಅಲ್ಲ. ರೋಗ ಪತ್ತೆ ಶೀಘ್ರವಾಗಿ ಮಾಡಿದಲ್ಲಿ ಕ್ಯಾನ್ಸರ್ ಕಾಯಿಲೆಯನ್ನು ಗುಣಪಡಿಸಲು ಸಾಧ್ಯ ಎಂದು ಕಸ್ತೂರಬಾ ಮೆಡಿಕಲ್ ಕಾಲೇಜಿನ ಡಾ.ಪ್ರಶಾಂತ್ ಬಿ.ಹೇಳಿದರು.

ಅವರು ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಕದ್ರಿಯ ಲಯನ್ಸ್ ಕ್ಲಬ್ ಜಂಟಿಯಾಗಿ ಆಯೋಜಿಸಿದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ಕುಳಿತೇ ಇರುವ ಜೀವನ ಶೈಲಿ, ವಿಟಮಿನ್ , ಜೀವಸತ್ವಗಳ ಕೊರತೆ, ದುರ್ಬಲವಾದ ರೋಗನಿರೋಧಕ ಶಕ್ತಿ , ಅನುವಂಶೀಯತೆ – ಹೀಗೆ ಹಲವು ಕಾರಣಗಳಿಂದ ಕ್ಯಾನ್ಸರ್ ಬರಲು ಸಾಧ್ಯವಿದೆ. ಆದಷ್ಟು ಹೊರಗಿನ ಆಹಾರಗಳಿಗೆ ಮೊರೆ ಹೋಗದೆ, ಪೌಷ್ಟಿಕಾಹಾರ ಸೇವನೆ, ಲಘು ವ್ಯಾಯಾಮ, ಒಂದಷ್ಟು ನಡಿಗೆ- ಹೀಗೆ ಜೀವನಶೈಲಿ ಯನ್ನು ಬದಲಿಸಿಕೊಂಡಲ್ಲಿ ಕ್ಯಾನ್ಸರ್ ನ್ನು ತಡೆಯಲು ಸಾಧ್ಯ ಎಂದು ಅವರು ಹೇಳಿದರು.

ಕ್ಯಾನ್ಸರ್ ನ ಗುಣಲಕ್ಷಣಗಳು, ಅದರ ಚಿಕಿತ್ಸೆ, ತಡೆಗಟ್ಟುವ ಬಗೆ ಇತ್ಯಾದಿಗಳ ಬಗ್ಗೆ ಸವಿವರವಾದ ಮಾಹಿತಿಗಳನ್ನು ನೀಡುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿಯನ್ನು ಮೂಡಿಸಿದರು.

ಕೆನರಾ ಕಾಲೇಜಿನ ರಾ.ಸೇ.ಯೋ.ಅಧಿಕಾರಿಗಳಾದ ಸೀಮಾ ಪ್ರಭು,ವಾಣಿ ಯು.ಎಸ್. ಹಾಗೂ ಕದ್ರಿ ಲಯನ್ಸ್ ಕ್ಲಬ್ ನ ಅಧ್ಯಕ್ಷೆ ಸುಮಿತ್ರಾ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. 

ಲಯನ್ ಶ್ರೀಧರ್, ಲಯನ್ ರಿತೇಶ್ ರಾವ್, ಲಯನ್ ಸತೀಶನ್, ಲಯನ್ ಪ್ರಶಾಂತ್ ಪೈ,ಲಯನ್ ಅಶೋಕ್ ಕಾಮತ್, ಲಯನ್ ವಿದ್ಯಾ ಕಾಮತ್ ಕಾರ್ಯಕ್ರಮದಲ್ಲಿ  ಉಪಸ್ಥಿತರಿದ್ದರು.


ಅಭಿನ್ ಬಂಗೇರ ಸ್ವಾಗತಿಸಿದರು.ಪ್ರತೀಶ್ ಮಲ್ಲಿ ವಂದಿಸಿದರು.ಶರಣ್ಯ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು