3:20 PM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ರೋಹನ್ ಕಾರ್ಪೊರೇಷನ್ ಅಧಿಕೃತ ಬ್ರಾಂಡ್ ಅಂಬಾಸಿಡರ್ ಆಗಿ ಶಾರೂಖ್‌ ಖಾನ್ ಘೋಷಣೆ: ಮಂಗಳೂರಿನಲ್ಲಿ ಕಾರ್ಯಕ್ರಮ

13/07/2025, 16:10

ಮಂಗಳೂರು(reporterkarnataka.com): ಕರ್ನಾಟಕದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ, ಮಂಗಳೂರಿನ ಹೆಸರಾಂತ ಉದ್ಯಮ ಸಂಸ್ಥೆ ರೋಹನ್ ಕಾರ್ಪೊರೇಷನ್ ಬಾಲಿವುಡ್ ಸೂಪರ್ ಸ್ಟಾರ್ ಶಾರೂಖ್‌ ಖಾನ್ ಅವರನ್ನು ತನ್ನ ಆಧಿಕೃತ ಬ್ರಾಂಡ್ ಅಂಬಾಸಿಡರ್ ಆಗಿ ಜುಲೈ 12ರಂದು ಘೋಷಣೆ ಮಾಡಿತು.
ಈ ಬಹು ನಿರೀಕ್ಷಿತ ಕಾರ್ಯಕ್ರಮ ಮಂಗಳೂರಿನ ಬಿಜೈ ಭಾರತ್ ಮಾಲ್‌ನಲ್ಲಿ ವಿಜೃಂಭಣೆಯಿಂದ ನಡೆಯಿತು. ಈ ಸಮಾರಂಭದಲ್ಲಿ ಜಿಲ್ಲೆಯ ಪ್ರಮುಖ ಮಾಧ್ಯಮ ಪ್ರತಿನಿಧಿಗಳು, ಸಾಮಾಜಿಕ ಮಾಧ್ಯಮ ಪ್ರಭಾವಿಗಳು, ಮತ್ತು ಸಿನಿಮಾ ಜಗತ್ತಿನ ತಾರೆಗಳು ಭಾಗವಹಿಸಿದ್ದರು.
ಈ ಘೋಷಣೆ ವಿಶೇಷ ಏಕೆಂದರೆ – ಇದು ಕರ್ನಾಟಕದಲ್ಲಿ ಮೊದಲ ಬಾರಿಗೆ ಶಾರೂಖ್‌ ಖಾನ್ ಅವರು ಯಾವುದೇ ಬ್ರಾಂಡ್‌ಗೆ ಅಂಬಾಸಿಡರ್ ಆಗಿರುವುದು. ಈ ಮೂಲಕ ರೋಹನ್ ಕಾರ್ಪೊರೇಷನ್ ಮಂಗಳೂರು ನಗರವನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತೆ ಮಾಡಿದೆ.
ಸಮಾರಂಭದ ಪ್ರಮುಖ ಆಕರ್ಷಣೆ ಎಂದರೆ, ಬೃಹತ್ ಪರದೆಯ ಮೇಲೆ ಪ್ರದರ್ಶಿಸಲಾದ ಅಧಿಕೃತ ಬ್ರಾಂಡ್ ಅಂಬಾಸಿಡರ್ ವಿಡಿಯೋ (AV).
ಈ ವಿಡಿಯೋದಲ್ಲಿ ರೋಹನ್ ಕಾರ್ಪೊರೇಷನ್‌ನ ಸ್ಫೂರ್ತಿದಾಯಕ ಪಯಣ ಮತ್ತು ಶಾರೂಖ್‌ ಖಾನ್ ಅವರ ಶ್ರಮ ಮತ್ತು ವ್ಯಕ್ತಿತ್ವ ತುಂಬಿದ ಯಶೋಗಾಥೆ ಅದ್ಭುತವಾಗಿ ಪ್ರಸ್ತುತಗೊಂಡಿತ್ತು.
ಸಂಸ್ಥಾಪಕರಾದ ಡಾ. ರೋಹನ್ ಮೊಂತೇರೊ ಅವರು ಈ ಸಂದರ್ಭದಲ್ಲಿ ಮಾತನಾಡಿ “ಶಾರೂಖ್‌ ಖಾನ್ ಅವರಂತಹ ಪ್ರಭಾವಿ ವ್ಯಕ್ತಿತ್ವ ನಮ್ಮ ಜೊತೆಗೆ ಇರುವುದರಿಂದ, ನಮ್ಮ ಯಶಸ್ಸನ್ನು ಇನ್ನೂ ಎತ್ತರಕ್ಕೆ ವಿಸ್ತರಿಸುವಲ್ಲಿ ಹೊಸ ಆತ್ಮವಿಶ್ವಾಸ ಬಂದಿದೆ. ಇದು ಶಕ್ತಿಯುತ ಸಹಭಾಗಿತ್ವದ ಹೊಸ ಅಧ್ಯಾಯದ ಪ್ರಾರಂಭ” ಎಂದರು.
ಕಾರ್ಯಕ್ರಮವನ್ನು ಖ್ಯಾತ ನಿರೂಪಕಿ ರೀನಾ ಡಿಸೋಜಾ ಅವರು ಆಕರ್ಷಕವಾಗಿ ನಿರೂಪಿಸಿದರು.


ಈ ಘೋಷಣೆ ಕೇವಲ ಬ್ರಾಂಡ್ ಪ್ರಚಾರವಲ್ಲ, ಇದು ಮಂಗಳೂರಿನ ಅಭಿವೃದ್ಧಿಯ ಹಾದಿಯಲ್ಲಿ ಮತ್ತೊಂದು ಸಾಂದರ್ಭಿಕ ಹೆಜ್ಜೆ. 32 ವರ್ಷಗಳ ಅನುಭವ, 5000ಕ್ಕೂ ಹೆಚ್ಚು ಸಂತುಷ್ಟ ಕುಟುಂಬಗಳು, ಮತ್ತು 25ಕ್ಕೂ ಹೆಚ್ಚು ಯಶಸ್ವಿ ಯೋಜನೆಗಳೊಂದಿಗೆ, ರೋಹನ್ ಕಾರ್ಪೊರೇಷನ್ ಇದೀಗ ಒಂದು ಜಾಗತಿಕ ಹಾದಿಗೆ ಕಾಲಿಟ್ಟಿದೆ.
ರೋಹನ್ ಕಾರ್ಪೊರೇಷನ್ ಮತ್ತು ಶಾರೂಕ್ ಖಾನ್ ಅವರ ಈ ಮಹತ್ವದ ಹೆಜ್ಜೆ ಮಂಗಳೂರಿನ ಹೆಮ್ಮೆ ಮಾತ್ರವಲ್ಲ, ಕರ್ನಾಟಕದ ಗರಿಮೆಯ ಪ್ರತಿಬಿಂಬವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು