8:16 AM Thursday2 - October 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ದೇಶ – ವಿದೇಶಗಳ ಪ್ರಯಾಣಿಕರಿಗೆ… ಸಾಲ ಮರು ಪಾವತಿಸಲು ಬ್ಯಾಂಕ್ ಅಧಿಕಾರಿಗಳ ಕಿರುಕುಳ: ರೈತ ಮನನೊಂದು ಆತ್ಮಹತ್ಯೆ ಕಲ್ಯಾಣದ ನೆರೆ ಸಂತ್ರಸ್ತರಿಗೆ ಸ್ಪಂದಿಸದ ರಾಜ್ಯ ಸರಕಾರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ… ಹಾರಂಗಿ ಜಲಾಶಯ ವೀಕ್ಷಣೆ ಮಾಡಿ ಹಿಂತಿರುಗುತ್ತಿದ್ದ ಪ್ರವಾಸಿ ಬಸ್ ಅಪಘಾತ: ಹಲವು ವಿದ್ಯಾರ್ಥಿಗಳಿಗೆ… ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ: ತನಿಖಾ ವರದಿಗೆ ಬಿ ರಿಪೋರ್ಟ್ ಕಾಂಗ್ರೆಸ್‌ ಸರ್ಕಾರ 80 ಪರ್ಸೆಂಟ್‌ ಕಮಿಶನ್‌ ಪಡೆಯುತ್ತಿದೆ, ಸಿಎಂ ರಾಜೀನಾಮೆ ನೀಡಲಿ: ಪ್ರತಿಪಕ್ಷ… ಮಡಿಕೇರಿ ಸಾರಿಗೆ ಬಸ್‌ ಡಿಪೋ ಎದುರು ನಿರ್ಮಿಸಲಾದ ಅನಧಿಕೃತ ಶೆಡ್‌ ತೆರವಿಗೆ ನಗರಸಭೆ… ಶಿಕ್ಷಣ ವ್ಯಕ್ತಿಯನ್ನು ಸರಿಯಾದ ಮಾರ್ಗದಲ್ಲಿ ಕೊಂಡೊಯ್ಯಲಿದೆ: ಸೈಂಟ್ ಜೋಸೆಫ್ ವಿವಿ ಘಟಿಕೋತ್ಸವದಲ್ಲಿ ರಾಜ್ಯಪಾಲರು ಬೆಂಗಳೂರು ನಗರ ರಸ್ತೆಗಳ ಪರಿಶೀಲನೆಗೆ ಮುಖ್ಯಮಂತ್ರಿಗಳ ಸಿಟಿರೌಂಡ್ಸ್

ಇತ್ತೀಚಿನ ಸುದ್ದಿ

ರೋಹನ್ ಕಾರ್ಪೊರೇಶನ್: ಮಂಗಳೂರು ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಿಗೆ ಸುರಕ್ಷತಾ ಪಾದರಕ್ಷೆಗಳ ವಿತರಣೆ

29/09/2025, 18:46

ಮಂಗಳೂರು(reporterkarnataka.com): ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಕಂಪನಿ ರೋಹನ್ ಕಾರ್ಪೊರೇಶನ್ ಪೌರ ಕಾರ್ಮಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಳಜಿ ವಹಿಸುವ ಉದ್ದೇಶದಿಂದ, ಸೆಪ್ಟೆಂಬರ್ 29 ರಂದು ಮಂಗಳೂರು ಮಹಾನಗರ ಪಾಲಿಕೆಗೆ 100 ಜೋಡಿ ಸುರಕ್ಷತಾ ಪಾದರಕ್ಷೆಗಳನ್ನು ವಿತರಣೆ ಮಾಡುವ ಮೂಲಕ ಸಾಮಾಜಿಕ ಕಾರ್ಯವನ್ನು ಹಮ್ಮಿಕೊಂಡಿತು.
ಈ ಕಾರ್ಯಕ್ರಮವು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದ ರವಿಚಂದ್ರ ನಾಯಕ್ ಉಪಸ್ಥಿತರಿದ್ದರು. ರೋಹನ್ ಕಾರ್ಪೊರೇಶನ್ ಮಾರ್ಕೆಟಿಂಗ್ ಮ್ಯಾನೇಜರ್ ಮಾಕ್ಷಿಮ್ ಲೋಬೊ ಕಾರ್ಮಿಕರಿಗೆ ಪಾದರಕ್ಷೆಗಳನ್ನು ಹಸ್ತಾಂತರಿಸಿದರು.
“ಪೌರ ಕಾರ್ಮಿಕರು ನಮ್ಮ ಸಮಾಜದ ಬೆನ್ನೆಲುಬು. ಅವರ ಶ್ರಮದಿಂದಲೇ ನಗರ ಸ್ವಚ್ಛವಾಗಿರುತ್ತದೆ. ಅವರ ಸುರಕ್ಷತೆಗಾಗಿ ನಾವು ಕೈಗೊಂಡಿರುವ ಈ ಉಪಕ್ರಮ ನಮ್ಮ ಸಾಮಾಜಿಕ ಜವಾಬ್ದಾರಿಯ ಭಾಗವಾಗಿದೆ” ಎಂದು ರೋಹನ್ ಕಾರ್ಪೊರೇಶನ್ ಮಾರ್ಕೆಟಿಂಗ್ ಮ್ಯಾನೇಜರ್ ಮಾಕ್ಷಿಮ್ ಲೋಬೊ ಹೇಳಿದರು.
ಮಹಾ ನಗರ ಪಾಲಿಕೆ ಆಯುಕ್ತರು ಈ ಸಂದರ್ಭದಲ್ಲಿ, ಪೌರ ಕಾರ್ಮಿಕರ ಸುರಕ್ಷತೆಯ ಕಡೆ ಗಮನ ಹರಿಸಿರುವ ರೋಹನ್ ಕಾರ್ಪೊರೇಶನ್ ನ ಸಮಾಜಮುಖಿ ಕಾರ್ಯವನ್ನು ಮೆಚ್ಚಿ, ಮುಂದೆಯೂ ಇಂತಹ ಸಮಾಜಮುಖಿ ಕಾರ್ಯಗಳು ನಡೆಯಲಿ ಎಂದು ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು