11:38 PM Saturday2 - August 2025
ಬ್ರೇಕಿಂಗ್ ನ್ಯೂಸ್
SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ…

ಇತ್ತೀಚಿನ ಸುದ್ದಿ

Mangalore : ಕಷ್ಟದಲ್ಲಿದ್ದ 350ಕ್ಕೂ ಅಧಿಕ ಕುಟುಂಬಗಳಿಗೆ ರೇಷನ್ ಕಿಟ್ ವಿತರಿಸಿದ ಕೋಸ್ಟಲ್‌ವುಡ್ ನಟ ರಾಕ್‌ಸ್ಟಾರ್ ರೂಪೇಶ್ ಶೆಟ್ಟಿ ಹಾಗೂ ಅವರ ತಂಡ

14/05/2021, 21:28

ಮಂಗಳೂರು (Reporter Karnataka News)

ಕೋಸ್ಟಲ್ ವುಡ್ ನಟ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಹಾಗೂ ಅವರ ತಂಡದಿಂದ ಕೋವಿಡ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿ ತೀವ್ರ ಕಷ್ಟದಲ್ಲಿದ್ದ ಕುಟುಂಬಗಳಿಗೆ ಆಹಾರ ಕಿಟ್‌ಗಳನ್ನು ವಿತರಿಸಲಾಯಿತು.

ಕಾವೂರು, ಕೋಡಿಕಲ್, ಬೋಳೂರು, ಉರ್ವ, ಬಜಾಲ್, ಜಲ್ಲಿಗುಡ್ಡೆ, ಫೈಸಲ್‌ನಗರ, ಸುರತ್ಕಲ್, ಕೊಡಿಯಾಲ್ ಬೈಲ್, ಕುದ್ರೋಳಿ, ಮಂಗಳಾದೇವಿ, ಪಾಂಡೇಶ್ವರ, ಉರ್ವ ಸ್ಟೋರ್ ಸೇರಿದಂತೆ ಮಂಗಳೂರು ನಗರದಾದ್ಯಂತ ಅತಿ ಕಷ್ಟದಲ್ಲಿರುವ ಕುಟುಂಬಗಳಿಗೆ ರೇಶನ್ ಕಿಟ್‌ಗಳನ್ನು ಹಂಚಲಾಯಿತು.

ಸಾವಿರಕ್ಕೂ ಅಧಿಕ ಕರೆಗಳು ತಂಡಕ್ಕೆ ಬಂದಿದ್ದು, ಬಹುತೇಕ ಕುಟುಂಬಗಳಿಗೆ ಕಿಟ್ ವಿತರಿಸುವ ಪ್ರಯತ್ನವನ್ನು ತಂಡ ಮಾಡುತ್ತಿದೆ. ಸದ್ಯಕ್ಕೆ 350 ಕುಟುಂಬಗಳಿಗೆ ಕಿಟ್ ವಿತರಿಸಲಾಗಿದೆ. ಅರ್ಹರ ಮನೆಗಳಿಗೆ ಭೇಟಿ ಅವರಿಗೆ ಕಿಟ್‌ಗಳನ್ನು ನೀಡಲಾಗುತ್ತಿದೆ.

ರೂಪೇಶ್ ಶೆಟ್ಟಿ ಅವರ ಜತೆಗೆ ಅನಿಲ್ ಶೆಟ್ಟಿ, ದೀಕ್ಷಿತ್ ಆಳ್ವ, ಮಂಜುನಾಥ್ ಅತ್ತಾವರ್, ಲವಿತ್ ಕೊಟ್ಟಾರಿ, ನಿತೇಶ್ ಕುಲಾಲ್, ವಜ್ರೇಶ್ ಸನಿಲ್, ರಾಜ ಮಾಣಿ, ನಿಖಿಲ್ ಬೇಕಲ್ ಮೊದಲಾದವರೂ ಸಾಥ್ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು