10:36 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ರೋಟರ‌್ಯಾಕ್ಟ್ ಮಂಗಳೂರು ಸಿಟಿ ಸಂಸ್ಥೆಯ ಪದಗ್ರಹಣ ; ರೋ.ಬಿದ್ದಪ್ಪ ನೂತನ ಅಧ್ಯಕ್ಷ

03/08/2024, 10:05

ಮಂಗಳೂರು(reporterKarnataka.com)

ರೋಟರ‌್ಯಾಕ್ಟ್ ಸಂಸ್ಥೆಯ ಯುವ ಸದಸ್ಯರು ಕ್ರಿಯಾಶೀಲರಾಗಿ ಜನಪರ ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸಿ ನಾಯಕತ್ವ ಗುಣ ಬೆಳೆಸಿ ಯಶಸ್ಸು ಸಾಧಿಸಬೇಕು ಎಂದು ರೋಟರ‌್ಯಾಕ್ಟ್ ಸಂಸ್ಥೆಯ ಸಭಾಪತಿ ಡಾ.ದೇವದಾಸ್ ರೈ ಸಲಹೆ ನೀಡಿದ್ದಾರೆ.

ಅವರು ರೋಟರ‌್ಯಾಕ್ಟ್ ಮಂಗಳೂರು ಸಿಟಿ ಸಂಸ್ಥೆಯ 2024-25 ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ರೋಟರಿ ಮಂಗಳೂರು ಸೆಂಟ್ರಲ್ ಸಂಸ್ಥೆಯ ಅಧ್ಯಕ್ಷರಾದ ಬ್ರಿಯಾನ್ ಪಿಂಟೋ ಪದಗ್ರಹಣ ಅಧಿಕಾರಿಯಾಗಿ ಭಾಗವಹಿಸಿ ಪದಗ್ರಹಣದ ವಿಧಿವಿಧಾನ ನೆರವೇರಿಸಿ ತಂಡಕ್ಕೆ ಶುಭಕೋರಿದರು.

ನಿರ್ಗಮನ ಅಧ್ಯಕ್ಷ ಅವಿನಾಶ್ ಕುಲಾಲ್ ಸ್ವಾಗತಿಸಿ ತಮ್ಮ ಅಧಿಕಾರಾವಧಿಯಲ್ಲಿ ಸಹಕರಿಸಿದ ಸರ್ವಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು. ನೂತನ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ ಬಿದ್ದಪ್ಪ ಎಂ.ಎ. ಪ್ರಸ್ತುತ ಸಾಲಿನಲ್ಲಿ ಹಲವಾರು ಜನಪರ ಯೋಜನೆಗಳನ್ನು ಹಮ್ಮಿಕೊಂಡಿದ್ದು ಅದನ್ನು ಅನುಷ್ಠಾನಗೊಳಿಸಲು ಸರ್ವಸದಸ್ಯರ ಪ್ರೋತ್ಸಾಹ ಮತ್ತು ಸಹಕಾರ ಕೋರಿದರು.

ಈ ಸಂದರ್ಭದಲ್ಲಿ ಡಾ.ಅಗ್ರಜ್, ಡೊಮಿನಿಕ್, ರೋಶನ್, ರಕ್ಷಣ್ ನೂತನ ಸದಸ್ಯರಾಗಿ ಸೇರ್ಪಡೆಗೊಂಡರು. ಗಣೇಶ್ ಮತ್ತು ಡೇರಿಲ್ ಡಿ’ಸೋಜ ಅವರನ್ನು ಸನ್ಮಾನಿಸಲಾಯಿತು. ನೂತನ ಕಾರ್ಯದರ್ಶಿ ಅಕ್ಷಯ್ ರೈ ವಾರ್ಷಿಕ ವರದಿ ಮಂಡಿಸಿ, ವಂದಿಸಿದರು. ಪೂಜಾ ನಿರೂಪಿಸಿದರು.

ಪದಾಧಿಕಾರಿಗಳ ವಿವರ : ಅರವಿನ್ ಡಿ’ಸೋಜ (ದಂಡಾಧಿಕಾರಿ), ಹಾರ್ದಿಕ್ (ಕೋಶಾಧಿಕಾರಿ). ಪ್ಲೋಯ್ದ ಮೋರಸ್ (ಸಾರ್ವಜನಿಕ ಸಂಪರ್ಕ ಅಧಿಕಾರಿ), ನಿರ್ದೇಶಕರು : ಕಾವ್ಯ (ಸಮಾಜ ಸೇವೆ), ಅಭಿಜಿತ್ (ವೃತ್ತಿಪರ ಸೇವೆ), ಶ್ರದ್ಧಾ ಕೇಶವ್ (ಸಂಸ್ಥೆ ಸೇವೆ), ವರುಣ್ ರೈ (ಅಂತರಾಷ್ಟ್ರೀಯ ಸೇವೆ)

ಇತ್ತೀಚಿನ ಸುದ್ದಿ

ಜಾಹೀರಾತು