9:57 AM Sunday17 - August 2025
ಬ್ರೇಕಿಂಗ್ ನ್ಯೂಸ್
Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ

ಇತ್ತೀಚಿನ ಸುದ್ದಿ

ರೋಟರ‌್ಯಾಕ್ಟ್ ಮಂಗಳೂರು ಸಿಟಿ ಸಂಸ್ಥೆಯ ಪದಗ್ರಹಣ ; ರೋ.ಬಿದ್ದಪ್ಪ ನೂತನ ಅಧ್ಯಕ್ಷ

03/08/2024, 10:05

ಮಂಗಳೂರು(reporterKarnataka.com)

ರೋಟರ‌್ಯಾಕ್ಟ್ ಸಂಸ್ಥೆಯ ಯುವ ಸದಸ್ಯರು ಕ್ರಿಯಾಶೀಲರಾಗಿ ಜನಪರ ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸಿ ನಾಯಕತ್ವ ಗುಣ ಬೆಳೆಸಿ ಯಶಸ್ಸು ಸಾಧಿಸಬೇಕು ಎಂದು ರೋಟರ‌್ಯಾಕ್ಟ್ ಸಂಸ್ಥೆಯ ಸಭಾಪತಿ ಡಾ.ದೇವದಾಸ್ ರೈ ಸಲಹೆ ನೀಡಿದ್ದಾರೆ.

ಅವರು ರೋಟರ‌್ಯಾಕ್ಟ್ ಮಂಗಳೂರು ಸಿಟಿ ಸಂಸ್ಥೆಯ 2024-25 ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ರೋಟರಿ ಮಂಗಳೂರು ಸೆಂಟ್ರಲ್ ಸಂಸ್ಥೆಯ ಅಧ್ಯಕ್ಷರಾದ ಬ್ರಿಯಾನ್ ಪಿಂಟೋ ಪದಗ್ರಹಣ ಅಧಿಕಾರಿಯಾಗಿ ಭಾಗವಹಿಸಿ ಪದಗ್ರಹಣದ ವಿಧಿವಿಧಾನ ನೆರವೇರಿಸಿ ತಂಡಕ್ಕೆ ಶುಭಕೋರಿದರು.

ನಿರ್ಗಮನ ಅಧ್ಯಕ್ಷ ಅವಿನಾಶ್ ಕುಲಾಲ್ ಸ್ವಾಗತಿಸಿ ತಮ್ಮ ಅಧಿಕಾರಾವಧಿಯಲ್ಲಿ ಸಹಕರಿಸಿದ ಸರ್ವಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು. ನೂತನ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ ಬಿದ್ದಪ್ಪ ಎಂ.ಎ. ಪ್ರಸ್ತುತ ಸಾಲಿನಲ್ಲಿ ಹಲವಾರು ಜನಪರ ಯೋಜನೆಗಳನ್ನು ಹಮ್ಮಿಕೊಂಡಿದ್ದು ಅದನ್ನು ಅನುಷ್ಠಾನಗೊಳಿಸಲು ಸರ್ವಸದಸ್ಯರ ಪ್ರೋತ್ಸಾಹ ಮತ್ತು ಸಹಕಾರ ಕೋರಿದರು.

ಈ ಸಂದರ್ಭದಲ್ಲಿ ಡಾ.ಅಗ್ರಜ್, ಡೊಮಿನಿಕ್, ರೋಶನ್, ರಕ್ಷಣ್ ನೂತನ ಸದಸ್ಯರಾಗಿ ಸೇರ್ಪಡೆಗೊಂಡರು. ಗಣೇಶ್ ಮತ್ತು ಡೇರಿಲ್ ಡಿ’ಸೋಜ ಅವರನ್ನು ಸನ್ಮಾನಿಸಲಾಯಿತು. ನೂತನ ಕಾರ್ಯದರ್ಶಿ ಅಕ್ಷಯ್ ರೈ ವಾರ್ಷಿಕ ವರದಿ ಮಂಡಿಸಿ, ವಂದಿಸಿದರು. ಪೂಜಾ ನಿರೂಪಿಸಿದರು.

ಪದಾಧಿಕಾರಿಗಳ ವಿವರ : ಅರವಿನ್ ಡಿ’ಸೋಜ (ದಂಡಾಧಿಕಾರಿ), ಹಾರ್ದಿಕ್ (ಕೋಶಾಧಿಕಾರಿ). ಪ್ಲೋಯ್ದ ಮೋರಸ್ (ಸಾರ್ವಜನಿಕ ಸಂಪರ್ಕ ಅಧಿಕಾರಿ), ನಿರ್ದೇಶಕರು : ಕಾವ್ಯ (ಸಮಾಜ ಸೇವೆ), ಅಭಿಜಿತ್ (ವೃತ್ತಿಪರ ಸೇವೆ), ಶ್ರದ್ಧಾ ಕೇಶವ್ (ಸಂಸ್ಥೆ ಸೇವೆ), ವರುಣ್ ರೈ (ಅಂತರಾಷ್ಟ್ರೀಯ ಸೇವೆ)

ಇತ್ತೀಚಿನ ಸುದ್ದಿ

ಜಾಹೀರಾತು