10:36 AM Tuesday11 - March 2025
ಬ್ರೇಕಿಂಗ್ ನ್ಯೂಸ್
APMC BILL | ಎಪಿಎಂಸಿ ನಿಯಂತ್ರಣಕ್ಕೆ ಇ-ಫ್ಲಾಟ್ಫಾರಂಗಳು ತಿದ್ದುಪಡಿ ವಿಧೇಯಕ: ವಿಧಾನಸಭೆ ಅನುಮೋದನೆ Power For Farmers | ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆಗಳ… Education | ಶಿಕ್ಷಣ ಇಲಾಖೆಯಲ್ಲಿ ಶೇ. 80ರಷ್ಟು ಹುದ್ದೆಗಳ ಭರ್ತಿಗೆ ಕ್ರಮ: ಸಚಿವ… Govt Hospital | ಇನ್ನು ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಗೆ ಬೆಳಿಗ್ಗೆ 9ರಿಂದ ಸಂಜೆ… ತೀರ್ಥಹಳ್ಳಿ: ಮನೆಯಲ್ಲಿಯೇ ಯುವಕ ನೇಣಿಗೆ ಶರಣು ಕಲಾಪ ನಿರ್ವಹಿಸಿದ ಡಾ. ಮಂಜುನಾಥ ಭಂಡಾರಿ: ವಿಧಾನ ಪರಿಷತ್ ಸಭಾಪತಿ ಪೀಠದಲ್ಲಿ ಅಲಂಕಾರ Siddu Budget | ರಾಜ್ಯ ಬಜೆಟ್ 2025-26: ಮುಖ್ಯಾಂಶಗಳು ಇಲ್ಲಿದೆ ಓದಿ.. Tourism | ಕೊಡವ ಹೆರಿಟೇಜ್ ಕೇಂದ್ರವನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ದಿ: ಪ್ರವಾಸೋದ್ಯಮ ಸಚಿವ… Primary Education | ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯ ವೃದ್ದಿಗೆ ಕಲಿಕಾ ದೀಪ, ಜ್ಞಾನ… BJP v/s Cong | ಉದ್ದೇಶಿತ ಕ್ಷೇತ್ರ ಮರು ವಿಂಗಡಣೆ ದಕ್ಷಿಣ ಭಾರತದ…

ಇತ್ತೀಚಿನ ಸುದ್ದಿ

ರೋಟರ‌್ಯಾಕ್ಟ್ ಮಂಗಳೂರು ಸಿಟಿ ಸಂಸ್ಥೆಯ ಪದಗ್ರಹಣ ; ರೋ.ಬಿದ್ದಪ್ಪ ನೂತನ ಅಧ್ಯಕ್ಷ

03/08/2024, 10:05

ಮಂಗಳೂರು(reporterKarnataka.com)

ರೋಟರ‌್ಯಾಕ್ಟ್ ಸಂಸ್ಥೆಯ ಯುವ ಸದಸ್ಯರು ಕ್ರಿಯಾಶೀಲರಾಗಿ ಜನಪರ ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸಿ ನಾಯಕತ್ವ ಗುಣ ಬೆಳೆಸಿ ಯಶಸ್ಸು ಸಾಧಿಸಬೇಕು ಎಂದು ರೋಟರ‌್ಯಾಕ್ಟ್ ಸಂಸ್ಥೆಯ ಸಭಾಪತಿ ಡಾ.ದೇವದಾಸ್ ರೈ ಸಲಹೆ ನೀಡಿದ್ದಾರೆ.

ಅವರು ರೋಟರ‌್ಯಾಕ್ಟ್ ಮಂಗಳೂರು ಸಿಟಿ ಸಂಸ್ಥೆಯ 2024-25 ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ರೋಟರಿ ಮಂಗಳೂರು ಸೆಂಟ್ರಲ್ ಸಂಸ್ಥೆಯ ಅಧ್ಯಕ್ಷರಾದ ಬ್ರಿಯಾನ್ ಪಿಂಟೋ ಪದಗ್ರಹಣ ಅಧಿಕಾರಿಯಾಗಿ ಭಾಗವಹಿಸಿ ಪದಗ್ರಹಣದ ವಿಧಿವಿಧಾನ ನೆರವೇರಿಸಿ ತಂಡಕ್ಕೆ ಶುಭಕೋರಿದರು.

ನಿರ್ಗಮನ ಅಧ್ಯಕ್ಷ ಅವಿನಾಶ್ ಕುಲಾಲ್ ಸ್ವಾಗತಿಸಿ ತಮ್ಮ ಅಧಿಕಾರಾವಧಿಯಲ್ಲಿ ಸಹಕರಿಸಿದ ಸರ್ವಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು. ನೂತನ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ ಬಿದ್ದಪ್ಪ ಎಂ.ಎ. ಪ್ರಸ್ತುತ ಸಾಲಿನಲ್ಲಿ ಹಲವಾರು ಜನಪರ ಯೋಜನೆಗಳನ್ನು ಹಮ್ಮಿಕೊಂಡಿದ್ದು ಅದನ್ನು ಅನುಷ್ಠಾನಗೊಳಿಸಲು ಸರ್ವಸದಸ್ಯರ ಪ್ರೋತ್ಸಾಹ ಮತ್ತು ಸಹಕಾರ ಕೋರಿದರು.

ಈ ಸಂದರ್ಭದಲ್ಲಿ ಡಾ.ಅಗ್ರಜ್, ಡೊಮಿನಿಕ್, ರೋಶನ್, ರಕ್ಷಣ್ ನೂತನ ಸದಸ್ಯರಾಗಿ ಸೇರ್ಪಡೆಗೊಂಡರು. ಗಣೇಶ್ ಮತ್ತು ಡೇರಿಲ್ ಡಿ’ಸೋಜ ಅವರನ್ನು ಸನ್ಮಾನಿಸಲಾಯಿತು. ನೂತನ ಕಾರ್ಯದರ್ಶಿ ಅಕ್ಷಯ್ ರೈ ವಾರ್ಷಿಕ ವರದಿ ಮಂಡಿಸಿ, ವಂದಿಸಿದರು. ಪೂಜಾ ನಿರೂಪಿಸಿದರು.

ಪದಾಧಿಕಾರಿಗಳ ವಿವರ : ಅರವಿನ್ ಡಿ’ಸೋಜ (ದಂಡಾಧಿಕಾರಿ), ಹಾರ್ದಿಕ್ (ಕೋಶಾಧಿಕಾರಿ). ಪ್ಲೋಯ್ದ ಮೋರಸ್ (ಸಾರ್ವಜನಿಕ ಸಂಪರ್ಕ ಅಧಿಕಾರಿ), ನಿರ್ದೇಶಕರು : ಕಾವ್ಯ (ಸಮಾಜ ಸೇವೆ), ಅಭಿಜಿತ್ (ವೃತ್ತಿಪರ ಸೇವೆ), ಶ್ರದ್ಧಾ ಕೇಶವ್ (ಸಂಸ್ಥೆ ಸೇವೆ), ವರುಣ್ ರೈ (ಅಂತರಾಷ್ಟ್ರೀಯ ಸೇವೆ)

ಇತ್ತೀಚಿನ ಸುದ್ದಿ

ಜಾಹೀರಾತು