10:02 PM Saturday28 - February 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ರೋಟರ‌್ಯಾಕ್ಟ್ ಜಿಲ್ಲಾಮಟ್ಟದ ವಾರ್ಷಿಕ ರಸಪ್ರಶ್ನೆ ಸ್ಪರ್ಧಾಕೂಟ-2024 ; ಚಮನ್ ಎಂ. ಮತ್ತು ಸಾತ್ವಿಕ್ ಯು.ಕೆ ಜೋಡಿ ತಂಡಕ್ಕೆ ಪ್ರಶಸ್ತಿ

14/05/2024, 17:44

ಮಂಗಳೂರು(Reporterkarnataka.com)

ಜಿಲ್ಲಾ ರೋಟರ‌್ಯಾಕ್ಟ್ ಸಂಸ್ಥೆಯ ಆಶ್ರಯದಲ್ಲಿ ರೋಟರಾಕ್ಟ್ ಮಾಹಿತಿ ಮತ್ತು ಜಾಗೃತಿ ಅಭಿಯಾನದ ಅಂಗವಾಗಿ ದಿ. ಶಾಂತರಾಮ ವಾಮಂಜೂರು ಸ್ಮಾರಕ 18ನೇ ವಾರ್ಷಿಕ ಅಂತರ್‌ಕ್ಲಬ್ ಜಿಲ್ಲಾ ಮಟ್ಟದ ರೋಟರಾಕ್ಟ್ ರಸಪ್ರಶ್ನೆ ಸ್ಪರ್ಧಾಕೂಟ ಸಂಸ್ಥೆಯ ಸಭಾಪತಿ ಡಾ.ದೇವದಾಸ್ ರೈ ನೇತೃತ್ವದಲ್ಲಿ ಇತ್ತೀಚೆಗೆ ನಗರದ ಕೆನರಾ ಕ್ಲಬ್ ಸಭಾಂಗಣದಲ್ಲಿ ಜರಗಿತು.

ರೋಟರಾಕ್ಟ್ ಕ್ಲಬ್ ಸಂತ ಅಲೋಶಿಯಸ್ ಕಾಲೇಜ್‌ನ್ನು ಪ್ರತಿನಿಧಿಸಿದ ಚಮನ್ ಎಂ. ಮತ್ತು ಸಾತ್ವಿಕ್ ಯು.ಕೆ. ಜೋಡಿ ತಂಡ ಪ್ರಥಮ ಸ್ಥಾನ ಗಳಿಸಿತು.

ರೋಟರಾಕ್ಟ್ ಕ್ಲಬ್ ಪುತ್ತೂರು ಸಂಸ್ಥೆಯನ್ನು ಪ್ರತಿನಿಧಿಸಿದ ಧನುಷಾ ಮತ್ತು ಶ್ರೇಯಸ್ ಜೋಡಿ ತಂಡವು ದ್ವಿತೀಯ ಸ್ಥಾನ ಪಡೆಯಿತು.

ಖ್ಯಾತ ತುಳು ಚಲನಚಿತ್ರ ನಟ ಭೋಜರಾಜ ವಾಮಂಜೂರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ತಮ್ಮ ದಿವಂಗತ ಸಹೋದರ ಶಾಂತಾರಾಮ ವಾಮಂಜೂರು ಸ್ಮರಣಾರ್ಥ ವರ್ಷಂಪ್ರತಿ ಈ ಸ್ಪರ್ದಾಕೂಟವನ್ನು ಆಯೋಜಿಸುವ ಉತ್ತಮ ಸಮಾಜಸೇವಾ ಕಾರ್ಯ ಶ್ಲಾಘನೀಯ ಎಂದು ನುಡಿದು ರೋಟರ‌್ಯಾಕ್ಟ್ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿ, ಸ್ಪರ್ಧಾ ವಿಜೇತರಿಗೆ ಪ್ರಶಸ್ತಿ, ಪ್ರಮಾಣ ಪತ್ರ ಪ್ರದಾನ ಮಾಡಿದರು.

ರೋಟರ‌್ಯಾಕ್ಟ್ ಜಿಲ್ಲಾ ಸಮಿತಿ ಅಧ್ಯಕ್ಷ ಮೂಡಬಿದ್ರೆ ನಗರ ಮೂಲದ ಮಹಮ್ಮದ್ ಅಸ್ಲಾಂ ಗೌರವ ಅತಿಥಿಯಾಗಿ ಪಾಲ್ಗೊಂಡು, ರೋಟರ‌್ಯಾಕ್ಟ್ ಸಂಸ್ಥೆಯ ಯುವ ಸದಸ್ಯರು ಸಂಸ್ಥೆಯ ಧೈಯ, ನೀತಿ, ಮಾಹಿತಿ, ಉದ್ದೇಶಗಳ ಜ್ಞಾನವನ್ನು ವೃದ್ಧಿಸಬೇಕು ಮತ್ತು ಸಂಸ್ಥೆಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಸಲಹೆ ನೀಡಿ ಸ್ಪರ್ಧಾ ವಿಜೇತರನ್ನು ಅಭಿನಂದಿಸಿದರು.

ವೇದಿಕೆಯಲ್ಲಿ ರೋಟರಾಕ್ಷ ಜಿಲ್ಲಾ ಪ್ರತಿನಿಧಿ ರಾಹುಲ್ ಆಚಾರ್ಯ, ಮಂಗಳೂರು ರೋಟರಿ ಸೆಂಟ್ರಲ್ ಸಂಸ್ಥೆಯ ಚುನಾಯಿತ ಅಧ್ಯಕ್ಷ ಬ್ರಯಾನ್ ಪಿಂಟೋ ಉಪಸ್ಥಿತರಿದ್ದರು.

ರೋಟರ‌್ಯಾಕ್ಟ್ ಮಂಗಳೂರು ಸಿಟಿ ಸಂಸ್ಥೆಯ ಅಧ್ಯಕ್ಷ ಅವಿನಾಶ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲೆಯ 6 ತಂಡಗಳು ಅಂತಿಮ ಮತ್ತು ನಿರ್ಣಾಯಕ ಸುತ್ತಿಗೆ ಪ್ರವೇಶ ಪಡೆದಿದ್ದವು. ಈ ಸ್ಪರ್ಧಾ ಕೂಟವನ್ನು ರೋಟರ‌್ಯಾಕ್ಟ್ ಮಂಗಳೂರು ಸಿಟಿ ಸಂಸ್ಥೆಯ ಸಭಾಪತಿ ಡಾ. ದೇವದಾಸ್ ರೈ ನಿರೂಪಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು