8:15 AM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ರೋಟರಿ ಕ್ಲಬ್ ಮಂಗಳೂರು ಸೀಸೈಡ್ ಸಂಸ್ಥೆಯ ಪದಗ್ರಹಣ ಸಮಾರಂಭ

12/07/2024, 16:51

ಮಂಗಳೂರು(ReporterKarnataka.com)

ರೋಟರಿ ಸಂಸ್ಥೆ ವಿಶ್ವದ ಪ್ರಥಮ ಅಂತರಾಷ್ಟ್ರೀಯ ಸ್ವಯಂ ಪ್ರೇರಿತ ಸೇವಾ ಸಂಸ್ಥೆಯಾಗಿದ್ದು, ನಿಸ್ವಾರ್ಥ ಸೇವಾ ಮನೋಭವಾದಿಂದ ದುರ್ಬಲರ ಆರ್ಥಿಕ ಏಳಿಗೆಗೆ ಶ್ರಮಿಸಬೇಕು, ಅಸ್ವಸ್ಥರ ಆರೋಗ್ಯ ಸಮಸ್ಯೆಗಳನ್ನು ಬಗೆಹರಿಸಿ ಜೀವನ ಶೈಲಿಯನ್ನು ಬದಲಿಸಬೇಕು ಎಂದು ರೋಟರಿ ಮಾಜಿ ಜಿಲ್ಲಾ ಗರ್ವನರ್‌ರಾದ ಡಾ.ದೇವಾದಸ್ ರೈ ಸಲಹೆ ನೀಡಿದರು.

ಅವರು ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಇತ್ತಿಚೆಗೆ ನಡೆದ ರೋಟರಿ ಕ್ಲಬ್ ಮಂಗಳೂರು ಸಿ ಸೈಡ್ ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಪದಗ್ರಹಣ ಅಧಿಕಾರಿಯಾಗಿ ಭಾಗವಹಿಸಿ ಮಾತನಾಡಿದರು.

ರೋಟರಿ ಜಿಲ್ಲಾ ಸಹಾಯಕ ಗವರ್ನರ್ ಡಾ.ರಂಜನ್‌ ವಾರ್ತಾ ಗೃಹಪತ್ರಿಕೆ “ಸಮುದ್ರ ವಾಹಿನಿ”ಯನ್ನು ಅನಾವರಣಗೊಳಿಸಿದರು.

ವಲಯ ಅಧಿಕಾರಿ ಡಾ.ಯತೀಶ್ ಕುಮಾರ್ ಮತ್ತು ಸಂಸ್ಥೆಯ ಸಲಹೆಗಾರ ಮಾಧವ್ ಸುವರ್ಣ ಉಪಸ್ಥಿತರಿದ್ದರು.

ನಿರ್ಗಮಿತ ಅಧ್ಯಕ್ಷ ಶಿವರಾಮ್ ಸ್ವಾಗತಿಸಿ ತಮ್ಮ ಅಧಿಕಾರಾವಧಿಯಲ್ಲಿ ಸದಸ್ಯರು ನೀಡಿದ ಬೆಂಬಲ ಮತ್ತು ಸಹಕಾರವನ್ನು ಸ್ಮರಿಸಿ ಕೃತಜ್ಞತೆಯನ್ನು ಸಲಿಸಿದ್ದರು. ನಿರ್ಗಮಿತ ಕಾರ್ಯದರ್ಶಿ ಆಚನ್ ಶೆಟ್ಟಿ ವಾರ್ಷಿಕ ವರದಿ ಮಂಡಿಸಿದರು.

ನೂತನ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ ಹೀರಾಚಂದ್ ಕರ್ಕೇರ ತಮ್ಮ ಅಧಿಕಾರವಧಿಯಲ್ಲಿ ಹಲವಾರು ಜನಪರ ಸೇವಾಯೋಜನೆಗಳನ್ನು ಹಮ್ಮಿಕೊಂಡಿದ್ದು ಅದನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಸರ್ವ ಸದ್ಯಸರ ಕೋರಿದರು. ಮನೋಹರ್ ಕದ್ರಿ ನಿರೂಪಿಸಿದರು. ನೂತನ ಕಾರ್ಯದರ್ಶಿ ಆಶೋಕ್ ವಂದಿಸಿದರು.

ಪದಾಧಿಕಾರಿಗಳ ವಿವರ : ಕೋಶಾಧಿಕಾರಿ ಅಚನ್ ಶೆಟ್ಟಿ, ದಂಡಾಧಿಕಾರಿ ಜಗಜೀವನ್ ದಾಸ್, ನಿರ್ದೇಶಕರು ನೆಲ್ಸನ್ ಗೋವಿಯಸ್ (ಸಂಸ್ಥೆ ಸೇವೆ), ಕಿರಣ್ ಕುಮಾರ್ (ವೃತ್ತಿಪರ ಸೇವೆ) ಚಂದ್ರಶೇಖರ್ (ಸಮುದಾಯ ಸೇವೆ) ಸುರೇಶ್ (ಅಂತರಾಷ್ಟ್ರೀಯ ಸೇವೆ), ಶ್ರೀಮತಿ ಸುನಂದ (ಯುವಜನ ಸೇವೆ).

ಇತ್ತೀಚಿನ ಸುದ್ದಿ

ಜಾಹೀರಾತು