5:02 AM Friday15 - August 2025
ಬ್ರೇಕಿಂಗ್ ನ್ಯೂಸ್
‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ರೋಟರಿ ಕ್ಲಬ್ ಯುವ ಪದಗ್ರಹಣ: ದಶಮಾನ ವರ್ಷದ ಅಧ್ಯಕ್ಷರಾಗಿ ಅಶ್ವಿನಿಕೃಷ್ಣ ಮುಳಿಯ, ಕಾರ್ಯದರ್ಶಿ ವಚನಾ ಜಯರಾಂ ಕೋಶಾಧಿಕಾರಿ ಅಭಿಷ್ ಕೆ.

09/07/2024, 19:22

ಪುತ್ತೂರು(reporterkarnataka.com): ರೋಟರಿ ಕ್ಲಬ್ ಯುವ ಸ್ಥಾಪಿತವಾಗಿ ಹತ್ತನೇ ವರ್ಷದ ಸಂಭ್ರಮದಲ್ಲಿದೆ. 2024-25 ಅವಧಿಯ ಅಧ್ಯಕ್ಷೆಯಾಗಿ ಅಶ್ವಿನಿಕೃಷ್ಣ ಮುಳಿಯ, ಕಾರ್ಯದರ್ಶಿಯಾಗಿ ವಚನ ಜಯರಾಂ ಹಾಗೂ
ಕೋಶಾಧಿಕಾರಿಯಾಗಿ ಅಭಿಷ್ ಕೆ. ಅವರು ಇಂದು ಪದಗ್ರಹಣ ಮಾಡಿದರು.


ಪದಗ್ರಹಣವನ್ನು ಪಿಡಿಜಿ ಗೌರಿ ಹಡಿಗಾಲ್ ಅವರು ನೆರವೇರಿಸಿದ್ದಾರೆ.
ಕ್ಲಬ್ ನ ಕ್ಲಬ್ ಸರ್ವಿಸ್ ಡೈರೆಕ್ಟರ್ ಆಗಿ ಕುಸುಮ್ ರಾಜ್, ವೊಕೇಷನಲ್ ಸರ್ವಿಸ್ ಡೈರೆಕ್ಟರ್ ಆಗಿ ಗೌರವ ಭಾರದ್ವಾಜ್, ಕಮ್ಯುನಿಟಿ ಸರ್ವಿಸ್ ಡೈರೆಕ್ಟರ್ ಆಗಿ ನಿಹಾಲ್ ಶೆಟ್ಟಿ, ಇಂಟರ್ನ್ಯಾಷನಲ್ ಸರ್ವಿಸ್ ಡೈರೆಕ್ಟರ್ ಆಗಿ ವಿನೀತ್ ಶೆಣೈ, ಯುತ್ ಸರ್ವಿಸ್ ಡೈರೆಕ್ಟರ್ ಆಗಿ ಸುದರ್ಶನ್ ರೈ ಅವರು ಆಯ್ಕೆಯಾಗಿದ್ದಾರೆ. ಬುಲೆಟಿನ್ ಎಡಿಟರ್ ಆಗಿ Dr ದೀಪಕ್ ಕೆ ಬಿ ಕ್ಲಬ್ ನ, ಅಸಿಸ್ಟೆಂಟ್ ಗವರ್ನರ್ ಆಗಿ Dr ಹರ್ಷಕುಮಾರ್ ರೈ, ಜೋನಲ್ ಲಿಫ್ಟಿನೆಂಟ್ ಆಗಿ Dr ಪೀಟರ್ ವಿಲ್ಸನ್ ಪ್ರಭಾಕರ್ ಅವರು ಕಾರ್ಯನಿರ್ವಹಿಸಲಿದ್ದಾರೆ . ಮೆಂಬರ್ ಶಿಪ್ ಚೇರ್ ಮೆನ್ ಆಗಿ Dr ಯದುರಾಜ್, TRF ಚೇರ್ ಮೆನ್ ಆಗಿ ಸ್ವಸ್ತಿಕ ಶೆಟ್ಟಿ, ಪಬ್ಲಿಕ್ ಇಮೇಜ್ ಚೇರ್ಮನ್ ಆಗಿ ಸುದರ್ಶನ್ ಹಾರಕರೆ , clcc/wins ಚೇರ್ ಮೆನ್ ಆಗಿ ಕನಿಷ್ಕ, ಡಿಸ್ಟ್ರಿಕ್ಟ್ ಪ್ರೊಜೆಕ್ಟ್ ಚೇರ್ ಮೆನ್ ಆಗಿ ರತ್ನಾಕರ ರೈ , ಪೋಲಿಯೋ ಪ್ಲಸ್ ಚೇರ್ ಮೆನ್ ಆಗಿ ಸೋನ ಪ್ರದೀಪ್, ಕ್ಲಬ್ ಲರ್ನಿಂಗ್ ಫೇಸಿಲಿಟೇಟರ್ ಆಗಿ ಉಮೇಶ್ ನಾಯಕ್ ಹಾಗೂ ಸರ್ಜೆಂಟ್ ಎಟ್ ಆರ್ಮ್ ಆಗಿ ತ್ರಿವೇಣಿ ಗಣೇಶ್ ಅವರು ಆಯ್ಕೆಯಾಗಿರುತ್ತಾರೆ .
ಸಂಧ್ಯಾ ಸುರಕ್ಷಾ ಆರೋಗ್ಯ ಮಧ್ಯಪಾನ ಡ್ರಗ್ ಡಿ ಎಡಿಕ್ಷನ್ ಕಾರ್ಯಕ್ರಮಗಳು, ಸರ್ವೈಕಲ್ ಕ್ಯಾನ್ಸರ್ ಬಗ್ಗೆ ಯೋಜನೆಗಳು, ಕುಡಿಯುವ ನೀರಿನ ಕೊಡುಗೆಗಳು, ಅಂಗನವಾಡಿ ಶಾಲೆಗೆ ಕೊಡುಗೆಗಳು, ರೋಡ್ ಸೇಫ್ಟಿ ಕಾರ್ಯಕ್ರಮಗಳು, ಮೆಂಟಲ್ ಹೆಲ್ತ್ ಹಾಗೂ ಶಾಲಾ-ಕಾಲೇಜು ಮಕ್ಕಳಿಗೆ ಸಾಫ್ಟ್ ಸ್ಕಿಲ್ ಟ್ರೈನಿಂಗ್ ಹಾಗೂ ಪ್ರೈಮರಿ ಹೆಲ್ತ್ ಸೆಂಟರ್ ಗಳಿಗೆ ECG ಮೆಷಿನ್ ಮತ್ತು CRR ಬಗ್ಗೆ ಅಂಗನವಾಡಿ ಕಾರ್ಯಕರ್ತರಿಗೆ ಹಾಗೂ ಕಾಲೇಜು ಮಕ್ಕಳಿಗೆ ಅರಿವು ಹಾಗೂ ಪ್ರಾತ್ಯಕ್ಷತೆ ನೀಡುವ ಬಗ್ಗೆ ಈ ವರ್ಷದ ಯೋಚನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ನಿಯೋಜಿತ ಅಧ್ಯಕ್ಷೆ ಅಶ್ವಿನಿ ಕೃಷ್ಣ ಮುಳಿಯ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು