7:27 PM Thursday4 - June 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ರಾಜೇಂದ್ರ ಚೋಳನ್ ನೇಮಕ ಕೊಡಗು ಜಿಲ್ಲೆಯಲ್ಲಿ ಜುಲೈ 30ರವರೆಗೆ ಮೀನುಗಾರಿಕೆ ನಿಷೇಧ ಯು.ಟಿ. ಖಾದರ್: ಸ್ಪೀಕರ್ ಸ್ಥಾನದಿಂದ ಮತ್ತೆ ಸಕ್ರೀಯ ರಾಜಕೀಯಕ್ಕೆ; ಡಿಕೆಶಿ ಸಂಪುಟದಲ್ಲಿ ಸಚಿವ… ಡಿ.ಕೆ. ಶಿವಕುಮಾರ್ ರಾಜ್ಯಭಾರ ಶುರು: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ ರಾಜೀನಾಮೆ: ನೂತನ ಪಕ್ಷ ಸ್ಥಾಪನೆ? ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು…

ಇತ್ತೀಚಿನ ಸುದ್ದಿ

ರೋಟರಿ ಕ್ಲಬ್ ಯುವ ಪದಗ್ರಹಣ: ದಶಮಾನ ವರ್ಷದ ಅಧ್ಯಕ್ಷರಾಗಿ ಅಶ್ವಿನಿಕೃಷ್ಣ ಮುಳಿಯ, ಕಾರ್ಯದರ್ಶಿ ವಚನಾ ಜಯರಾಂ ಕೋಶಾಧಿಕಾರಿ ಅಭಿಷ್ ಕೆ.

09/07/2024, 19:22

ಪುತ್ತೂರು(reporterkarnataka.com): ರೋಟರಿ ಕ್ಲಬ್ ಯುವ ಸ್ಥಾಪಿತವಾಗಿ ಹತ್ತನೇ ವರ್ಷದ ಸಂಭ್ರಮದಲ್ಲಿದೆ. 2024-25 ಅವಧಿಯ ಅಧ್ಯಕ್ಷೆಯಾಗಿ ಅಶ್ವಿನಿಕೃಷ್ಣ ಮುಳಿಯ, ಕಾರ್ಯದರ್ಶಿಯಾಗಿ ವಚನ ಜಯರಾಂ ಹಾಗೂ
ಕೋಶಾಧಿಕಾರಿಯಾಗಿ ಅಭಿಷ್ ಕೆ. ಅವರು ಇಂದು ಪದಗ್ರಹಣ ಮಾಡಿದರು.


ಪದಗ್ರಹಣವನ್ನು ಪಿಡಿಜಿ ಗೌರಿ ಹಡಿಗಾಲ್ ಅವರು ನೆರವೇರಿಸಿದ್ದಾರೆ.
ಕ್ಲಬ್ ನ ಕ್ಲಬ್ ಸರ್ವಿಸ್ ಡೈರೆಕ್ಟರ್ ಆಗಿ ಕುಸುಮ್ ರಾಜ್, ವೊಕೇಷನಲ್ ಸರ್ವಿಸ್ ಡೈರೆಕ್ಟರ್ ಆಗಿ ಗೌರವ ಭಾರದ್ವಾಜ್, ಕಮ್ಯುನಿಟಿ ಸರ್ವಿಸ್ ಡೈರೆಕ್ಟರ್ ಆಗಿ ನಿಹಾಲ್ ಶೆಟ್ಟಿ, ಇಂಟರ್ನ್ಯಾಷನಲ್ ಸರ್ವಿಸ್ ಡೈರೆಕ್ಟರ್ ಆಗಿ ವಿನೀತ್ ಶೆಣೈ, ಯುತ್ ಸರ್ವಿಸ್ ಡೈರೆಕ್ಟರ್ ಆಗಿ ಸುದರ್ಶನ್ ರೈ ಅವರು ಆಯ್ಕೆಯಾಗಿದ್ದಾರೆ. ಬುಲೆಟಿನ್ ಎಡಿಟರ್ ಆಗಿ Dr ದೀಪಕ್ ಕೆ ಬಿ ಕ್ಲಬ್ ನ, ಅಸಿಸ್ಟೆಂಟ್ ಗವರ್ನರ್ ಆಗಿ Dr ಹರ್ಷಕುಮಾರ್ ರೈ, ಜೋನಲ್ ಲಿಫ್ಟಿನೆಂಟ್ ಆಗಿ Dr ಪೀಟರ್ ವಿಲ್ಸನ್ ಪ್ರಭಾಕರ್ ಅವರು ಕಾರ್ಯನಿರ್ವಹಿಸಲಿದ್ದಾರೆ . ಮೆಂಬರ್ ಶಿಪ್ ಚೇರ್ ಮೆನ್ ಆಗಿ Dr ಯದುರಾಜ್, TRF ಚೇರ್ ಮೆನ್ ಆಗಿ ಸ್ವಸ್ತಿಕ ಶೆಟ್ಟಿ, ಪಬ್ಲಿಕ್ ಇಮೇಜ್ ಚೇರ್ಮನ್ ಆಗಿ ಸುದರ್ಶನ್ ಹಾರಕರೆ , clcc/wins ಚೇರ್ ಮೆನ್ ಆಗಿ ಕನಿಷ್ಕ, ಡಿಸ್ಟ್ರಿಕ್ಟ್ ಪ್ರೊಜೆಕ್ಟ್ ಚೇರ್ ಮೆನ್ ಆಗಿ ರತ್ನಾಕರ ರೈ , ಪೋಲಿಯೋ ಪ್ಲಸ್ ಚೇರ್ ಮೆನ್ ಆಗಿ ಸೋನ ಪ್ರದೀಪ್, ಕ್ಲಬ್ ಲರ್ನಿಂಗ್ ಫೇಸಿಲಿಟೇಟರ್ ಆಗಿ ಉಮೇಶ್ ನಾಯಕ್ ಹಾಗೂ ಸರ್ಜೆಂಟ್ ಎಟ್ ಆರ್ಮ್ ಆಗಿ ತ್ರಿವೇಣಿ ಗಣೇಶ್ ಅವರು ಆಯ್ಕೆಯಾಗಿರುತ್ತಾರೆ .
ಸಂಧ್ಯಾ ಸುರಕ್ಷಾ ಆರೋಗ್ಯ ಮಧ್ಯಪಾನ ಡ್ರಗ್ ಡಿ ಎಡಿಕ್ಷನ್ ಕಾರ್ಯಕ್ರಮಗಳು, ಸರ್ವೈಕಲ್ ಕ್ಯಾನ್ಸರ್ ಬಗ್ಗೆ ಯೋಜನೆಗಳು, ಕುಡಿಯುವ ನೀರಿನ ಕೊಡುಗೆಗಳು, ಅಂಗನವಾಡಿ ಶಾಲೆಗೆ ಕೊಡುಗೆಗಳು, ರೋಡ್ ಸೇಫ್ಟಿ ಕಾರ್ಯಕ್ರಮಗಳು, ಮೆಂಟಲ್ ಹೆಲ್ತ್ ಹಾಗೂ ಶಾಲಾ-ಕಾಲೇಜು ಮಕ್ಕಳಿಗೆ ಸಾಫ್ಟ್ ಸ್ಕಿಲ್ ಟ್ರೈನಿಂಗ್ ಹಾಗೂ ಪ್ರೈಮರಿ ಹೆಲ್ತ್ ಸೆಂಟರ್ ಗಳಿಗೆ ECG ಮೆಷಿನ್ ಮತ್ತು CRR ಬಗ್ಗೆ ಅಂಗನವಾಡಿ ಕಾರ್ಯಕರ್ತರಿಗೆ ಹಾಗೂ ಕಾಲೇಜು ಮಕ್ಕಳಿಗೆ ಅರಿವು ಹಾಗೂ ಪ್ರಾತ್ಯಕ್ಷತೆ ನೀಡುವ ಬಗ್ಗೆ ಈ ವರ್ಷದ ಯೋಚನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ನಿಯೋಜಿತ ಅಧ್ಯಕ್ಷೆ ಅಶ್ವಿನಿ ಕೃಷ್ಣ ಮುಳಿಯ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು