5:40 AM Sunday13 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ರೋಟರಿ ಶ್ರೀನಿವಾಸಪುರ ಸೆಂಟ್ರಲ್‌ ಪದಗ್ರಹಣ; ಸೇವೆಗೆ ಜಾತಿ, ಮತ, ಭಾಷೆಯ ಎಲ್ಲೆ ಇಲ್ಲ: ಡಾ. ವೈ.ವಿ. ವೆಂಕಟಾಚಲ

01/08/2021, 08:22

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಮನುಷ್ಯ ಸೇವೆಯಲ್ಲಿ ಸಾರ್ಥಕತೆ ಕಂಡುಕೊಳ್ಳಬೇಕು. ಸಮ ಸಮಾಜ ಕಲ್ಪನೆ ಸಾಕರಗೊಳ್ಳಲು ಸಮುದಾಯದಲ್ಲಿ ಮಾನವೀಯ ಪ್ರಜ್ಞೆ ಗರಿಗೆದರಬೇಕು ಎಂದು ರೋಟರಿ ಸೆಂಟ್ರಲ್ ಶ್ರೀನಿವಾಸಪುರ ಸಂಸ್ಥೆಯ ನೂತನ ಅಧ್ಯಕ್ಷ ಡಾ. ವೈ.ವಿ.ವೆಂಕಟಾಚಲ ಹೇಳಿದರು.

ಪಟ್ಟಣದ ವೆಂಟೇಶಗೌಡ ಕಲ್ಯಾಣ ಮಂಟಪದ ಆವರಣದಲ್ಲಿ ಏರ್ಪಡಿಸಿದ್ದ ಪದಗ್ರಹಣ ಸಮಾರಂಭದಲ್ಲಿ ರೋಟರಿ ಸೆಂಟ್ರಲ್ ಶ್ರೀನಿವಾಸಪುರ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದರು.

ಸೇವೆಗೆ ಜಾತಿ, ಮತ, ಭಾಷೆಯ ಎಲ್ಲೆ ಇರುವುದಿಲ್ಲ. ಅಗತ್ಯ ಇರುವ ವ್ಯಕ್ತಿಗಳಿಗೆ ಸಹಾಯ ಹಸ್ತ ನಿಡುವುದು ಮಾನವ ಧರ್ಮ ಎಂದು ಹೇಳಿದರು.

ಶಾಂತಿ ಬೆಳೆಸುವುದು ಹಾಗೂ ಅಶಾಂತಿ ಹೋಗಲಾಡಿಸುವುದು, ಸಮ ಸಮಾಜ ನಿರ್ಮಾಣಕ್ಕೆ ಪ್ರತ್ನಿಸುವುದು, ಶ್ರೇಷ್ಠ ಜೀವನದೆಡೆಗೆ ಜನರನ್ನು ಕೊಂಡೊಯ್ಯುವುದು ಸೇವಾ ಸಂಸ್ಥೆಯ ಉದ್ದೇಶವಾಗಿದೆ. ಈ ಉದ್ದೇಶ ನೆರವೇರಲು ಮಾನವೀಯ ನೆಲೆಯಲ್ಲಿ, ಸಮರ್ಪಣಾ ಭಾವದಿಂದ ಕಾರ್ಯನಿರ್ವಹಿಸಬೇಕು ಎಂದು ಅಭಿಪ್ರಾಯಪಟ್ಟರು

ಜನರು ಹಾಗೂ ಸಾಕು ಪ್ರಾಣಿಗಳ ಆರೋಗ್ಯ ರಕ್ಷಣೆಗೆ ಪೂರಕವಾಗಿ ಉಚಿತ ಆರೋಗ್ಯ ಶಿಬಿರಗಳನ್ನು ಏರ್ಪಡಿಸಲಾಗುವುದು. ಅಂಗ ದಾನದ ಮಹತ್ವ ಕುರಿತು ಜನರಲ್ಲಿ ಅರಿವು ಮೂಡಿಸಲಾಗುವುದು. ಕೋವಿಡ್ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಮುದಾಯದ ಗಮನ ಸೆಳೆಯಲಾಗುವುದು. ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸದಸ್ಯರ ಸಹಕಾರದಿಂದ ಸಮಾಜ ಸೇವಾ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ರೋಟರಿ ಶ್ರೀನಿವಾಸಪುರ ಸೆಂಟ್ರಲ್‌ನ ನಿಕಟಪೂರ್ವ ಅಧ್ಯಕ್ಷ ಶಿವಮೂರ್ತಿ ಮಾತನಾಡಿ, ತಮ್ಮ ಅಧಿಕಾರಾವಧಿಯಲ್ಲಿ ಕೋವಿಡ್ ಸಂಕಷ್ಟದ ನಡುವೆಯೂ ೧೪೮ ಯೋಜನೆಗಳನ್ನು ರೂಪಿಸಿ ಜಾರಿಗೆ ತರಲಾಯಿತು. ಯೋಜನೆಗಳ ಲಾಭವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲಾಯಿತು. ಈಗಾಗಲೇ ಸಮಾಜ ಸೇವೆಯಲ್ಲಿ ತಮ್ಮದೇ ಆಧ ಛಾಪು ಮೂಡಿಸಿರುವ ಡಾ. ವೈ.ವಿ.ವೆಂಕಟಾಚಲ ಅವರು ಸಮಾಜ ಮುಖಿ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಸಂಸ್ಥೆಯ ಜಿಲ್ಲಾ ಗರ‍್ನರ್ ಉದಯ್ ಕುಮಾರ್ ಭಾಸ್ಕರ್, ಸುಧಾರಕರ್, ಬಿ.ಶ್ರೀನಿವಾಸ್, ಸೀತರೆಡ್ಡಿ, ಕೃಷ್ಣಮೂರ್ತಿ, ಶ್ರೀನಿವಾಸರೆಡ್ಡಿ, ಎನ್.ಬಿ.ಗೋಪಾಲಗೌಡ ಸೇವೆಯ ಮಹತ್ವ ಕುರಿತು ಮಾತನಾಡಿದರು. ಕಾರ್ಯದರ್ಶಿ ಎಚ್.ಎನ್.ನಾರಾಯಣಸ್ವಾಮಿ, ಮುಖಂಡರಾದ ಎಲ್.ಗೊಪಾಲಕೃಷ್ಣ, ಕೆ.ವಿ.ಶಂಕರಪ್ಪ, ಎನ್.ರಾಜೇಂದ್ರ ಪ್ರಸಾದ್, ಗೋಪಾಲರೆಡ್ಡಿ, ಟಿ.ಎಸ್.ರಾಮಚಂದ್ರೇಗೌಡ, ರವೀಂದ್ರಯ್ಯ ಕುಲಕರ್ಣಿ, ಎಂ.ಎನ್.ರಾಮಚಂದ್ರೇಗೌಡ, ಎಸ್.ಎನ್.ಮಂಜುನಾಥರೆಡ್ಡಿ, ವೀರವೆಂಕಟಪ್ಪ, ಲಕ್ಷ್ಮಣಗೌಡ, ಕೃಷ್ಣಾರೆಡ್ಡಿ, ನಾಗರಾಜ್, ಟಿ.ಎಸ್.ಮಾಯಾ, ಡಾ. ಶುಭಾ, ಬಾಲಚಂದ್ರ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು