11:36 AM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ರೌಂಡ್ ಟೇಬಲ್ ಇಂಡಿಯಾ ಮತ್ತು ಲೇಡೀಸ್ ಸರ್ಕಲ್ ಇಂಡಿಯಾ ಸಂಸ್ಥೆಯಿಂದ ಕೋವಿಡ್ ಚಿಕಿತ್ಸೆಗಾಗಿ 30 ಲಕ್ಷ ರೂ. ಮೌಲ್ಯದ ವೈದ್ಯಕೀಯ ಉಪಕರಣಗಳ ನೆರವು

26/08/2021, 15:11

ಬೆಂಗಳೂರು(reporterkarnataka.com): ಕೊರೊನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಿರುವ ರೌಂಡ್ ಟೇಬಲ್ ಇಂಡಿಯಾ (ಆರ್ಟಿಐ) ಮತ್ತು ಲೇಡೀಸ್ ಸರ್ಕಲ್ ಇಂಡಿಯಾ (ಎಲ್ಸಿಐ) ಸಂಸ್ಥೆಗಳು ಡೋನರ್ಸ್ ಅಡಮಾಸ್ ಬಿಲ್ಡರ್ಸ್ ಪ್ರೈ.ಲಿ. (ಮೇಪಲ್ ಟ್ರೀ ಪ್ರಾಪರ್ಟಿ), ಬೆಂಗಳೂರು ರೌಂಡ್ ಟೇಬಲ್ 07 ಮತ್ತು ಬೆಂಗಳೂರು ಲೇಡೀಸ್ ಸರ್ಕಲ್ 19 ಸಹಯೋಗದಲ್ಲಿ ಬೆಂಗಳೂರಿನ ಅಗ್ರಸೇನ್ ಆಸ್ಪತ್ರೆ ಮತ್ತು ಜಯದೇವ ಆಸ್ಪತ್ರೆಗಳಿಗೆ 30 ಲಕ್ಷ ರೂ. ಮೌಲ್ಯದ ವೈದ್ಯಕೀಯ ಉಪಕರಣಗಳನ್ನು ದೇಣಿಗೆ ನೀಡಿವೆ. 

ಕೋವಿಡ್-19 ಸೋಂಕಿನಿಂದ ಬಳಲುತ್ತಿರುವ ಬಡವರ ಚಿಕಿತ್ಸೆಗಾಗಿ ಈ ಉಪಕರಣಗಳನ್ನು ಬಳಸಲಾಗುತ್ತದೆ. ದಾನಿಗಳಿಗೆ ಧನ್ಯವಾದ ಅರ್ಪಿಸಿರುವ ಅಗ್ರಸೇನ್ ಆಸ್ಪತ್ರೆಯ ಅಧ್ಯಕ್ಷ ಸತೀಶ್ ಜೈನ್, “ಅಡಮಾಸ್ ಬಿಲ್ಡರ್ಸ್, ರೌಂಡ್ ಟೇಬಲ್ ಇಂಡಿಯಾ ಹಾಗೂ ಲೇಡೀಸ್ ಸರ್ಕಲ್ ಇಂಡಿಯಾ ವತಿಯಿಂದ ನಾವು ಸುಮಾರು 15 ಲಕ್ಷ ರೂ. ಮೌಲ್ಯದ ಒಂದು ವೆಂಟಿಲೇಟರ್ ಹಾಗೂ ನಾಲ್ಕು ಮಾನಿಟರ್ಗಳನ್ನು ಸ್ವೀಕರಿಸಿದ್ದೇವೆ. ಇವುಗಳನ್ನು ಪಡೆದುಕೊಳ್ಳುವಲ್ಲಿ ನೆರವಾದ ನಮ್ಮ ಟ್ರಸ್ಟಿಗಳಿಗೆ ಧನ್ಯವಾದಗಳು” ಎಂದು ಹೇಳಿದ್ದಾರೆ. 

ಮೇಪಲ್ ಟ್ರೀ, ರೌಂಡ್ ಟೇಬಲ್ ಇಂಡಿಯಾ ಹಾಗೂ ಲೇಡೀಸ್ ಸರ್ಕಲ್ ಇಂಡಿಯಾ ಸಂಸ್ಥೆಗಳು ಸಮಾಜದ ಬಗ್ಗೆ ಹೊಂದಿರುವ ಕಳಕಳಿ, ಔದಾರ್ಯ ಹಾಗೂ ಈ ಸಂಸ್ಥೆಗಳ ಸದಸ್ಯರ ಮಾನವೀಯ ನೆರವಿನ ಮನೋಭಾವವನ್ನು ಶ್ಲಾಘಿಸಿರುವ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಮಂಜುನಾಥ್, “ಮೇಪಲ್ ಟ್ರೀ, ರೌಂಡ್ ಟೇಬಲ್ ಹಾಗೂ ಲೇಡೀಸ್ ಸರ್ಕಲ್ ಇಂಡಿಯಾ ಸಂಸ್ಥೆಗಳು ಜಯದೇವ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯೋಗೆ ಉದಾರ ನೆರವು ನೀಡಿವೆ. ಇವು ನೀಡಿರುವ ವೈದ್ಯಕೀಯ ಉಪಕರಣಗಳು ತೀವ್ರ ಅನಾರೋಗ್ಯದಿಂದ ಬಳಲುತ್ತಿರುವವರ ಜೀವ ಉಳಿಸಲು ನೆರವಾಗಲಿವೆ. ಇನ್ನು ಮುಂದೆಯೂ ಕೂಡ ಹೆಚ್ಚಿನ ನೆರವು ನೀಡುವುದಿದ್ದರೆ ಈ ಸಂಸ್ಥೆಗಳ ಜೊತೆಗೆ ಜಯದೇವ ಆಸ್ಪತ್ರೆಯು ಸಂತೋಷದಿಂದ ಕೈಜೋಡಿಸಲಿದೆ” ಎಂದು ಹೇಳಿದ್ದಾರೆ.

ವೈದ್ಯಕೀಯ ಉಪಕರಣಗಳನ್ನು ಹಸ್ತಾಂತರಿಸುವ ಸಂದರ್ಭದಲ್ಲಿ ರೌಂಡ್ ಟೇಬಲ್ ಇಂಡಿಯಾ ಮತ್ತು ಲೇಡೀಸ್ ಸರ್ಕಲ್ ಇಂಡಿಯಾ ವತಿಯಿಂದ ಸ್ವಪ್ನಾ (ಲೇಡೀಸ್ ಸರ್ಕಲ್ ರಾಷ್ಟ್ರೀಯ ಅಧ್ಯಕ್ಷೆ), ಸಂದೇಶ್ (ಏರಿಯಾ 6 ಚೇರ್ಮನ್), ಸಿಮ್ರಿತಾ (ಏರಿಯಾ 6 ವೈಸ್ ಚೇರ್ಮನ್), ಪರಶುರಾಮ್ (ಬೆಂಗಳೂರು ರೌಂಡ್ ಟೇಬಲ್ 7 ಚೇರ್ಮನ್), ತುಳಸಿ (ಲೇಡೀಸ್ ಸರ್ಕಲ್ 19 ಚೇರ್ಮನ್), ವೈಭವ್ ಅರೋರಾ (ಏರಿಯಾ ಪ್ರಾಜೆಕ್ಟ್ಸ್ ಕನ್ವೀನರ್), ಹಿಮಾಂಶು (ರೌಂಡ್ ಟೇಬಲ್ ಇಂಡಿಯಾದ ನಿವೃತ್ತ ರಾಷ್ಟ್ರೀಯ ಅಧ್ಯಕ್ಷ), ಶ್ರವಣ್ (ರೌಂಡ್ ಟೇಬಲ್ 7 ಮಾಜಿ ಚೇರ್ಮನ್) ಹಾಗೂ ರೌಂಡ್ ಟೇಬಲ್ 7ನ ಮಾಜಿ ಸದಸ್ಯ ಸಚಿನ್ ಉಪಸ್ಥಿತರಿದ್ದರು. 

30 ಲಕ್ಷ ರೂ. ಮೌಲ್ಯದ ಉಪಕರಣಗಳನ್ನು ಅಗ್ರಸೇನ್ ಮತ್ತು ಜಯದೇವ ಆಸ್ಪತ್ರೆಗೆ ದೇಣಿಗೆ ನೀಡಿರುವ ಅಡಮಾಸ್ ಬಿಲ್ಡರ್ಸ್ ಪ್ರೈ.ಲಿ. ಸಂಸ್ಥೆಗೆ ಇದೇ ಸಂದರ್ಭದಲ್ಲಿ ರೌಂಡ್ ಟೇಬಲ್ ಇಂಡಿಯಾ ಮತ್ತು ಲೇಡೀಸ್ ಸರ್ಕಲ್ ಇಂಡಿಯಾ ಸಂಸ್ಥೆಗಳ ಪದಾಧಿಕಾರಿಗಳು ಧನ್ಯವಾದ ಸಲ್ಲಿಸಿದ್ದಾರೆ. ಕೊರೋನಾದಂತಹ ವಿಪತ್ತಿನ ಸಂದರ್ಭದಲ್ಲಿ ಆಸ್ಪತ್ರೆಗಳಿಗೆ ವೈದ್ಯಕೀಯ ಮೂಲಸೌಕರ್ಯದ ನೆರವು ನೀಡುವ ಮೂಲಕ ಸಮಾಜದ ಒಳಿತಿಗಾಗಿ ಇನ್ನು ಮುಂದೆಯೂ ಶ್ರಮಿಸುತ್ತೇವೆ ಎಂದೂ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು