10:44 AM Thursday26 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಆರೆಸ್ಸೆಸ್‌ ಬೈಯುವ ಸಿದ್ದರಾಮಯ್ಯರ ಚಾಳಿ ಈಗ ಕುಮಾರಸ್ವಾಮಿಗೆ ಬಂದಿದೆ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ

27/06/2022, 19:10

ಬೆಂಗಳೂರು(reporterkarnataka.com): ಆರ್‌ಎಸ್‌ಎಸ್‌ ಬೈಯ್ಯೋದು ಮಾಜಿ ಮುಖ್ಯಮಂತ್ರಿ
ಸಿದ್ದರಾಮಯ್ಯರ ಕೆಟ್ಟಚಾಳಿ ಆಗಿತ್ತು. ಈಗ ಅದು ಕುಮಾರಸ್ವಾಮಿಗೂ ಬಂದಿದೆ. ಆರ್‌ಎಸ್‌ಎಸ್‌ ಬೈದರೆ ಸತ್ತ ಮೇಲೆ ಸ್ವರ್ಗಕ್ಕೆ ಹೋಗಬಹುದು ಎಂದು ಕುಮಾರಸ್ವಾಮಿ ತಿಳಿದಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಕುಟುಕಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರಗಳ ರಚನೆಗೆ ಆರ್‌ಎಸ್‌ಎಸ್‌ ಪರ್ಸೆಂಟೇಜ್‌ ರೂಪದಲ್ಲಿ ಹಣ ಸಂಗ್ರಹಿಸುತ್ತಿದೆ ಎಂದು ಎಚ್‌.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಆರ್‌ಎಸ್‌ಎಸ್‌ಗೆ ಬೈಯ್ಯದಿದ್ದರೆ ಅವರಿಗೆ ತಿಂದ ಅನ್ನ ಜೀರ್ಣ ಆಗಲ್ಲ. ಹೀಗಾಗಿ ಸಂಘಟನೆ ವಿರುದ್ಧ ವೃಥಾ ಆರೋಪ ಮಾಡುತ್ತಿದ್ದಾರೆ. ಅವರು ಸ್ವರ್ಗಕ್ಕೆ ಹೋಗಲಿ ಎಂಬುದು ನಮ್ಮ ಆಸೆ ಎಂದು ಲೇವಡಿ ಮಾಡಿದರು.

ವಿರೋಧ ಪಕ್ಷ ಇರಬೇಕು ಎಂಬುದು ನಮಗೂ ಆಸೆ. ನಿಮ್ಮ ಎಂಎಲ್‌ಎಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಆಗದಿದ್ದರೆ ನಾವೇನು ಮಾಡುವುದು. ತಮ್ಮ ಶಾಸಕರನ್ನು ಶಿಸ್ತುಬದ್ಧವಾಗಿ, ವಿಶ್ವಾಸದಿಂದ ಇಟ್ಟುಕೊಂಡರೆ, ಸ್ವಾತಂತ್ರ್ಯ ಕೊಟ್ಟರೆ ಅವರೇಕೆ ಬಿಟ್ಟು ಹೋಗುತ್ತಾರೆ. ಮಹಾರಾಷ್ಟ್ರದಲ್ಲಿ ಶಾಸಕರಿಗೆ ಮುಖ್ಯಮಂತ್ರಿ ಭೇಟಿಗೆ ಅವಕಾಶವೇ ಇರಲಿಲ್ಲ. ಬಿಜೆಪಿಯಲ್ಲಿ ಆ ಪ್ರಶ್ನೆಯೇ ಇಲ್ಲ. ಇಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ಎಲ್ಲರೊಂದಿಗೂ ಮುಕ್ತವಾಗಿ ಮಾತನಾಡಲು ಅವಕಾಶವಿದೆ. ಮೋದಿ ಅವರಂಥ ಒಳ್ಳೆಯ ನಾಯಕರು ಇದ್ದಾರೆ. ಹೀಗಾಗಿ ಬೇರೆ ಪಕ್ಷಗಳ ಶಾಸಕರು ಬಿಜೆಪಿಗೆ ಬರುತ್ತಾರೆ ಎಂದು ಮಹಾರಾಷ್ಟ್ರದಲ್ಲಿನ ಬೆಳವಣಿಗೆಗಳನ್ನು ಈಶ್ವರಪ್ಪ ಸಮರ್ಥಿಸಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು