5:12 PM Saturday21 - September 2024
ಬ್ರೇಕಿಂಗ್ ನ್ಯೂಸ್
ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ

ಇತ್ತೀಚಿನ ಸುದ್ದಿ

ಆರೆಸ್ಸೆಸ್‌ ಬೈಯುವ ಸಿದ್ದರಾಮಯ್ಯರ ಚಾಳಿ ಈಗ ಕುಮಾರಸ್ವಾಮಿಗೆ ಬಂದಿದೆ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ

27/06/2022, 19:10

ಬೆಂಗಳೂರು(reporterkarnataka.com): ಆರ್‌ಎಸ್‌ಎಸ್‌ ಬೈಯ್ಯೋದು ಮಾಜಿ ಮುಖ್ಯಮಂತ್ರಿ
ಸಿದ್ದರಾಮಯ್ಯರ ಕೆಟ್ಟಚಾಳಿ ಆಗಿತ್ತು. ಈಗ ಅದು ಕುಮಾರಸ್ವಾಮಿಗೂ ಬಂದಿದೆ. ಆರ್‌ಎಸ್‌ಎಸ್‌ ಬೈದರೆ ಸತ್ತ ಮೇಲೆ ಸ್ವರ್ಗಕ್ಕೆ ಹೋಗಬಹುದು ಎಂದು ಕುಮಾರಸ್ವಾಮಿ ತಿಳಿದಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಕುಟುಕಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರಗಳ ರಚನೆಗೆ ಆರ್‌ಎಸ್‌ಎಸ್‌ ಪರ್ಸೆಂಟೇಜ್‌ ರೂಪದಲ್ಲಿ ಹಣ ಸಂಗ್ರಹಿಸುತ್ತಿದೆ ಎಂದು ಎಚ್‌.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಆರ್‌ಎಸ್‌ಎಸ್‌ಗೆ ಬೈಯ್ಯದಿದ್ದರೆ ಅವರಿಗೆ ತಿಂದ ಅನ್ನ ಜೀರ್ಣ ಆಗಲ್ಲ. ಹೀಗಾಗಿ ಸಂಘಟನೆ ವಿರುದ್ಧ ವೃಥಾ ಆರೋಪ ಮಾಡುತ್ತಿದ್ದಾರೆ. ಅವರು ಸ್ವರ್ಗಕ್ಕೆ ಹೋಗಲಿ ಎಂಬುದು ನಮ್ಮ ಆಸೆ ಎಂದು ಲೇವಡಿ ಮಾಡಿದರು.

ವಿರೋಧ ಪಕ್ಷ ಇರಬೇಕು ಎಂಬುದು ನಮಗೂ ಆಸೆ. ನಿಮ್ಮ ಎಂಎಲ್‌ಎಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಆಗದಿದ್ದರೆ ನಾವೇನು ಮಾಡುವುದು. ತಮ್ಮ ಶಾಸಕರನ್ನು ಶಿಸ್ತುಬದ್ಧವಾಗಿ, ವಿಶ್ವಾಸದಿಂದ ಇಟ್ಟುಕೊಂಡರೆ, ಸ್ವಾತಂತ್ರ್ಯ ಕೊಟ್ಟರೆ ಅವರೇಕೆ ಬಿಟ್ಟು ಹೋಗುತ್ತಾರೆ. ಮಹಾರಾಷ್ಟ್ರದಲ್ಲಿ ಶಾಸಕರಿಗೆ ಮುಖ್ಯಮಂತ್ರಿ ಭೇಟಿಗೆ ಅವಕಾಶವೇ ಇರಲಿಲ್ಲ. ಬಿಜೆಪಿಯಲ್ಲಿ ಆ ಪ್ರಶ್ನೆಯೇ ಇಲ್ಲ. ಇಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ಎಲ್ಲರೊಂದಿಗೂ ಮುಕ್ತವಾಗಿ ಮಾತನಾಡಲು ಅವಕಾಶವಿದೆ. ಮೋದಿ ಅವರಂಥ ಒಳ್ಳೆಯ ನಾಯಕರು ಇದ್ದಾರೆ. ಹೀಗಾಗಿ ಬೇರೆ ಪಕ್ಷಗಳ ಶಾಸಕರು ಬಿಜೆಪಿಗೆ ಬರುತ್ತಾರೆ ಎಂದು ಮಹಾರಾಷ್ಟ್ರದಲ್ಲಿನ ಬೆಳವಣಿಗೆಗಳನ್ನು ಈಶ್ವರಪ್ಪ ಸಮರ್ಥಿಸಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು