2:12 AM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಆರೆಸ್ಸೆಸ್‌ ಬೈಯುವ ಸಿದ್ದರಾಮಯ್ಯರ ಚಾಳಿ ಈಗ ಕುಮಾರಸ್ವಾಮಿಗೆ ಬಂದಿದೆ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ

27/06/2022, 19:10

ಬೆಂಗಳೂರು(reporterkarnataka.com): ಆರ್‌ಎಸ್‌ಎಸ್‌ ಬೈಯ್ಯೋದು ಮಾಜಿ ಮುಖ್ಯಮಂತ್ರಿ
ಸಿದ್ದರಾಮಯ್ಯರ ಕೆಟ್ಟಚಾಳಿ ಆಗಿತ್ತು. ಈಗ ಅದು ಕುಮಾರಸ್ವಾಮಿಗೂ ಬಂದಿದೆ. ಆರ್‌ಎಸ್‌ಎಸ್‌ ಬೈದರೆ ಸತ್ತ ಮೇಲೆ ಸ್ವರ್ಗಕ್ಕೆ ಹೋಗಬಹುದು ಎಂದು ಕುಮಾರಸ್ವಾಮಿ ತಿಳಿದಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಕುಟುಕಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರಗಳ ರಚನೆಗೆ ಆರ್‌ಎಸ್‌ಎಸ್‌ ಪರ್ಸೆಂಟೇಜ್‌ ರೂಪದಲ್ಲಿ ಹಣ ಸಂಗ್ರಹಿಸುತ್ತಿದೆ ಎಂದು ಎಚ್‌.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಆರ್‌ಎಸ್‌ಎಸ್‌ಗೆ ಬೈಯ್ಯದಿದ್ದರೆ ಅವರಿಗೆ ತಿಂದ ಅನ್ನ ಜೀರ್ಣ ಆಗಲ್ಲ. ಹೀಗಾಗಿ ಸಂಘಟನೆ ವಿರುದ್ಧ ವೃಥಾ ಆರೋಪ ಮಾಡುತ್ತಿದ್ದಾರೆ. ಅವರು ಸ್ವರ್ಗಕ್ಕೆ ಹೋಗಲಿ ಎಂಬುದು ನಮ್ಮ ಆಸೆ ಎಂದು ಲೇವಡಿ ಮಾಡಿದರು.

ವಿರೋಧ ಪಕ್ಷ ಇರಬೇಕು ಎಂಬುದು ನಮಗೂ ಆಸೆ. ನಿಮ್ಮ ಎಂಎಲ್‌ಎಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಆಗದಿದ್ದರೆ ನಾವೇನು ಮಾಡುವುದು. ತಮ್ಮ ಶಾಸಕರನ್ನು ಶಿಸ್ತುಬದ್ಧವಾಗಿ, ವಿಶ್ವಾಸದಿಂದ ಇಟ್ಟುಕೊಂಡರೆ, ಸ್ವಾತಂತ್ರ್ಯ ಕೊಟ್ಟರೆ ಅವರೇಕೆ ಬಿಟ್ಟು ಹೋಗುತ್ತಾರೆ. ಮಹಾರಾಷ್ಟ್ರದಲ್ಲಿ ಶಾಸಕರಿಗೆ ಮುಖ್ಯಮಂತ್ರಿ ಭೇಟಿಗೆ ಅವಕಾಶವೇ ಇರಲಿಲ್ಲ. ಬಿಜೆಪಿಯಲ್ಲಿ ಆ ಪ್ರಶ್ನೆಯೇ ಇಲ್ಲ. ಇಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ಎಲ್ಲರೊಂದಿಗೂ ಮುಕ್ತವಾಗಿ ಮಾತನಾಡಲು ಅವಕಾಶವಿದೆ. ಮೋದಿ ಅವರಂಥ ಒಳ್ಳೆಯ ನಾಯಕರು ಇದ್ದಾರೆ. ಹೀಗಾಗಿ ಬೇರೆ ಪಕ್ಷಗಳ ಶಾಸಕರು ಬಿಜೆಪಿಗೆ ಬರುತ್ತಾರೆ ಎಂದು ಮಹಾರಾಷ್ಟ್ರದಲ್ಲಿನ ಬೆಳವಣಿಗೆಗಳನ್ನು ಈಶ್ವರಪ್ಪ ಸಮರ್ಥಿಸಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು