7:40 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಸಾದ್ ಸೈಮಾಚೊ: ಕಾವ್ಯ ಮತ್ತು ಕಥಾ ಪ್ರಸ್ತುತಿಯ ವಿಭಿನ್ನ ಪ್ರಯೋಗ

11/08/2023, 21:31

ಮಂಗಳೂರು(reporterkarnataka.com): ಕವಿತಾ ಟ್ರಸ್ಟ್ ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರದಲ್ಲಿ `ಸಾದ್ ಸೈಮಾಚೊ’ (ಪ್ರಕೃತಿಯ ನಾದಗಳು) ಎಂಬ ಕಾವ್ಯ ಮತ್ತು ಕಥಾ ಪ್ರಸ್ತುತಿಯ ವಿಭಿನ್ನ ಪ್ರಯೋಗವನ್ನು ಕೊಂಕಣಿ ಭಾಷೆ ಮತ್ತು ಸಂಸ್ಕೃತಿ ಪ್ರತಿಷ್ಠಾನದ ಸಹಕಾರದಲ್ಲಿ ಆಗಸ್ಟ್ 6ರಂದು ನಡೆಸಿತು. ಗೋವಾದ ಢಾಯಿ ಆಖಾರ್ (ಎರಡುವರೆ ಅಕ್ಷರ) ತಂಡವು ಪ್ರಕೃತಿಯ ದನಿಗಳಿಗೆ ಸಂಬಂಧಪಟ್ಟ ಹಿಂದಿ ಮತ್ತು ಕೊಂಕಣಿಯ ಸಾಹಿತ್ಯವನ್ನು ಸಾದರಪಡಿಸಿದರು.

ಕೇದಾರ್‌ನಾಥ್ ಸಿಂಗ್ ಇವರ ’ಬಾಘ್’, ಸಲೀಲ್ ಚತುರ್ವೇದಿಯ ’ಕಹಾಂ ಗಯೀ ಓ ನದೀ ಕೀ ಧಾರ್’ ಮತ್ತು ಜಾರ್ಕಂಡಿನ ಜಾಸಿಂತಾ ಕೆರ್ಕಟ್ಟಾ ಇವರ ’ನದೀ, ಪಹಾಡ್ ಔರ್ ಬಜಾರ್’ – ಹಿಂದಿ ಕವಿತೆಗಳನ್ನು ಹಾಗೂ ಮಮತಾ ವೆರ್ಲೇಕರ್ ಇವರ ’ಗುಪೀತ್’, ’ಫೊಂಡ್ಕುಲಾಂ’ ಮತ್ತು ಪ್ರಕಾಶ್ ಪರಿಯೆಂಕಾರ್ ಇವರ ’ಪಾಣಿ ಆತಾಂ ದೆಂವ್ತಾ’ ಹಾಗೂ ’ಹಿ ರಾನ್‌ಕಾಣಿ’ ಕವಿತೆಗಳನ್ನು ಪ್ರಸ್ತುತಪಡಿಸಿದರು.
ಜ್ಞಾನಪೀಠ ಪುರಸ್ಕಾರ ವಿಜೇತ ಸಾಹಿತಿ ದಾಮೋದರ ಮಾವ್ಜೊ ಇವರ ಕತೆ ’ಭುರ್ಗಿಂ ಮುಗೆಲಿಂ ತಿಂ’ ವಿಷಯ ಮತ್ತು ಪ್ರಸ್ತುತಿಯ ಕಾರಣಕ್ಕಾಗಿ ನೆರೆದ ಕೇಳುಗರ ಕಣ್ಣಲ್ಲಿ ನೀರೂರಿಸಿತು. ಡಾ. ರಮಿತಾ ಗುರವ್, ಡಾ. ಮನೀಷಾ ಖೊರಾಟೆ ಮತ್ತು ಮಮತಾ ವೆರ್ಲೆಕಾರ್ ಸುಂದರವಾಗಿ ಇವನ್ನು ವಾಚಿಸಿದರು. ಆರ್ತಿ ದಾಸ್ ಮತ್ತು ನಿಯತಿ ಪತ್ರೆ ಸಾಹಿತ್ಯ ಮತ್ತು ಸಾಹಿತಿಗಳ ಹಿನ್ನಲೆ ವಿವರಿಸಿದರು.
ಪ್ರತಿಷ್ಟಾನದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗುರು ಬಾಳಿಗಾ ಢಾಯಿ ಆಖಾರ್ ಸದಸ್ಯರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಕವಿತಾ ಟ್ರಸ್ಟ್ ಟ್ರಸ್ಟಿಗಳಾದ ವಿಲಿಯಮ್ ಪಾಯ್ಸ್ ಸ್ವಾಗತಿಸಿ, ವಿಕ್ಟರ್ ಮತಾಯಸ್ ವಂದಿಸಿದರು.
ನಂತರ ಸಾಹಿತ್ಯ ಅಕಾಡೆಮಿ ನವದೆಹಲಿ, ಕವಿತಾ ಟ್ರಸ್ಟ್ ಸಹಕಾರದಲ್ಲಿ ಆಯೋಜಿಸಿದ `ಲೋಕ: ವಿವಿಧ ಸ್ವರಗಳು’ ಎಂಬ ಜಾನಪದ ಕಾರ್ಯಕ್ರಮ ನಡೆಯಿತು. ನವ ಸಿದ್ದಿ ಕಲಾ ತಂಡ ಮೈನಳ್ಳಿ ಇವರಿಂದ ಡಮಾಮ್, ಫುಗ್ಡಿ, ಜಾಕಯ್ ಮತ್ತು ಶಿಗ್ಮೊ ಆಟಗಳ ಪ್ರಸ್ತುತಿ ನಡೆಯಿತು. ಕಲಾವಿದ ಸುನೀಲ್ ಸಿದ್ದಿ ಈ ಪ್ರಕಾರಗಳ ವಿವರಣೆ ನೀಡಿದರು. ಅಕಾಡೆಮಿಯ ಕೊಂಕಣಿ ಸಲಹಾ ಸಮಿತಿಯ ಅಧ್ಯಕ್ಷ ಮೆಲ್ವಿನ್ ರೊಡ್ರಿಗಸ್ ಕಲಾವಿದರನ್ನು ಗೌರವಿಸಿದರು. ಸದಸ್ಯಾ ಎಚ್ಚೆಮ್ ಪೆರ್ನಾಳ್ ಸ್ವಾಗತಿಸಿದರು. ಇನ್ನೋರ್ವ ಸದಸ್ಯ ಸ್ಟ್ಯಾನಿ ಬೇಳ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು